Homeಕರ್ನಾಟಕಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್ ತೆರೆಯಲು ಸಿದ್ಧತೆ

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್ ತೆರೆಯಲು ಸಿದ್ಧತೆ

- Advertisement -
- Advertisement -

ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್‌ ಕೆರೆಹಳ್ಳಿ ವಿರುದ್ಧ ರೌಡಿಶೀಟರ್ ತೆರೆಯಲು ನಿರ್ಧರಿಸಿರುವ ಪೊಲೀಸ್ ಇಲಾಖೆಯು ಈ ಕುರಿತು ಪುನೀತ್‌ಗೆ ತಿಳಿವಳಿಕೆಯ ನೋಟಿಸ್‌ ಜಾರಿ ಮಾಡಿದೆ.

ಪುನೀತ್ ಕೆರೆಹಳ್ಳಿ ಗೋರಕ್ಷಣೆ ಹೆಸರಿನಲ್ಲಿ ಕೊಲೆ, ಹಲ್ಲೆ, ಶಾಂತಿಗೆ ಧಕ್ಕೆ, ಜೀವ ಬೆದರಿಕೆ, ದೊಂಬಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅವರ  ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ರಾಮನಗರ ಜಿಲ್ಲೆಯ ಸಾತನೂರು ಠಾಣೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್‌ ಠಾಣೆ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಪುನೀತ್‌ ವಿರುದ್ಧ ರೌಡಿಪಟ್ಟಿ ತೆರೆಯಲು ನಿರ್ಧರಿಸಲಾಗಿದೆ. ಈ ಸಂಬಂಧ ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ಪುನೀತ್‌ಗೆ ನೋಟಿಸ್‌ ನೀಡಿದ್ದಾರೆ.

ಇದ್ರಿಸ್ ಪಾಶ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ತಮ್ಮ ವಿರುದ್ಧ ರೌಡಿಪಟ್ಟಿ ತೆರೆಯಲು ಅನುಮತಿ ಕೋರಿ ಚಾಮರಾಜಪೇಟೆ ಠಾಣೆ ಇನ್‌ಸ್ಪೆಕ್ಟರ್‌ ವರದಿ ಸಲ್ಲಿಸಿದ್ದಾರೆ. ಹಲವು ಅಪರಾಧ ಪ್ರಕರಣಗಳಲ್ಲಿಆರೋಪಿಯಾಗಿರುವ ತಮ್ಮನ್ನು ಏಕೆ ರೌಡಿಪಟ್ಟಿಗೆ ಸೇರಿಸಬಾರದು ಎಂಬುದಕ್ಕೆ ವಿವರಣೆ ಸಲ್ಲಿಸಬಹುದು. ಇಲ್ಲದಿದ್ದರೆ, ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಎಸಿಪಿ ಅವರು ಪುನೀತ್‌ಗೆ ಜಾರಿ ಮಾಡಿರುವ ನೋಟಿಸ್‌ನಲ್ಲಿಉಲ್ಲೇಖಿಸಿದ್ದಾರೆ.

ಯಾರು ಈ ಪುನೀತ್ ಕೆರೆಹಳ್ಳಿ

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕೆ ಬಂದವರಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಒಬ್ಬ. ಕಾರಿನಲ್ಲಿ ಕೂತು ಕಾಂಗ್ರೆಸ್‌ ನಾಯಕರನ್ನು ಏಕವಚನದಲ್ಲಿ ನಿಂದಿಸುತ್ತಾ, ಬಾಯಿಗೆ ಬಂದಂತೆ ಮಾತನಾಡುತ್ತಾ ಪ್ರಚಾರ ಪಡೆದ ಈ ಪುನೀತ್ ಮೂಲತಃ ಹಾಸನ ಜಿಲ್ಲೆಯವನು.

ತಾನು ಹಿಂದುತ್ವ ಬೆಂಬಲಿಗ, ಸಂಘಪರಿವಾರದ ಕಾರ್ಯಕರ್ತ ಎಂದು ಹೇಳಿಕೊಂಡು ಮುಂಚೂಣಿಗೆ ಬಂದ ಈತ ಮಾಡಿದ ಅವಾಂತರಗಳಿಗೆ ಲೆಕ್ಕವಿಲ್ಲ. ಮೊದಮೊದಲು ಕಾರಿನಲ್ಲಿ ಕೂತು ಅರಚುತ್ತಿದ್ದ ಈತ ಆಮೇಲೆ ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಳ್ಳಲು ಆರಂಭಿಸಿದನು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರುತ್ತಾ ಪ್ರಚಾರ ಪಡೆದನು. “ಈತನಿಗೆ ಒಂದಿಷ್ಟು ಮಂದಿ ಗೂಗಲ್ ಪೇ, ಪೋನ್‌ ಪೇ ಮೂಲಕ ಧನಸಹಾಯ ಮಾಡಿ ಪ್ರೋತ್ಸಾಹಿಸಿದ್ದರಿಂದಲೇ ಕೋಮುದ್ವೇಷದ ಮಾತುಗಳನ್ನು ಹೆಚ್ಚಿಸಿಕೊಂಡ” ಎಂಬ ಆರೋಪಗಳಿವೆ.

ವೇಶ್ಯಾವಾಟಿಕೆಯಲ್ಲಿ ಕೆರೆಹಳ್ಳಿ ಹೆಸರು: 2013ರಲ್ಲಿಯೇ ಪುನಿತ್ ಕೆರೆಹಳ್ಳಿಯ ಹೆಸರು ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿದೆ ಎಂಬುದು ಕಳೆದ ವರ್ಷ ಬಯಲಾಗಿತ್ತು. ಭರತ್ ಶೆಟ್ಟಿ ಎಂಬವರೊಂದಿಗೆ ಪುನೀತ್‌ ನಡೆಸಿದ್ದ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು. 2013ರಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದ್ದು, 2016ರಲ್ಲಿ ಹೋರಾಟಕ್ಕೆ ನಾನು ಬಂದಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದ.

ವೇಶ್ಯಾವಾಟಿಕೆಯ ಸಂಬಂಧ ಸುದ್ದಿ ಹರಿದಾಡಿದ್ದಾಗ ಪುನೀತ್‌ಗೆ ಆತನ ಸ್ನೇಹಿತನೊಬ್ಬ ಬುದ್ಧಿವಾದ ಹೇಳಿದ್ದ. ಆದರೆ ಆತನನ್ನೇ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆರೆಹಳ್ಳಿ ವಿರುದ್ಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೇಗೂರು ಕೆರೆಗೆ ಕೋಮುವಾದದ ಬಣ್ಣ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ 2021ರ ಆಗಸ್ಟ್ 11ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಆರೋಪದ ಮೇಲೆ ಪುನಿತ್‌ ಕೆರೆಹಳ್ಳಿ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು. ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಕೋಮುದ್ವೇಷ ಹಬ್ಬಿಸಲು ಯತ್ನ: ಶ್ರೀರಂಗಪಟ್ಟಣದ ಜಾಮಿಯ ಮಸೀದಿ ಮೊದಲ ದೇವಾಲಯವಾಗಿತ್ತು ಎಂದು ವಿವಾದ ಸೃಷ್ಟಿಸಲು ಯತ್ನಿಸಿದವರಲ್ಲಿ ಕೆರೆಹಳ್ಳಿ ಕೂಡ ಒಬ್ಬ. ಇತಿಹಾಸವನ್ನು ಸರಿಯಾಗಿ ತಿಳಿಯದೆ ಗೊಂದಲ ಸೃಷ್ಟಿಸಿ, ಶಾಂತಿಯುತವಾಗಿರುವ ಶ್ರೀರಂಗಪಟ್ಟಣದಲ್ಲಿ ಬೆಂಕಿ ಹಚ್ಚಲು ಕೆರೆಹಳ್ಳಿಯಂತಹ ಫ್ರಿಂಜ್‌ಗಳು ಯತ್ನಿಸಿದ್ದರು.

ಟಿಪ್ಪು ಪ್ಲೆಕ್ಸ್‌ ಹರಿದು ರಾದ್ಧಾಂತ: ಸಂವಿಧಾನ ಬಾಹಿರ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕೆರೆಹಳ್ಳಿ, 2022ರ ಆಗಸ್ಟ್‌ನಲ್ಲಿ ಟಿಪ್ಪು ಪ್ಲೆಕ್ಸ್ ಹರಿದು ರಾದ್ಧಾಂತ ಮಾಡಿದ್ದನು. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಕ್ಕೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ: ಶಾಂತಿಯುತವಾಗಿ ನಡೆಯುತ್ತಿದ್ದ ಹಬ್ಬಗಳಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸಿದವರ ಪೈಕಿ ಪುನೀತ್‌ ಕೆರೆಹಳ್ಳಿಯೂ ಒಬ್ಬ. ಮುಸ್ಲಿಮರ ಬಳಿ ವ್ಯಾಪಾರ ಮಾಡಬೇಡಿ, ಮಾಂಸ ಖರೀದಿ ಮಾಡಬೇಡಿ ಎಂದು ಪ್ರಚಾರ ಮಾಡುತ್ತಾ ಕೋಮುದ್ವೇಷವನ್ನು ಹಬ್ಬಿಸಲು ಯುಗಾದಿ ಸಂದರ್ಭ ಬಂದಾಗಲೆಲ್ಲ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ನಿರಂತರ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಸಾರ್ವಜನಿಕರು ವಿರೋಧವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಗೋರಕ್ಷಣೆ ಹೆಸರಲ್ಲಿ ಹಣ ವಸೂಲಿ ಆರೋಪ: ರಾಷ್ಟ್ರ ರಕ್ಷಣಾ ಪಡೆ ಎಂಬ ಕೂಟವನ್ನು ರಚಿಸಿಕೊಂಡು ಗೋರಕ್ಷಣೆ ಮಾಡುತ್ತೇನೆ ಎಂದು ಸಕ್ರಿಯವಾಗಿರುವ ಕೆರೆಹಳ್ಳಿ ಮತ್ತು ಸಹಚರರು ಹಲವೆಡೆ ಗೋಸಾಗಣೆದಾರರನ್ನು ತಡೆದು ಹಣ ವಸೂಲಿ ಮಾಡಿದ್ದಾರೆ ಎಂಬ ಆರೋಪವಿದೆ. ಹಣ ಕೊಡದವರಿಗೆ ಸ್ಟನ್‌ಗನ್ ಗಳಿಸಿ ಚಿತ್ರಹಿಂಸೆ ನೀಡಿದ್ದನ್ನು ತಾನೇ ವಿಡಿಯೋ ಮಾಡಿ ಹಂಚಿಕೊಂಡಿದ್ದಾನೆ. ಅದೇ ರೀತಿ ಸಾತನೂರು ಪೊಲೀಸ್ ಸ್ಟೇಷನ್ ಬಳಿ ಗೋಸಾಗಾಟ ಮಾಡುತ್ತಿದ್ದ ಇದ್ರಿಸ್ ಪಾಶ ಎಂಬ ಡ್ರೈವರ್‌ಗೆ ಹಣ ನೀಡುವಂತೆ ಒತ್ತಾಯಿಸಿದ್ದ. ಆದರೆ ಇದ್ರೀಸ್ ಪಾಶ ತಾನು ಕಾನೂನುರೀತ್ಯಾ ಹಸುಗಳನ್ನು ಕೊಂಡಿರುವುದಾಗಿ ದಾಖಲೆ ತೋರಿಸಿದ್ದ. ಆಗ ಅವರ ಮೇಲೆ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದರು. ಆನಂತರ ಇದ್ರೀಸ್ ಪಾಶ ಶವವಾಗಿ ಪತ್ತೆಯಾಗಿದ್ದ. ಈ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ಕು ಜನರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...