Homeಮುಖಪುಟಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

ಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

- Advertisement -
- Advertisement -

ಮದ್ರಾಸ್ ಹೈಕೋರ್ಟಿನ ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆಸ್ತಿ ಮೇಲಿನ ವಿವಾಹಿತ ಮಹಿಳೆಯ ಹಕ್ಕಿನ ಬಗ್ಗೆ ಉಲ್ಲೇಖ ಮಾಡುತ್ತ ಕುಟುಂಬದಲ್ಲಿ ಹೆಂಡತಿಯ ಕೊಡುಗೆಗಳನ್ನು ಗುರುತಿಸುವಂತಹ ಯಾವುದೇ ವಿಧಾನಗಳು ಲಭ್ಯವಿಲ್ಲ ಆದರೆ ನ್ಯಾಯಾಲಯಗಳು ಅದನ್ನು ಗುರುತಿಸಬಹುದು ಎಂದು ಹೇಳುವ ಮೂಲಕ ಮಹಿಳಾ ಸಶಕ್ತೀಕರಣದತ್ತ ಒಂದು ಬಲವಾದ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದುವರೆಗೂ ಆಸ್ತಿ ಮೇಲಿನ ಹೆಣ್ಣುಮಕ್ಕಳ ಹಕ್ಕಿಗೆ ಸಂಬಂಧಿಸಿ ಬಂದಿರುವ ಪ್ರತಿಯೊಂದು ತೀರ್ಪುಗಳು ಕಾಲಕಾಲಕ್ಕೆ ಸಮಾನತೆಯ ಕಡೆಗೆ ಹೆಜ್ಜೆಹಾಕುವ ನಿರ್ದಿಷ್ಟ ಘಟ್ಟಗಳಂತೆ ಕೆಲಸ ಮಾಡಿವೆ, ಆದರೆ ಅನೇಕಬಾರಿ ಕೆಲವೊಂದು ಗೊಂದಲ ಅನಿರ್ದಿಷ್ಟತೆಗಳಿಗೂ ಅವಕಾಶ ಮಾಡಿಕೊಟ್ಟಿದ್ದವು. ತೀರ ಇತ್ತೀಚಿನವರೆಗೂ ಹೆಣ್ಣುಮಕ್ಕಳ ಆಸ್ತಿಯ ಮೇಲಿನ ಹಕ್ಕುಗಳ ಬಗ್ಗೆ ಮಾತನಾಡುವಾಗ ಮಗಳಿಗೆ ತಂದೆಯ ಆಸ್ತಿಯಲ್ಲಿ ಅಥವಾ ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡುಮಕ್ಕಳಿಗೆ ಸಮವಾದ ಹಕ್ಕುಗಳ ಬಗ್ಗೆ ಮಾತ್ರ ಪ್ರಸ್ತಾಪವಾಗುತ್ತಿತ್ತು. ಅದಕ್ಕೆ ಕಾರಣವೂ ಇದೆ; ಅದೇನೆಂದರೆ ತಂದೆಯ ಆಸ್ತಿಯಲ್ಲಿ ಹಕ್ಕು ಪಡೆದ ಮಹಿಳೆ ಅದೇ ಕಾಲಕ್ಕೆ ಇನ್ನೊಬ್ಬರ ಹೆಂಡತಿಯೂ ಆಗಿರುತ್ತಾಳೆ ಎಂಬುದು ವಾದ. ಅಂದರೆ ಒಬ್ಬ ವಿವಾಹಿತ ಹೆಣ್ಣುಮಗಳ ಗಂಡ ತನ್ನ ಪಿತ್ರಾರ್ಜಿತ ಆಸ್ತಿಯನ್ನು ತನ್ನ ಸಹೋದರಿಯರ ಜೊತೆ ಹಂಚಿಕೊಂಡಿರುತ್ತಾನೆ ಎಂಬುದು ಊಹೆ.

ಕೆಲವೊಂದು ಪ್ರಕರಣಗಳಲ್ಲಿ ದಶಕಗಳ ಹಿಂದೆಯೇ ಮದುವೆ ಆಗಿಹೋದ ಹೆಣ್ಣುಮಕ್ಕಳು ವರದಕ್ಷಿಣೆ ರೂಪದಲ್ಲಿ ಗಂಡನಿಗೆ ಅಪಾರ ಹಣ ನೀಡಿದ ನಂತರವೂ, ಹೊಸ ಕಾನೂನಿನ ಅಡಿಯಲ್ಲಿ ತಮ್ಮ ಸಹೋದರರಿಂದ ಸಮಾನ ಅಧಿಕಾರಗಳನ್ನು ಕೇಳಲು ನ್ಯಾಯಾಲಯದ ಮೊರೆ ಹೋದಾಗ ಈ ಹಕ್ಕುಗಳ ವಿರುದ್ಧ ಒಂದು ದೊಡ್ಡ ನೆಗೆಟಿವ್ ಪ್ರಚಾರವೇ ಶುರುವಾದಂತೆ ಇತ್ತು. ಇದು ಕೇವಲ ಈ ಒಂದು ಕಾನೂನಿಗೆ ಮಾತ್ರ ಅಲ್ಲ ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯುವ ಯಾವುದೇ ಹೊಸ ಕಾನೂನು ಬಂದರೂ ಇಂತಹ ಅಪಸ್ವರಗಳು ಸಾಮಾನ್ಯ.

ಈಗ ಒಂದು ವಿಶ್ಲೇಷಣಾತ್ಮಕ ದೃಷ್ಟಿಕೋನದಿಂದ ಇದನ್ನು ನೋಡಲು ಪ್ರಯತ್ನಿಸೋಣ. ಹಿಂದೂ ವಾರಸುದಾರ ಕಾಯ್ದೆ ಜಾರಿಯಾದಾಗಿನಿಂದ (1956) ಇಲ್ಲಿಯವರೆಗೂ ಪಿತ್ರಾರ್ಜಿತ ಆಸ್ತಿಗಳು ಭಾಗವಾಗದೇ ಇರುವ ಸಾಧ್ಯತೆಗಳು ಎಷ್ಟಿರುತ್ತವೆ? ಏಕೆಂದರೆ ಈಗಾಗಲೇ ವಿಭಾಗವಾಗಿರುವ ಆಸ್ತಿಗಳಿಗೆ ಇದು ಅನ್ವಯವಾಗುವುದಿಲ್ಲ. ಅಂದರೆ ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ಎಂದು ಕಾಯ್ದೆ ಬಂದಾಗ ಆ ಮಹಿಳೆಯ ಕುಟುಂಬಕ್ಕೆ ಸಂಬಂಧಿಸಿದ ಪಿತ್ರಾರ್ಜಿತ ಆಸ್ತಿ ವಿಭಾಗ ಆಗದೇ ಇದ್ದ ಪಕ್ಷದಲ್ಲಿ ಮಾತ್ರ ಅವಳಿಗೆ ಹಕ್ಕು ಸಿಗುತ್ತಿತ್ತು. ಇಂತಹ ಒಂದು ಅವಕಾಶವನ್ನು ತಪ್ಪಿಸಲು ಬಾಯಿಮಾತಿನ ವಿಭಾಗ ಅಥವಾ ನೋಂದಣಿ ಆಗದ ಹಳೆಯ ದಿನಾಂಕದ ಕರಾರುಪತ್ರಗಳನ್ನು ಎಷ್ಟೋ ಜನ ಸೃಷ್ಟಿಸಿದರು. ಅದಕ್ಕೆಂದೇ ನ್ಯಾಯಾಲಯ ಮತ್ತೆ ಮಧ್ಯಪ್ರವೇಶಿಸಿ ಈ ತರಹದ ವಿಭಾಗ ಪತ್ರಗಳಿಗೆ ಮಾನ್ಯತೆಯನ್ನು ನೀಡಲಿಲ್ಲ. ಇನ್ನು ಕೆಲವೊಂದು ಪ್ರದೇಶಗಳಲ್ಲಿ ಹೆಣ್ಣುಮಕ್ಕಳನ್ನು ಮದುವೆ ಮಾಡಿ ಕಳಿಸುವ ಮೊದಲು ಆಸ್ತಿ ಹಕ್ಕು ಬಿಡುಗಡೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಭಾರತದಂತಹ ಸಾಂಪ್ರದಾಯಿಕ ಸಮಾಜದಲ್ಲಿ ಮದುವೆಯಾಗಿ ಇನ್ನೂ ತಂದೆ ತಾಯಿ ಹಾಗೂ ಸಹೋದರರನ್ನೇ ನಂಬಿರುವ ಹೆಣ್ಣುಮಕ್ಕಳು ಸಹಿ ಹಾಕುವುದಿಲ್ಲ ಎಂದು ಹೇಳುವ ಸಾಧ್ಯತೆಗಳು ಎಷ್ಟಿವೆ? ಇನ್ನು ವರದಕ್ಷಿಣೆ ಎನ್ನುವುದು ಗಂಡನಿಗೆ ಸಲ್ಲುವಂಥದ್ದು, ಅದರಿಂದ ಆ ಹೆಣ್ಣುಮಕ್ಕಳಿಗೆ ಏನು ಲಾಭ? ಈ ಎಲ್ಲ ಹಿನ್ನೆಲೆಗಳಲ್ಲಿ ಆಸ್ತಿಯ ಸಮಾನ ಹಕ್ಕಿನ ಲಾಭ ಪಡೆದ ಹೆಂಗಸರು ಎಷ್ಟಿರಬಹುದು ಎಂದು ನೋಡಿದಾಗ ವಸ್ತುಸ್ಥಿತಿ ನಿರಾಶಾದಾಯಕವೇ ಆಗಿರುತ್ತದೆ.

ಗಂಡನ ಮನೆಯಲ್ಲಿದ್ದು ಹೊರಗಡೆ ಕೆಲಸ ಮಾಡುವ ಬಹುತೇಕ ಹೆಣ್ಣುಮಕ್ಕಳು ಸಹ ತಮ್ಮ ತಿಂಗಳ ಸಂಬಳವನ್ನು ತಂದು ಗಂಡನ ಕೈಗೇ ಕೊಡುವ ಉದಾಹರಣೆಗಳು ಹೇರಳವಾಗಿವೆ. ಹಣವನ್ನು ಬೇರೆಬೇರೆ ಲಾಭದಾಯಕ ಸ್ಕೀಮ್‌ಗಳಲ್ಲಿ ತೊಡಗಿಸುವ ಕೆಲಸವನ್ನೆಲ್ಲಾ ಗಂಡಸರೇ ಮಾಡುತ್ತಾರೆ. ಹೀಗಿರುವಾಗ ಯಾವುದೇ ಉದ್ಯೋಗ ಮಾಡದೆ ಗೃಹಿಣಿ ಆಗಿದ್ದುಕೊಂಡು ತನ್ನ ಇಡೀ ಜೀವನವನ್ನು ಗಂಡ, ಮನೆ, ಮಕ್ಕಳು ಹಾಗೂ ಅವರ ಅಭಿವೃದ್ಧಿಗಾಗಿ ಶ್ರಮಿಸುವ ಹೆಣ್ಣುಮಕ್ಕಳಿಗೆ ತನ್ನ ಆಪತ್ಕಾಲದಲ್ಲಿ ಯಾರು ಆಸರೆ? ಉದ್ಯೋಗ ತೊರೆದು ಗೃಹಿಣಿ ಆದ ಹೆಣ್ಣುಮಕ್ಕಳಾಗಲೀ ಮೊದಲಿನಿಂದಲೂ ಮನೆ ನೋಡಿಕೊಂಡ ಮಹಿಳೆ ಆಗಲಿ ಅಕಸ್ಮಾತ್ ಮದುವೆ ಆಗಿ ದಶಕಗಳ ನಂತರ ಗಂಡನಿಂದ ದೂರಾಗುವ ಸಂದರ್ಭ ಬಂದರೆ ಕೇವಲ ಆತ ಕೊಡುವ ಜೀವನಾಂಶ ಅಥವಾ ಶಾಶ್ವತ ಪರಿಹಾರದ ರೂಪದಲ್ಲಿ ದೊರೆಯುವ ಮೊತ್ತವಷ್ಟೇ ಅವಳಿಗೆ ಆಧಾರವಾಗಿರುತ್ತಿತ್ತು. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟಿನ ಈ ತೀರ್ಪು ಮಹಿಳಾ ಸ್ವಾಭಿಮಾನದ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಾಗಿದೆ.

ಕೃಷ್ಣನ್ ರಾಮಸ್ವಾಮಿ

ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ತಮ್ಮ ತೀರ್ಪಿನಲ್ಲಿ “ಗಂಡ ಆಸ್ತಿ ಖರೀದಿಸುವುದಕ್ಕೆ ಆತನಿಗೆ ಅನುಕೂಲ ಮಾಡಿಕೊಡುವಲ್ಲಿ ಹೆಂಡತಿ ನಿರ್ವಹಿಸುವ ಪಾತ್ರವನ್ನು ಗುರುತಿಸಲು ನ್ಯಾಯಾಲಯದ ಮೇಲೆ ಯಾವುದೇ ಕಾನೂನಿನ ಪ್ರತಿಬಂಧಗಳು ಇಲ್ಲ ಎಂದು ಹೇಳಿದ್ದಾರೆ. ಮುಂದುವರಿದು ’ಹೆಂಡತಿ ಮನೆಯ ಎಲ್ಲ ಕೆಲಸ ಹಾಗೂ ಜವಾಬ್ದಾರಿಗಳನ್ನು ತಾನೇ ತೆಗೆದುಕೊಂಡು, ಕುಟುಂಬದ ದಿನನಿತ್ಯದ ಜಂಜಾಟಗಳಿಂದ ಅವನನ್ನು ಮುಕ್ತಗೊಳಿಸಿದ್ದರಿಂದ ಆತ ಆರ್ಥಿಕವಾಗಿ ಸಶಕ್ತನಾಗಲು ಮತ್ತು ಆಸ್ತಿ ಹೊಂದಲು ಸಾಧ್ಯವಾಗುತ್ತದೆ; ಹಾಗಿರುವಾಗ ಆತ ಗಳಿಸಿದ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು ಕೊಡುವುದು ಸಮಂಜಸವಾಗಿದೆ’ ಎಂದು ಹೇಳಿದ್ದಾರೆ. ನಿತ್ಯ ಹೊರಗಡೆ ಹೋಗಿ 8 ಗಂಟೆ ಕೆಲಸ ಮಾಡುವ ಗಂಡನ ಜೊತೆ 24 ಗಂಟೆಯೂ ಗೃಹಿಣಿಯಾಗಿ ಜವಬ್ದಾರಿ ನಿರ್ವಹಿಸುವ ಹೆಚ್ಚಿನ ಕೊಡುಗೆಯನ್ನು ನಗಣ್ಯಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಗಂಡ ಸತ್ತಾಗ ಆತನ ಸ್ವಯಾರ್ಜಿತ ಆಸ್ತಿಯಲ್ಲಿ ಹೆಂಡತಿಗೆ ಒಂದು ಭಾಗ ಬರುವ ಕಾನೂನು ಈಗಾಗಲೇ ಇದ್ದರೂ ಈ ತೀರ್ಮಾನ ವಿಶೇಷವಾಗಿ ಕಾಣಲು ಕಾರಣವೆಂದರೆ, ಇಲ್ಲಿ ಹೆಣ್ಣಿನ ಕೊಡುಗೆಯನ್ನು ಮಾನ್ಯಮಾಡಿರುವ ರೀತಿ ಮತ್ತು ವಿಚ್ಚೇದನಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಈ ತೀರ್ಪಿನಿಂದ ಸ್ವಲ್ಪ ಲಾಭ ಆಗಬಹುದು ಎಂಬುದಕ್ಕೆ. ಪ್ರತಿಯೊಂದು ತೀರ್ಪುಗಳು ಆಯಾ ಪ್ರಕರಣಗಳಿಗೆ ಸೂಕ್ತವಾಗುವ ರೀತಿಯಲ್ಲಿ ಬಂದಿರುತ್ತವೆ. ಆದರೆ ಕೆಲವೊಂದು ವಿಶೇಷ ತೀರ್ಪುಗಳು ತಮ್ಮ ವಿಶೇಷ ದೃಷ್ಟಿಕೋನದಿಂದಾಗಿ ವಿಭಿನ್ನವಾಗಿ ನಿಲ್ಲುತ್ತವೆ. ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇಂತಹ ಇನ್ನೂ ಹತ್ತಾರು ತೀರ್ಪುಗಳ ಅಗತ್ಯವಿದೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...