Homeಮುಖಪುಟಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ರಾಹುಲ್ ಭೇಟಿ; ವಿವಿಧ ಸಮುದಾಯಗಳೊಂದಿಗೆ ಸಂವಾದ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಾಳೆ ರಾಹುಲ್ ಭೇಟಿ; ವಿವಿಧ ಸಮುದಾಯಗಳೊಂದಿಗೆ ಸಂವಾದ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29 ಮತ್ತು 30ರಂದು ಹಿಂಸಾಚಾರದಿಂದ ಕೂಡಿರುವ ಮಣಿಪುರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷ ಮಂಗಳವಾರ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ”ರಾಹುಲ್ ಗಾಂಧಿ ಅವರು ಮಣಿಪುರ ಭೇಟಿಯ ಸಮಯದಲ್ಲಿ ಅವರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಇಂಫಾಲ್ ಮತ್ತು ಚುರಾಚಂದಪುರದಲ್ಲಿ ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

”ಮಣಿಪುರವು ಸುಮಾರು ಎರಡು ತಿಂಗಳುಗಳಿಂದ ಹೊತ್ತಿ ಉರಿಯುತ್ತಿದೆ. ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಬೇಕಿದೆ. ಅದಕ್ಕೆ ಸಂತೈಸುವ ಸ್ಪರ್ಶ ಬೇಕಿದೆ. ಆ ಮೂಲಕ ಗಾಯವನ್ನು ಗುಣಪಡಿಸುವ ಅಗತ್ಯವಿದೆ. ಇದು ಮಾನವೀಯ ದುರಂತವಾಗಿದೆ. ದ್ವೇಷವಲ್ಲವನ್ನಲ್ಲ, ಪ್ರೀತಿಯನ್ನು ಶಕ್ತಿಯನ್ನಾಗಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದಿಂದ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಸಮುದಾಯದವರು ಒಗ್ಗಟ್ಟಿನ ಮೆರವಣಿಗೆ’ಯ ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದವು.

ಈ ಜನಾಂಗೀಯ ಹಿಂಸಾಚಾರದಿಂದ ರಾಜ್ಯ ಅಕ್ಷರಶಃ ತತ್ತರಿಸಿಹೋಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ, ಒಂದೇ ಒಂದು ಮಾತು ಕೂಡ ಆಡುತ್ತಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯದಲ್ಲಿ ಎನ್ ಬಿರೇನ್ ಸಿಂಗ್ ನೇತೃತ್ವದ-ಬಿಜೆಪಿ ಸರ್ಕಾರದಿಂದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂಬ ಟೀಕೆಗೆ ಗುರಿಯಾಗಿವೆ.

”ರಾಜ್ಯ ಸರ್ಕಾರವು ತನ್ನ ನೌಕರರಿಗೆ ” ನೋ ವರ್ಕ್, ನೋ ಪೇ” ನೀತಿಯನ್ನು ಜಾರಿಗೊಳಿಸಿರುವ ನಿರ್ಧಾರವು ಬಲವಂತದ ಶಾಂತಿಯನ್ನು ಸಾಧಿಸುವ “ಭಯೋತ್ಪಾದಕ ತಂತ್ರ”ವಾಗಿದೆ ಎಂದು ಬುಡಕಟ್ಟು ಗುಂಪಿನ ಉನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಂಗಳವಾರ ಹೇಳಿದೆ.

ರಾಜ್ಯದಲ್ಲಿ ಹಿಂಸಾಚಾರದಿಂದಾಗಿ ಅನಧಿಕೃತ ರಜೆಯಲ್ಲಿರುವ ನೌಕರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಸರ್ಕಾರ ತನ್ನ ಎಲ್ಲಾ ಇಲಾಖೆಗಳಿಗೆ ಮಂಗಳವಾರ ಸೂಚಿಸಿದೆ.

”ಅಧಿಕೃತ ರಜೆಯಿಲ್ಲದೆ ತಮ್ಮ ಕರ್ತವ್ಯಕ್ಕೆ ಹಾಜರಾಗದ ಎಲ್ಲಾ ಉದ್ಯೋಗಿಗಳಿಗೆ ಯಾವುದೇ ಕೆಲಸ ಅಥವಾ ವೇತನವನ್ನು ನೀಡಲಾಗುವುದಿಲ್ಲ ಎಂದು ಮಣಿಪುರ ಸರ್ಕಾರ ತನ್ನ ಉದ್ಯೋಗಿಗಳಿಗೆ ತಿಳಿಸಲಾಗಿದೆ” ಎಂದು ಸರ್ಕಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

”ಮಣಿಪುರ ಸರ್ಕಾರದ ಸುಮಾರು ಒಂದು ಲಕ್ಷ ಉದ್ಯೋಗಿಗಳಲ್ಲಿ 65,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಕಿ ಇನ್ಪಿ ಪ್ರಧಾನ ಕಾರ್ಯದರ್ಶಿ ಖೈಖೋಹೌಹ್ ಗಂಗ್ಟೆ ಅವರು ಸಮುದಾಯದ ಜನರು ಇಂಫಾಲ್‌ಗೆ ಹಿಂತಿರುಗಿದರೆ ಅದು ”ಸಾವಿನ ಬಲೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...