Homeಮುಖಪುಟಸಲಿಂಗ ವಿವಾಹ ನೋಂದಣಿಗೆ ನೇಪಾಳ ಸುಪ್ರೀಂ ಕೋರ್ಟ್ ಆದೇಶ: ಭಾರತದಲ್ಲೂ ಕಾನೂನು ಮಾನ್ಯತೆಗೆ ಒತ್ತಾಯ

ಸಲಿಂಗ ವಿವಾಹ ನೋಂದಣಿಗೆ ನೇಪಾಳ ಸುಪ್ರೀಂ ಕೋರ್ಟ್ ಆದೇಶ: ಭಾರತದಲ್ಲೂ ಕಾನೂನು ಮಾನ್ಯತೆಗೆ ಒತ್ತಾಯ

- Advertisement -
- Advertisement -

ಸಲಿಂಗ ವಿವಾಹವನ್ನು ನೋಂದಣಿ ಮಾಡಿಕೊಳ್ಳಲು ಕಾರ್ಯವಿಧಾನ ರಚಿಸುವಂತೆ ನೇಪಾಳ ಸರ್ಕಾರಕ್ಕೆ ಅಲ್ಲಿಯ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಆದೇಶ ಹೊರಡಿಸಿದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ನ್ಯಾಯಮೂರ್ತಿ ಟಿಲ್ ಪ್ರಸಾದ್ ಶ್ರೇಷ್ಠ ಅವರ ಏಕ ಸದಸ್ಯ ಪೀಠ, ಲೈಂಗಿಕ ಮತ್ತು ಲಿಂಗ ಅಲ್ಪಸಂಖ್ಯಾತ ದಂಪತಿಗಳ ವಿವಾಹ ನೋಂದಾಯಿಸಲು ಅವರು ಬಯಸಿದರೆ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಎಲ್‌ಜಿಬಿಟಿ ಸಮುದಾಯದ ಹಕ್ಕುಗಳಿಗಾಗಿ ಪ್ರತಿಪಾದಿಸುವ ಬ್ಲೂ ಡೈಮಂಡ್ ಸೊಸೈಟಿಯ ಸರ್ಕಾರೇತರ ಸಂಸ್ಥೆಯಾದ ಪಿಂಕಿ ಗುರುಂಗ್ ಅವರು ಸೇರಿದಂತೆ ಏಳು ಜನ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನೇಪಾಳ ಸುಪ್ರೀಂ ಕೋರ್ಟ್, ಈ ಸಂಬಂಧ 15 ದಿನಗಳಲ್ಲಿ ಲಿಖಿತ ಉತ್ತರ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಪ್ರಾಥಮಿಕ ವಿಚಾರಣೆಯ ನಂತರ, ನ್ಯಾಯಮೂರ್ತಿ ಟಿಲ್ ಪ್ರಸಾದ್ ಶ್ರೇಷ್ಠಾ ಅವರ ಏಕ ಪೀಠವು ನೇಪಾಳದ ಸಂವಿಧಾನವು ಯಾವುದೇ ವ್ಯಕ್ತಿಯನ್ನು ಮದುವೆಯಾಗುವ ಸಮಾನತೆ ಹಕ್ಕನ್ನು ಖಾತ್ರಿಪಡಿಸುವುದರಿಂದ ಸಲಿಂಗ ವಿವಾಹಗಳನ್ನು ನೋಂದಾಯಿಸಬೇಕು ಎಂದು ತೀರ್ಮಾನಿಸಿತು.

15 ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹೊರತಾಗಿಯೂ ನೇಪಾಳದ ಕಾನೂನು ಸಲಿಂಗ ವಿವಾಹಕ್ಕೆ ಅಡ್ಡಿಯಾಗಿರುವುದರಿಂದ ತಾವು ರಿಟ್ ಸಲ್ಲಿಸಿದ್ದೇವೆ ಎಂದು ಅರ್ಜಿದಾರರು ಹೇಳಿದ್ದಾರೆ.

ರಾಷ್ಟ್ರೀಯ ನಾಗರಿಕ ಸಂಹಿತೆ 2017 ರ ಷರತ್ತು 69(1) ನೇಪಾಳದ ಸಂವಿಧಾನದ 2015ರ ಕಲಂ 18(1) ರ ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೆ ಮದುವೆಯಾಗುವ ಸ್ವಾತಂತ್ರ್ಯವಿದೆ ಎಂದು ಉಲ್ಲೇಖಿಸುತ್ತದೆ. ಅದರಂತೆ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ನೇಪಾಳದ ಸಂಸತ್ತು ಇನ್ನೂ ವಿವಾಹ ಸಮಾನತೆಯ ಕುರಿತು ಕಾನೂನನ್ನು ಮಾಡಿಲ್ಲವಾದರೂ, ನ್ಯಾಯಾಲಯದ ಆದೇಶವು LGBTQ ಸಮುದಾಯದವರಿಗೆ ತಮ್ಮ ವಿವಾಹವನ್ನು ಕಾನೂನುಬದ್ಧವಾಗಿ ನೋಂದಾಯಿಸಲು ಅನುವು ಮಾಡಿಕೊಟ್ಟಿದೆ.

ನ್ಯಾಯಾಲಯವು ನೇಪಾಳ ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡಿದ್ದು, ಸಲಿಂಗ ವಿವಾಹಗಳಿಗೆ ಸಂಬಂಧಿಸಿದ ಕಾನೂನು ಆಯ್ಕೆಗಳ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದೆ. ಸರ್ಕಾರವು ನೋಟಿಸ್‌ಗೆ ಪ್ರತಿಕ್ರಿಯಿಸಿದ ನಂತರ ಪ್ರಕರಣದ ಅಂತಿಮ ವಿಚಾರಣೆ ಪ್ರಾರಂಭವಾಗುತ್ತದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗುರುಂಗ್, ”ಇದು ನಮ್ಮ ಸಮುದಾಯಕ್ಕೆ ಐತಿಹಾಸಿಕ ತೀರ್ಪು. ನೂರಾರು ದಂಪತಿಗಳು ಇದರಿಂದ ಪ್ರಯೋಜನ ಪಡೆಯುತ್ತಾರೆ” ಎಂದು ಹೇಳಿದರು.

2015 ರಲ್ಲಿ, ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಗಳ ಕುರಿತು ಕಾನೂನನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ನೇಪಾಳ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಟ್ಟಿಲ್ಲ.

ಭಾರತದಲ್ಲೂ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಗೆ ಒತ್ತಾಯ

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಕಳೆದ ತಿಂಗಳು ಭಾರತದ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಆದರೆ ನೇಪಾಳದಲ್ಲಿ ಮಾನ್ಯತೆ ನೀಡಲು ಮುಂದಾಗಿದೆ.

ನರೇಂದ್ರ ಮೋದಿ ಸರ್ಕಾರವು ಅರ್ಜಿಗಳನ್ನು ವಿರೋಧಿಸಿದೆ, ಸಲಿಂಗ ವಿವಾಹಗಳು ಕುಟುಂಬದ ಭಾರತೀಯ ಕಲ್ಪನೆಗೆ ಹೊಂದಿಕೆಯಾಗುವುದಿಲ್ಲ ಮತ್ತು ಅವರ ಕಾನೂನು ಮಾನ್ಯತೆಯ ಬೇಡಿಕೆಗಳು ಸಾಮಾಜಿಕ ಸ್ವೀಕಾರದ ಉದ್ದೇಶಕ್ಕಾಗಿ ನಗರ ಗಣ್ಯರ ದೃಷ್ಟಿಕೋನಗಳನ್ನು ಪ್ರತಿನಿಧಿಸುತ್ತವೆ ಎಂದು ವಾದಿಸಿದರು. ಮದುವೆಗೆ ಸಂಬಂಧಿಸಿದ ಕಾನೂನುಗಳನ್ನು ರಚಿಸುವುದು ಶಾಸಕಾಂಗದ ಹಕ್ಕು ಮತ್ತು ನ್ಯಾಯಾಂಗವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅದು ಪ್ರತಿಪಾದಿಸಿದೆ.

ಇದನ್ನೂ ಓದಿ: ಭಾರತೀಯ ಸಂವಿಧಾನವು ‘ಸಂಪ್ರದಾಯ’ ಮುರಿಯುವಂತಹದ್ದು: ಸಲಿಂಗ ವಿವಾಹ ವಿಚಾರಣೆ ವೇಳೆ ಸುಪ್ರೀಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...