Homeಮುಖಪುಟಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

ಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

- Advertisement -
- Advertisement -

ಉಬರ್ ಆಪ್ ಬಳಸಿಕೊಂಡು 800ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರಾಜಿಂದರ್ ಪಾಲ್ ಸಿಂಗ್ ಅಲಿಯಾಸ್ ಜಸ್ಪಾಲ್ ಗಿಲ್ ಎಂಬಾತ ಫೆಬ್ರವರಿಯಲ್ಲಿ ತನ್ನ ತಪ್ಪು ಒಪ್ಪಿಕೊಂಡಿದ್ದನು.ಅವರು ನೂರಾರು ಭಾರತೀಯ ಪ್ರಜೆಗಳಿಗೆ ಕೆನಡಾದಿಂದ ಗಡಿ ದಾಟಲು ಸಹಾಯ ಮಾಡಿದ್ದ, ಈ ಸಮಯದಲ್ಲಿ ನಾಗರಿಕರಿಂದ 500,000 ಯುಎಸ್​ ಡಾಲರ್​ಗಿಂತ ಹೆಚ್ಚು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಭಾರತದಿಂದ ಅಮೇರಿಕಾಕ್ಕೆ ಸಾಗುವ ಕಳ್ಳಸಾಗಾಣಿಕೆ ಮಾರ್ಗದ ಮೂಲಕ ದೇಶಕ್ಕೆ ಮಾತ್ರವಲ್ಲದೆ ಜನರ ಸುರಕ್ಷತೆಗೂ ಅಪಾಯವಿದೆ ಎಂದು ಹಂಗಾಮಿ ಅಟಾರ್ನಿ ಟೆಸ್ಸಾ ಎಂ ಗಾರ್ಮನ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ನಿವಾಸಿಯಾಗಿರುವ ಸಿಂಗ್‌ಗೆ ಅಮೆರಿಕ ಜಿಲ್ಲಾ ನ್ಯಾಯಾಲಯವೊಂದು ಲಾಭಕ್ಕಾಗಿ ಹಾಗೂ ಅಕ್ರಮ ಹಣ ವರ್ಗಾವಣೆ ಎಸಗುವ ಸಂಚಿಗಾಗಿ 45 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

”ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜಿಂದರ್ ಪಾಲ್ ಸಿಂಗ್ 800ಕ್ಕೂ ಅಧಿಕ ಜನರನ್ನು ಅಮೆರಿಕದ ಉತ್ತರ ಗಡಿಯೊಳಗೆ ಹಾಗೂ ವಾಷಿಂಗ್ಟನ್‌ ಒಳಗೆ ಕಳ್ಳಸಾಗಣೆ ಮಾಡಿದ್ದಾನೆ” ಎಂದು ಗಾರ್ಮನ್ ಹೇಳಿದ್ದಾರೆ.

”ಸಿಂಗ್ ಎಸಗಿದ ಕೃತ್ಯವು ಅಮೆರಿಕಕ್ಕೆ ಭದ್ರತಾ ಅಪಾಯ ಉಂಟು ಮಾಡಿರುವುದು ಮಾತ್ರವಲ್ಲದೆ, ಭಾರತದಿಂದ ಅಮೆರಿಕಕ್ಕೆ ಹಲವು ವಾರಗಳ ಕಳ್ಳಸಾಗಣೆ ಮಾರ್ಗದಲ್ಲಿ ಬರುವವರ ಭದ್ರತೆ ಹಾಗೂ ಸುರಕ್ಷತೆಗೆ ಕೂಡ ಅಪಾಯಕಾರಿಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

”ಅಮೆರಿಕದಲ್ಲಿ ಉತ್ತಮ ಜೀವನ ಕಂಡುಕೊಳ್ಳುವ ಆಶಯವಿರುವ ಭಾರತದ ಪ್ರಜೆಗಳ ಮೇಲೆ ಸಂಚು ನಡೆಸಿ ಅವರಿಂದ ಸುಮಾರು 70,000 ಅಮೆರಿಕನ್ ಡಾಲರ್ ವಸೂಲಿ ಮಾಡಿಕೊಂಡು ಕಳ್ಳಸಾಗಣೆ ಮಾಡುವುದರಲ್ಲಿ ಸಿಂಗ್ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ.

ಸಿಯಾಟಲ್ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟುವ ಜನರಿಗೆ ಉಬರ್ ಬಳಸಲಾಗಿದೆ. 2018 ಮತ್ತು 2022 ರ ನಡುವೆ, ಸಿಂಗ್ 600 ಜನರನ್ನು ಕಳ್ಳಸಾಗಣೆ ಮಾಡಿದ್ದನು. ಆರೋಪಿಯ ನಿವಾಸದಿಂದ USD 45,000 ಮತ್ತು ಕೆಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖಾ ತಂಡಗಳ ಅಂದಾಜಿನ ಪ್ರಕಾರ, 2018ರ ಜುಲೈನಿಂದ 2022ರ ಏಪ್ರಿಲ್‌ ನಡುವೆ ಈ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾದ 17 ಉಬರ್ ಖಾತೆಗಳು 80,000 ಡಾಲರ್‌ಗೂ ಅಧಿಕ ಹಣ ವಸೂಲಿ ಮಾಡಿವೆ.  ರಾಜಿಂದರ್ ಸಿಂಗ್ ಕೂಡ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದು, ಜೈಲು ಶಿಕ್ಷೆ ಮುಗಿದ ಬಳಿಕ ಅವರನ್ನು ಗಡಿಪಾರು ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಉಬರ್ ವಾಹನದ ಮೂಲಕ ಸಾಗಣೆ

ಸಿಂಗ್‌ನ ಹಿಂಬಾಲಕರು ಕೆನಡಾ ಮೂಲಕ ಕಳ್ಳಮಾರ್ಗದಿಂದ ಅಮೆರಿಕ ಗಡಿಯೊಳಗೆ ಬಂದ ಭಾರತೀಯ ಪ್ರಜೆಗಳನ್ನು ಗಡಿಯಿಂದ ವಾಷಿಂಗ್ಟನ್ ಹೊರಗೆ ಸಾಗಿಸಲು ಒನ್ ವೇ ಪ್ರಯಾಣಕ್ಕಾಗಿ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಈ ಚಟುವಟಿಕೆಗಳು ಗಡಿ ಭಾಗದಲ್ಲಿ ನಸುಕಿನಲ್ಲಿ ಶುರುವಾಗುತ್ತಿತ್ತು. ಕಳ್ಳಸಾಗಣೆಯನ್ನು ಎರಡು ವಿಭಿನ್ನ ಪ್ರಯಾಣಗಳ ಮೂಲಕ ನಡೆಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ, ದೊಡ್ಡ ವ್ಯಕ್ತಿಗಳ ಸೋಗಿನಲ್ಲಿ ಆತನ ಸಹಚರರು ಕಳ್ಳಸಾಗಣೆ ಕೃತ್ಯ ನಡೆಸುತ್ತಿದ್ದರು. ಸಿಂಗ್ ಬಳಿ 45,000 ಡಾಲರ್ ನಗದು ಹಾಗೂ ನಕಲಿ ಗುರುತು ದಾಖಲೆ ಪತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...