Homeಮುಖಪುಟಸಲಿಂಗ ವಿವಾಹ ನೋಂದಣಿಗೆ ನೇಪಾಳ ಸುಪ್ರೀಂ ಕೋರ್ಟ್ ಆದೇಶ: ಭಾರತದಲ್ಲೂ ಕಾನೂನು ಮಾನ್ಯತೆಗೆ ಒತ್ತಾಯ

ಸಲಿಂಗ ವಿವಾಹ ನೋಂದಣಿಗೆ ನೇಪಾಳ ಸುಪ್ರೀಂ ಕೋರ್ಟ್ ಆದೇಶ: ಭಾರತದಲ್ಲೂ ಕಾನೂನು ಮಾನ್ಯತೆಗೆ ಒತ್ತಾಯ

- Advertisement -
- Advertisement -

ಸಲಿಂಗ ವಿವಾಹವನ್ನು ನೋಂದಣಿ ಮಾಡಿಕೊಳ್ಳಲು ಕಾರ್ಯವಿಧಾನ ರಚಿಸುವಂತೆ ನೇಪಾಳ ಸರ್ಕಾರಕ್ಕೆ ಅಲ್ಲಿಯ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಆದೇಶ ಹೊರಡಿಸಿದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ನ್ಯಾಯಮೂರ್ತಿ ಟಿಲ್ ಪ್ರಸಾದ್ ಶ್ರೇಷ್ಠ ಅವರ ಏಕ ಸದಸ್ಯ ಪೀಠ, ಲೈಂಗಿಕ ಮತ್ತು ಲಿಂಗ ಅಲ್ಪಸಂಖ್ಯಾತ ದಂಪತಿಗಳ ವಿವಾಹ ನೋಂದಾಯಿಸಲು ಅವರು ಬಯಸಿದರೆ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಎಲ್‌ಜಿಬಿಟಿ ಸಮುದಾಯದ ಹಕ್ಕುಗಳಿಗಾಗಿ ಪ್ರತಿಪಾದಿಸುವ ಬ್ಲೂ ಡೈಮಂಡ್ ಸೊಸೈಟಿಯ ಸರ್ಕಾರೇತರ ಸಂಸ್ಥೆಯಾದ ಪಿಂಕಿ ಗುರುಂಗ್ ಅವರು ಸೇರಿದಂತೆ ಏಳು ಜನ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನೇಪಾಳ ಸುಪ್ರೀಂ ಕೋರ್ಟ್, ಈ ಸಂಬಂಧ 15 ದಿನಗಳಲ್ಲಿ ಲಿಖಿತ ಉತ್ತರ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಪ್ರಾಥಮಿಕ ವಿಚಾರಣೆಯ ನಂತರ, ನ್ಯಾಯಮೂರ್ತಿ ಟಿಲ್ ಪ್ರಸಾದ್ ಶ್ರೇಷ್ಠಾ ಅವರ ಏಕ ಪೀಠವು ನೇಪಾಳದ ಸಂವಿಧಾನವು ಯಾವುದೇ ವ್ಯಕ್ತಿಯನ್ನು ಮದುವೆಯಾಗುವ ಸಮಾನತೆ ಹಕ್ಕನ್ನು ಖಾತ್ರಿಪಡಿಸುವುದರಿಂದ ಸಲಿಂಗ ವಿವಾಹಗಳನ್ನು ನೋಂದಾಯಿಸಬೇಕು ಎಂದು ತೀರ್ಮಾನಿಸಿತು.

15 ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹೊರತಾಗಿಯೂ ನೇಪಾಳದ ಕಾನೂನು ಸಲಿಂಗ ವಿವಾಹಕ್ಕೆ ಅಡ್ಡಿಯಾಗಿರುವುದರಿಂದ ತಾವು ರಿಟ್ ಸಲ್ಲಿಸಿದ್ದೇವೆ ಎಂದು ಅರ್ಜಿದಾರರು ಹೇಳಿದ್ದಾರೆ.

ರಾಷ್ಟ್ರೀಯ ನಾಗರಿಕ ಸಂಹಿತೆ 2017 ರ ಷರತ್ತು 69(1) ನೇಪಾಳದ ಸಂವಿಧಾನದ 2015ರ ಕಲಂ 18(1) ರ ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೆ ಮದುವೆಯಾಗುವ ಸ್ವಾತಂತ್ರ್ಯವಿದೆ ಎಂದು ಉಲ್ಲೇಖಿಸುತ್ತದೆ. ಅದರಂತೆ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ನೇಪಾಳದ ಸಂಸತ್ತು ಇನ್ನೂ ವಿವಾಹ ಸಮಾನತೆಯ ಕುರಿತು ಕಾನೂನನ್ನು ಮಾಡಿಲ್ಲವಾದರೂ, ನ್ಯಾಯಾಲಯದ ಆದೇಶವು LGBTQ ಸಮುದಾಯದವರಿಗೆ ತಮ್ಮ ವಿವಾಹವನ್ನು ಕಾನೂನುಬದ್ಧವಾಗಿ ನೋಂದಾಯಿಸಲು ಅನುವು ಮಾಡಿಕೊಟ್ಟಿದೆ.

ನ್ಯಾಯಾಲಯವು ನೇಪಾಳ ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡಿದ್ದು, ಸಲಿಂಗ ವಿವಾಹಗಳಿಗೆ ಸಂಬಂಧಿಸಿದ ಕಾನೂನು ಆಯ್ಕೆಗಳ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದೆ. ಸರ್ಕಾರವು ನೋಟಿಸ್‌ಗೆ ಪ್ರತಿಕ್ರಿಯಿಸಿದ ನಂತರ ಪ್ರಕರಣದ ಅಂತಿಮ ವಿಚಾರಣೆ ಪ್ರಾರಂಭವಾಗುತ್ತದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗುರುಂಗ್, ”ಇದು ನಮ್ಮ ಸಮುದಾಯಕ್ಕೆ ಐತಿಹಾಸಿಕ ತೀರ್ಪು. ನೂರಾರು ದಂಪತಿಗಳು ಇದರಿಂದ ಪ್ರಯೋಜನ ಪಡೆಯುತ್ತಾರೆ” ಎಂದು ಹೇಳಿದರು.

2015 ರಲ್ಲಿ, ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಗಳ ಕುರಿತು ಕಾನೂನನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ನೇಪಾಳ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಟ್ಟಿಲ್ಲ.

ಭಾರತದಲ್ಲೂ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಗೆ ಒತ್ತಾಯ

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಕಳೆದ ತಿಂಗಳು ಭಾರತದ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಆದರೆ ನೇಪಾಳದಲ್ಲಿ ಮಾನ್ಯತೆ ನೀಡಲು ಮುಂದಾಗಿದೆ.

ನರೇಂದ್ರ ಮೋದಿ ಸರ್ಕಾರವು ಅರ್ಜಿಗಳನ್ನು ವಿರೋಧಿಸಿದೆ, ಸಲಿಂಗ ವಿವಾಹಗಳು ಕುಟುಂಬದ ಭಾರತೀಯ ಕಲ್ಪನೆಗೆ ಹೊಂದಿಕೆಯಾಗುವುದಿಲ್ಲ ಮತ್ತು ಅವರ ಕಾನೂನು ಮಾನ್ಯತೆಯ ಬೇಡಿಕೆಗಳು ಸಾಮಾಜಿಕ ಸ್ವೀಕಾರದ ಉದ್ದೇಶಕ್ಕಾಗಿ ನಗರ ಗಣ್ಯರ ದೃಷ್ಟಿಕೋನಗಳನ್ನು ಪ್ರತಿನಿಧಿಸುತ್ತವೆ ಎಂದು ವಾದಿಸಿದರು. ಮದುವೆಗೆ ಸಂಬಂಧಿಸಿದ ಕಾನೂನುಗಳನ್ನು ರಚಿಸುವುದು ಶಾಸಕಾಂಗದ ಹಕ್ಕು ಮತ್ತು ನ್ಯಾಯಾಂಗವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅದು ಪ್ರತಿಪಾದಿಸಿದೆ.

ಇದನ್ನೂ ಓದಿ: ಭಾರತೀಯ ಸಂವಿಧಾನವು ‘ಸಂಪ್ರದಾಯ’ ಮುರಿಯುವಂತಹದ್ದು: ಸಲಿಂಗ ವಿವಾಹ ವಿಚಾರಣೆ ವೇಳೆ ಸುಪ್ರೀಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...