Homeಕರ್ನಾಟಕಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್ ತೆರೆಯಲು ಸಿದ್ಧತೆ

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್ ತೆರೆಯಲು ಸಿದ್ಧತೆ

- Advertisement -
- Advertisement -

ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್‌ ಕೆರೆಹಳ್ಳಿ ವಿರುದ್ಧ ರೌಡಿಶೀಟರ್ ತೆರೆಯಲು ನಿರ್ಧರಿಸಿರುವ ಪೊಲೀಸ್ ಇಲಾಖೆಯು ಈ ಕುರಿತು ಪುನೀತ್‌ಗೆ ತಿಳಿವಳಿಕೆಯ ನೋಟಿಸ್‌ ಜಾರಿ ಮಾಡಿದೆ.

ಪುನೀತ್ ಕೆರೆಹಳ್ಳಿ ಗೋರಕ್ಷಣೆ ಹೆಸರಿನಲ್ಲಿ ಕೊಲೆ, ಹಲ್ಲೆ, ಶಾಂತಿಗೆ ಧಕ್ಕೆ, ಜೀವ ಬೆದರಿಕೆ, ದೊಂಬಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅವರ  ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ರಾಮನಗರ ಜಿಲ್ಲೆಯ ಸಾತನೂರು ಠಾಣೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್‌ ಠಾಣೆ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಪುನೀತ್‌ ವಿರುದ್ಧ ರೌಡಿಪಟ್ಟಿ ತೆರೆಯಲು ನಿರ್ಧರಿಸಲಾಗಿದೆ. ಈ ಸಂಬಂಧ ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ಪುನೀತ್‌ಗೆ ನೋಟಿಸ್‌ ನೀಡಿದ್ದಾರೆ.

ಇದ್ರಿಸ್ ಪಾಶ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ತಮ್ಮ ವಿರುದ್ಧ ರೌಡಿಪಟ್ಟಿ ತೆರೆಯಲು ಅನುಮತಿ ಕೋರಿ ಚಾಮರಾಜಪೇಟೆ ಠಾಣೆ ಇನ್‌ಸ್ಪೆಕ್ಟರ್‌ ವರದಿ ಸಲ್ಲಿಸಿದ್ದಾರೆ. ಹಲವು ಅಪರಾಧ ಪ್ರಕರಣಗಳಲ್ಲಿಆರೋಪಿಯಾಗಿರುವ ತಮ್ಮನ್ನು ಏಕೆ ರೌಡಿಪಟ್ಟಿಗೆ ಸೇರಿಸಬಾರದು ಎಂಬುದಕ್ಕೆ ವಿವರಣೆ ಸಲ್ಲಿಸಬಹುದು. ಇಲ್ಲದಿದ್ದರೆ, ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಎಸಿಪಿ ಅವರು ಪುನೀತ್‌ಗೆ ಜಾರಿ ಮಾಡಿರುವ ನೋಟಿಸ್‌ನಲ್ಲಿಉಲ್ಲೇಖಿಸಿದ್ದಾರೆ.

ಯಾರು ಈ ಪುನೀತ್ ಕೆರೆಹಳ್ಳಿ

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕೆ ಬಂದವರಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಒಬ್ಬ. ಕಾರಿನಲ್ಲಿ ಕೂತು ಕಾಂಗ್ರೆಸ್‌ ನಾಯಕರನ್ನು ಏಕವಚನದಲ್ಲಿ ನಿಂದಿಸುತ್ತಾ, ಬಾಯಿಗೆ ಬಂದಂತೆ ಮಾತನಾಡುತ್ತಾ ಪ್ರಚಾರ ಪಡೆದ ಈ ಪುನೀತ್ ಮೂಲತಃ ಹಾಸನ ಜಿಲ್ಲೆಯವನು.

ತಾನು ಹಿಂದುತ್ವ ಬೆಂಬಲಿಗ, ಸಂಘಪರಿವಾರದ ಕಾರ್ಯಕರ್ತ ಎಂದು ಹೇಳಿಕೊಂಡು ಮುಂಚೂಣಿಗೆ ಬಂದ ಈತ ಮಾಡಿದ ಅವಾಂತರಗಳಿಗೆ ಲೆಕ್ಕವಿಲ್ಲ. ಮೊದಮೊದಲು ಕಾರಿನಲ್ಲಿ ಕೂತು ಅರಚುತ್ತಿದ್ದ ಈತ ಆಮೇಲೆ ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಳ್ಳಲು ಆರಂಭಿಸಿದನು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರುತ್ತಾ ಪ್ರಚಾರ ಪಡೆದನು. “ಈತನಿಗೆ ಒಂದಿಷ್ಟು ಮಂದಿ ಗೂಗಲ್ ಪೇ, ಪೋನ್‌ ಪೇ ಮೂಲಕ ಧನಸಹಾಯ ಮಾಡಿ ಪ್ರೋತ್ಸಾಹಿಸಿದ್ದರಿಂದಲೇ ಕೋಮುದ್ವೇಷದ ಮಾತುಗಳನ್ನು ಹೆಚ್ಚಿಸಿಕೊಂಡ” ಎಂಬ ಆರೋಪಗಳಿವೆ.

ವೇಶ್ಯಾವಾಟಿಕೆಯಲ್ಲಿ ಕೆರೆಹಳ್ಳಿ ಹೆಸರು: 2013ರಲ್ಲಿಯೇ ಪುನಿತ್ ಕೆರೆಹಳ್ಳಿಯ ಹೆಸರು ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿದೆ ಎಂಬುದು ಕಳೆದ ವರ್ಷ ಬಯಲಾಗಿತ್ತು. ಭರತ್ ಶೆಟ್ಟಿ ಎಂಬವರೊಂದಿಗೆ ಪುನೀತ್‌ ನಡೆಸಿದ್ದ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು. 2013ರಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದ್ದು, 2016ರಲ್ಲಿ ಹೋರಾಟಕ್ಕೆ ನಾನು ಬಂದಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದ.

ವೇಶ್ಯಾವಾಟಿಕೆಯ ಸಂಬಂಧ ಸುದ್ದಿ ಹರಿದಾಡಿದ್ದಾಗ ಪುನೀತ್‌ಗೆ ಆತನ ಸ್ನೇಹಿತನೊಬ್ಬ ಬುದ್ಧಿವಾದ ಹೇಳಿದ್ದ. ಆದರೆ ಆತನನ್ನೇ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆರೆಹಳ್ಳಿ ವಿರುದ್ಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೇಗೂರು ಕೆರೆಗೆ ಕೋಮುವಾದದ ಬಣ್ಣ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ 2021ರ ಆಗಸ್ಟ್ 11ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಆರೋಪದ ಮೇಲೆ ಪುನಿತ್‌ ಕೆರೆಹಳ್ಳಿ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು. ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಕೋಮುದ್ವೇಷ ಹಬ್ಬಿಸಲು ಯತ್ನ: ಶ್ರೀರಂಗಪಟ್ಟಣದ ಜಾಮಿಯ ಮಸೀದಿ ಮೊದಲ ದೇವಾಲಯವಾಗಿತ್ತು ಎಂದು ವಿವಾದ ಸೃಷ್ಟಿಸಲು ಯತ್ನಿಸಿದವರಲ್ಲಿ ಕೆರೆಹಳ್ಳಿ ಕೂಡ ಒಬ್ಬ. ಇತಿಹಾಸವನ್ನು ಸರಿಯಾಗಿ ತಿಳಿಯದೆ ಗೊಂದಲ ಸೃಷ್ಟಿಸಿ, ಶಾಂತಿಯುತವಾಗಿರುವ ಶ್ರೀರಂಗಪಟ್ಟಣದಲ್ಲಿ ಬೆಂಕಿ ಹಚ್ಚಲು ಕೆರೆಹಳ್ಳಿಯಂತಹ ಫ್ರಿಂಜ್‌ಗಳು ಯತ್ನಿಸಿದ್ದರು.

ಟಿಪ್ಪು ಪ್ಲೆಕ್ಸ್‌ ಹರಿದು ರಾದ್ಧಾಂತ: ಸಂವಿಧಾನ ಬಾಹಿರ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕೆರೆಹಳ್ಳಿ, 2022ರ ಆಗಸ್ಟ್‌ನಲ್ಲಿ ಟಿಪ್ಪು ಪ್ಲೆಕ್ಸ್ ಹರಿದು ರಾದ್ಧಾಂತ ಮಾಡಿದ್ದನು. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಕ್ಕೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ: ಶಾಂತಿಯುತವಾಗಿ ನಡೆಯುತ್ತಿದ್ದ ಹಬ್ಬಗಳಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸಿದವರ ಪೈಕಿ ಪುನೀತ್‌ ಕೆರೆಹಳ್ಳಿಯೂ ಒಬ್ಬ. ಮುಸ್ಲಿಮರ ಬಳಿ ವ್ಯಾಪಾರ ಮಾಡಬೇಡಿ, ಮಾಂಸ ಖರೀದಿ ಮಾಡಬೇಡಿ ಎಂದು ಪ್ರಚಾರ ಮಾಡುತ್ತಾ ಕೋಮುದ್ವೇಷವನ್ನು ಹಬ್ಬಿಸಲು ಯುಗಾದಿ ಸಂದರ್ಭ ಬಂದಾಗಲೆಲ್ಲ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ನಿರಂತರ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಸಾರ್ವಜನಿಕರು ವಿರೋಧವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಗೋರಕ್ಷಣೆ ಹೆಸರಲ್ಲಿ ಹಣ ವಸೂಲಿ ಆರೋಪ: ರಾಷ್ಟ್ರ ರಕ್ಷಣಾ ಪಡೆ ಎಂಬ ಕೂಟವನ್ನು ರಚಿಸಿಕೊಂಡು ಗೋರಕ್ಷಣೆ ಮಾಡುತ್ತೇನೆ ಎಂದು ಸಕ್ರಿಯವಾಗಿರುವ ಕೆರೆಹಳ್ಳಿ ಮತ್ತು ಸಹಚರರು ಹಲವೆಡೆ ಗೋಸಾಗಣೆದಾರರನ್ನು ತಡೆದು ಹಣ ವಸೂಲಿ ಮಾಡಿದ್ದಾರೆ ಎಂಬ ಆರೋಪವಿದೆ. ಹಣ ಕೊಡದವರಿಗೆ ಸ್ಟನ್‌ಗನ್ ಗಳಿಸಿ ಚಿತ್ರಹಿಂಸೆ ನೀಡಿದ್ದನ್ನು ತಾನೇ ವಿಡಿಯೋ ಮಾಡಿ ಹಂಚಿಕೊಂಡಿದ್ದಾನೆ. ಅದೇ ರೀತಿ ಸಾತನೂರು ಪೊಲೀಸ್ ಸ್ಟೇಷನ್ ಬಳಿ ಗೋಸಾಗಾಟ ಮಾಡುತ್ತಿದ್ದ ಇದ್ರಿಸ್ ಪಾಶ ಎಂಬ ಡ್ರೈವರ್‌ಗೆ ಹಣ ನೀಡುವಂತೆ ಒತ್ತಾಯಿಸಿದ್ದ. ಆದರೆ ಇದ್ರೀಸ್ ಪಾಶ ತಾನು ಕಾನೂನುರೀತ್ಯಾ ಹಸುಗಳನ್ನು ಕೊಂಡಿರುವುದಾಗಿ ದಾಖಲೆ ತೋರಿಸಿದ್ದ. ಆಗ ಅವರ ಮೇಲೆ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದರು. ಆನಂತರ ಇದ್ರೀಸ್ ಪಾಶ ಶವವಾಗಿ ಪತ್ತೆಯಾಗಿದ್ದ. ಈ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ಕು ಜನರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...