Homeಕರ್ನಾಟಕಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯದ ಭರವಸೆ ನೀಡಿದ ಸಚಿವ ಜಮೀರ್

ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯದ ಭರವಸೆ ನೀಡಿದ ಸಚಿವ ಜಮೀರ್

- Advertisement -
- Advertisement -

ಬೌದ್ಧ ಧರ್ಮಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎಂದು ಬೌದ್ಧ ಗುರುಗಳ ನಿಯೋಗಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್‌ ಭರವಸೆ ನೀಡಿದ್ದಾರೆ.

ಬೌದ್ಧ ಗುರುಗಳ ನಿಯೋಗವು ಬುಧವಾರ ಸಚಿವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಜಮೀರ್, ‘ಬೌದ್ಧ ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣಪತ್ರ ಮತ್ತು ಮತದಾರರ ಗುರುತಿನ ಚೀಟಿ ಪಡೆಯಲು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

”ಬೌದ್ಧ ಧರ್ಮದ ವಿದ್ಯಾರ್ಥಿಗಳಿಗೆ ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಆರಂಭಿಸಲು ಅನುಮತಿ ದೊರಕಿಸಿಕೊಡಲಾಗುವುದು. ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ಸಮಸ್ಯೆ ಪರಿಹರಿಸಲು ಅನುಕೂಲವಾಗಲಿದೆ. ಒಂದು ವರ್ಷದಲ್ಲಿ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಸಚಿವರು ನಿಯೋಗಕ್ಕೆ ಆಶ್ವಾಸನೆ ನೀಡಿದ್ದಾರೆ.

ಇನ್ನು, ಇದೇ ವೇಳೆ ನಿಯೋಗವು, ಮೈಸೂರಿನ ಮುಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನ ನೀಡಬೇಕು ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೋದ್ದಿ ತಾಶಿ ಲುಮೋ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಬೌದ್ಧ ಗುರುಗಳ ನಿಯೋಗವು ಸಚಿವರಿಗೆ ಟಿಬೆಟಿಯನ್ ಸಾಂಪ್ರದಾಯಿಕ ಗೌರವ ನೀಡಿ ಸನ್ಮಾನಿಸಿತು. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಮಹಾಬೋಧಿ ಸೊಸೈಟಿಗೆ ಭೇಟಿ ನೀಡುವಂತೆ ಆಹ್ವಾನಿಸಿತು. ದಕ್ಷಿಣ ಭಾರತದ ಸೆಂಟ್ರಲ್ ಟಿಬೆಟಿಯನ್ ಆಡಳಿತ ವಿಭಾಗದ ಪ್ರತಿನಿಧಿಗಳು ನಿಯೋಗದಲ್ಲಿದ್ದರು.

ದರ್ಗಾ ಮಸೀದಿಗಳಿಗೆ ಕಾಣಿಕೆ ಸಲ್ಲಿಸಲು ಇ-ಹುಂಡಿ ಸೇವೆ ಆರಂಭ

ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.

ಮಂಗಳವಾರ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬೋರ್ಡ್ ಸಭೆಯಲ್ಲಿ ನೂತನ ಆಪ್‌ಗೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ”ದರ್ಗಾ ಹಾಗೂ ಮಸೀದಿಗಳಿಗೆ ಸಮುದಾಯ ನೀಡುವ ಕಾಣಿಕೆ ಹಾಗೂ ದೇಣಿಗೆ ದುರುಪಯೋಗ ಆಗದಂತೆ ಜತೆಗೆ ನಿಗದಿತ ಉದ್ದೇಶಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಲು ಆಪ್ ಸಿದ್ದಪಡಿಸಲಾಗಿದೆ. ಮೊದಲಿಗೆ ಬೆಂಗಳೂರಿನ ಹಜರತ್ ತವಕ್ಕಲ್ ಮಸ್ತಾನ್ ಶಾ ದರ್ಗಾ ದಲ್ಲಿ ಈ ಹುಂಡಿ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ” ಎಂದು ತಿಳಿಸಿದರು.

”ಈ ಸೇವೆಯು ಮುಂದಿನ ದಿನಗಳಲ್ಲಿ ವಖ್ಫ್ ವ್ಯಾಪ್ತಿಗೆ ಬರುವ 3,131 ದರ್ಗಾ, 10,398 ಮಸೀದಿಗಳಲ್ಲೂ ಜಾರಿಗೊಳಿಸಲಾಗುವುದು. ಸಮುದಾಯ ಎಲ್ಲಿಂದ ಯಾವುದೇ ಸಮಯದಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ದೇಣಿಗೆ, ಕಾಣಿಕೆ ನೀಡಬಹುದಾಗಿದೆ” ಎಂದು ತಿಳಿಸಿದರು.

ವಕ್ಪ್ ಬೋರ್ಡ್‌ನಲ್ಲಿ 45 ಕೋಟಿ ರೂ. ಅನುದಾನ ಲಭ್ಯವಿದ್ದು, ಅದನ್ನು ಶಾಲಾ ಕಾಲೇಜು ಕಟ್ಟಡ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಬಳಕೆ ಮಾಡಲು ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ತ್ವರಿತ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...