Homeಮುಖಪುಟಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

ಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

- Advertisement -
- Advertisement -

ಉಬರ್ ಆಪ್ ಬಳಸಿಕೊಂಡು 800ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರಾಜಿಂದರ್ ಪಾಲ್ ಸಿಂಗ್ ಅಲಿಯಾಸ್ ಜಸ್ಪಾಲ್ ಗಿಲ್ ಎಂಬಾತ ಫೆಬ್ರವರಿಯಲ್ಲಿ ತನ್ನ ತಪ್ಪು ಒಪ್ಪಿಕೊಂಡಿದ್ದನು.ಅವರು ನೂರಾರು ಭಾರತೀಯ ಪ್ರಜೆಗಳಿಗೆ ಕೆನಡಾದಿಂದ ಗಡಿ ದಾಟಲು ಸಹಾಯ ಮಾಡಿದ್ದ, ಈ ಸಮಯದಲ್ಲಿ ನಾಗರಿಕರಿಂದ 500,000 ಯುಎಸ್​ ಡಾಲರ್​ಗಿಂತ ಹೆಚ್ಚು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಭಾರತದಿಂದ ಅಮೇರಿಕಾಕ್ಕೆ ಸಾಗುವ ಕಳ್ಳಸಾಗಾಣಿಕೆ ಮಾರ್ಗದ ಮೂಲಕ ದೇಶಕ್ಕೆ ಮಾತ್ರವಲ್ಲದೆ ಜನರ ಸುರಕ್ಷತೆಗೂ ಅಪಾಯವಿದೆ ಎಂದು ಹಂಗಾಮಿ ಅಟಾರ್ನಿ ಟೆಸ್ಸಾ ಎಂ ಗಾರ್ಮನ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ನಿವಾಸಿಯಾಗಿರುವ ಸಿಂಗ್‌ಗೆ ಅಮೆರಿಕ ಜಿಲ್ಲಾ ನ್ಯಾಯಾಲಯವೊಂದು ಲಾಭಕ್ಕಾಗಿ ಹಾಗೂ ಅಕ್ರಮ ಹಣ ವರ್ಗಾವಣೆ ಎಸಗುವ ಸಂಚಿಗಾಗಿ 45 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

”ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜಿಂದರ್ ಪಾಲ್ ಸಿಂಗ್ 800ಕ್ಕೂ ಅಧಿಕ ಜನರನ್ನು ಅಮೆರಿಕದ ಉತ್ತರ ಗಡಿಯೊಳಗೆ ಹಾಗೂ ವಾಷಿಂಗ್ಟನ್‌ ಒಳಗೆ ಕಳ್ಳಸಾಗಣೆ ಮಾಡಿದ್ದಾನೆ” ಎಂದು ಗಾರ್ಮನ್ ಹೇಳಿದ್ದಾರೆ.

”ಸಿಂಗ್ ಎಸಗಿದ ಕೃತ್ಯವು ಅಮೆರಿಕಕ್ಕೆ ಭದ್ರತಾ ಅಪಾಯ ಉಂಟು ಮಾಡಿರುವುದು ಮಾತ್ರವಲ್ಲದೆ, ಭಾರತದಿಂದ ಅಮೆರಿಕಕ್ಕೆ ಹಲವು ವಾರಗಳ ಕಳ್ಳಸಾಗಣೆ ಮಾರ್ಗದಲ್ಲಿ ಬರುವವರ ಭದ್ರತೆ ಹಾಗೂ ಸುರಕ್ಷತೆಗೆ ಕೂಡ ಅಪಾಯಕಾರಿಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

”ಅಮೆರಿಕದಲ್ಲಿ ಉತ್ತಮ ಜೀವನ ಕಂಡುಕೊಳ್ಳುವ ಆಶಯವಿರುವ ಭಾರತದ ಪ್ರಜೆಗಳ ಮೇಲೆ ಸಂಚು ನಡೆಸಿ ಅವರಿಂದ ಸುಮಾರು 70,000 ಅಮೆರಿಕನ್ ಡಾಲರ್ ವಸೂಲಿ ಮಾಡಿಕೊಂಡು ಕಳ್ಳಸಾಗಣೆ ಮಾಡುವುದರಲ್ಲಿ ಸಿಂಗ್ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ.

ಸಿಯಾಟಲ್ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟುವ ಜನರಿಗೆ ಉಬರ್ ಬಳಸಲಾಗಿದೆ. 2018 ಮತ್ತು 2022 ರ ನಡುವೆ, ಸಿಂಗ್ 600 ಜನರನ್ನು ಕಳ್ಳಸಾಗಣೆ ಮಾಡಿದ್ದನು. ಆರೋಪಿಯ ನಿವಾಸದಿಂದ USD 45,000 ಮತ್ತು ಕೆಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖಾ ತಂಡಗಳ ಅಂದಾಜಿನ ಪ್ರಕಾರ, 2018ರ ಜುಲೈನಿಂದ 2022ರ ಏಪ್ರಿಲ್‌ ನಡುವೆ ಈ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾದ 17 ಉಬರ್ ಖಾತೆಗಳು 80,000 ಡಾಲರ್‌ಗೂ ಅಧಿಕ ಹಣ ವಸೂಲಿ ಮಾಡಿವೆ.  ರಾಜಿಂದರ್ ಸಿಂಗ್ ಕೂಡ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದು, ಜೈಲು ಶಿಕ್ಷೆ ಮುಗಿದ ಬಳಿಕ ಅವರನ್ನು ಗಡಿಪಾರು ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಉಬರ್ ವಾಹನದ ಮೂಲಕ ಸಾಗಣೆ

ಸಿಂಗ್‌ನ ಹಿಂಬಾಲಕರು ಕೆನಡಾ ಮೂಲಕ ಕಳ್ಳಮಾರ್ಗದಿಂದ ಅಮೆರಿಕ ಗಡಿಯೊಳಗೆ ಬಂದ ಭಾರತೀಯ ಪ್ರಜೆಗಳನ್ನು ಗಡಿಯಿಂದ ವಾಷಿಂಗ್ಟನ್ ಹೊರಗೆ ಸಾಗಿಸಲು ಒನ್ ವೇ ಪ್ರಯಾಣಕ್ಕಾಗಿ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಈ ಚಟುವಟಿಕೆಗಳು ಗಡಿ ಭಾಗದಲ್ಲಿ ನಸುಕಿನಲ್ಲಿ ಶುರುವಾಗುತ್ತಿತ್ತು. ಕಳ್ಳಸಾಗಣೆಯನ್ನು ಎರಡು ವಿಭಿನ್ನ ಪ್ರಯಾಣಗಳ ಮೂಲಕ ನಡೆಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ, ದೊಡ್ಡ ವ್ಯಕ್ತಿಗಳ ಸೋಗಿನಲ್ಲಿ ಆತನ ಸಹಚರರು ಕಳ್ಳಸಾಗಣೆ ಕೃತ್ಯ ನಡೆಸುತ್ತಿದ್ದರು. ಸಿಂಗ್ ಬಳಿ 45,000 ಡಾಲರ್ ನಗದು ಹಾಗೂ ನಕಲಿ ಗುರುತು ದಾಖಲೆ ಪತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...