Homeಮುಖಪುಟಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

ಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

- Advertisement -
- Advertisement -

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ. ಸೇತುವೆಯ ವೀಡಿಯೊಗಳು ನೀರಿನ ಸುತ್ತಲಿನ ಸೇತುವೆಯ ಮೇಲೆ ಜನರು ಸಿಕ್ಕಿಬಿದ್ದಿರುವುದನ್ನು ತೋರಿಸುತ್ತದೆ. ಈ ಸೇತುವೆಯು ರಾಘೋಪುರವನ್ನು ವೈಶಾಲಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುತ್ತದೆ ಎಂದು ಸುದ್ದಿ ಸಂಸ್ಥೆ ANI ಯ ವರದಿ ಮಾಡಿದೆ.

ಇದು ತಾತ್ಕಾಲಿಕ ಸೇತುವೆಯಾಗಿದ್ದು ಜೂನ್ 20ರೊಳಗೆ ಈ ಸೇತುವೆಯನ್ನು ತಗೆದುಹಾಕಬೇಕಿತ್ತು, ಆದರೆ ಬಿಹಾರದಲ್ಲಿ ಸುರಿಯುತ್ತಿರುವ ಮಾನ್ಸೂನ್ ಮಳೆಯಿಂದಾಗಿ ಸೆತುವೆ ತಗೆದುಹಾಕುವ ಕೆಲಸವು ವಿಳಂಬವಾಯಿತು ಎಂದು ಸ್ಥಳೀಯ ವರದಿಗಳು ಹೇಳಿವೆ.

ಈ ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದು, ಒಂದೇ ತಿಂಗಳಲ್ಲಿ ಮೂರನೇ ಸೇತುವೆಗೆ ಹಾನಿ ಎಂದು ಪೋಸ್ಟ್‌ ಮಾಡಿದ್ದಾರೆ. ಇನ್ನು ಕೆಲವರು ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 12ನೇ ಸೇತುವೆ ಕುಸಿತ ಹಾಗೂ 2023ರಲ್ಲಿನ ಏಳನೇ ಸೇತುವೆ ಕುಸಿತ ಪ್ರಕರಣ ಇದಾಗಿದೆ.

  • ಜೂನ್ 4ರಂದು ಖಗಾರಿಯಾ ಜಿಲ್ಲೆ ಹಾಗೂ ಭಾಗಲ್ಪುರವನ್ನು ಸಂಪರ್ಕಿಸಬೇಕಿದ್ದ ನಿರ್ಮಾಣ ಹಂತದ ಸೇತುವೆ ಮುರಿದು ಬಿದ್ದಿತ್ತು. ಈ ದುರಂತವು ವಿಡಿಯೋದಲ್ಲಿ ಸೆರೆಯಾಗಿತ್ತು. ಒಬ್ಬ ಸೆಕ್ಯುರಿಟಿ ಗಾರ್ಡ್ ಅವಘಡದಲ್ಲಿ ಮೃತಪಟ್ಟಿದ್ದರು.
  • ಜೂನ್ 23ರಂದು ಕಿಶನ್‌ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಭಾಗವೊಂದು ನೆಲಕಚ್ಚಿದೆ.
  • ಜೂನ್ 28ರಂದು ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ.

2019ರ ನವೆಂಬರ್‌ನಲ್ಲಿಯೇ ಪೂರ್ಣಗೊಳ್ಳಬೇಕಿದ್ದ ಸೇತುವೆ ಕಾಮಗಾರಿ, ಗಡುವು ಮುಗಿದು ನಾಲ್ಕು ವರ್ಷಗಳಾದರೂ ಮುಗಿದಿರಲಿಲ್ಲ. ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ 3.16 ಕಿಮೀ ಉದ್ದದ, ನಾಲ್ಕು ಲೇನ್‌ನ ಈ ಸೇತುವೆ ಕುಸಿದು ಬಿದ್ದಿದ್ದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದ ಬಿಹಾರ ಎಂಜಿನಿಯರಿಂಗ್ ಸೇವೆಗಳ ಸಂಸ್ಥೆ, ರಾಜ್ಯದಲ್ಲಿನ ಎಲ್ಲ ಸೇತುವೆಗಳ ರಚನಾತ್ಮಕ ಪರಿಶೀಲನೆ ಅಗತ್ಯವಿದೆ ಹಾಗೂ ನಿರ್ಮಾಣ ಹಂತದಲ್ಲಿರುವ ಸೇತುವೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದೆ.

ಕಿಶನ್‌ಗಂಜ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

ಶುಕ್ರವಾರ, ಬಿಹಾರದ ಕಿಶನ್‌ಗಂಜ್ ಜಿಲ್ಲೆಯ ಗೋರಿಚಕ್‌ನಲ್ಲಿ 100 ಮೀಟರ್ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಂಡು ನಾಲ್ವರು ಅಧಿಕಾರಿಗಳನ್ನು- ಇಬ್ಬರು ಎಂಜಿನಿಯರ್‌ಗಳು ಮತ್ತು ಇಬ್ಬರು ಯೋಜನಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಿತು.

ರಾಜಧಾನಿ ಪಾಟ್ನಾದಿಂದ ಸುಮಾರು 400 ಕಿಮೀ ದೂರದಲ್ಲಿನ ರಾಷ್ಟ್ರೀಯ ಹೆದ್ದಾರಿ 327ಇ ಯಲ್ಲಿ ಈ ಘಟನೆ ನಡೆದಿದೆ. ಮೆಚಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಒಂದು ಪಿಲ್ಲರ್ ಕುಸಿದಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.

“ಎನ್‌ಎಚ್- 327ಇ ವ್ಯಾಪ್ತಿಯಲ್ಲಿನ ನಿರ್ಮಾಣ ಹಂತದಲ್ಲಿರುವ ಸೇತುವೆಯು ಪೂರ್ಣಗೊಂಡ ನಂತರ ಕಿಶನ್‌ಗಂಜ್ ಮತ್ತು ಕತಿಹಾರ್ ಪಟ್ಟಣಗಳನ್ನು ಸಂಪರ್ಕಿಸುತ್ತಿತ್ತು” ಎಂದು ಅವರು ತಿಳಿಸಿದ್ದಾರೆ.

”ಪ್ರಾಥಮಿಕ ತನಿಖೆಯ ಪ್ರಕಾರ, ಇತ್ತೀಚೆಗೆ ನೇಪಾಳದಿಂದ ಮೀಚಿ ನದಿಯಲ್ಲಿ ಹಠಾತ್ ನೀರಿನ ಹರಿವು ಕಂಡುಬಂದಿದ್ದರಿಂದ ಈ ಸೇತುವೆ ಕುಸಿತ ಕಂಡಿದೆ ಎಂದು ಹೇಳಲಾಗುತ್ತದೆ. ನಿರ್ಮಾಣ ಚಟುವಟಿಕೆಯ ಸಮಯದಲ್ಲಿ ಸಂಪೂರ್ಣ ನದಿಯನ್ನು P2-P3-P4 ಸ್ಪ್ಯಾನ್‌ಗಳ ಮೂಲಕ ಚಾನಲ್ ಮಾಡಲಾಗಿದೆ ಎಂದು ಹೆಚ್ಚಿನ ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ” ಎಂದು ಪ್ರಾದೇಶಿಕ ಅಧಿಕಾರಿ (NHAI) ಅಬ್ದೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...