Homeಮುಖಪುಟಇದ್ಯಾವ ಸೀಮೆ ಅರ್ಜಿ? 370ನೇ ವಿಧಿ ರದ್ದು ವಿರೋಧಿಸಿ RSS ವಕೀಲ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ...

ಇದ್ಯಾವ ಸೀಮೆ ಅರ್ಜಿ? 370ನೇ ವಿಧಿ ರದ್ದು ವಿರೋಧಿಸಿ RSS ವಕೀಲ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ತಪರಾಕಿ

- Advertisement -
- Advertisement -

370 ನೇ ವಿಧಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಆರ್.ಎಸ್.ಎಸ್ ನಿಕಟವರ್ತಿ ವಕೀಲ ಮನೋಹರಲಾಲ್ ಶರ್ಮಾಗೆ “ಯಾವ ರೀತಿಯ ಅರ್ಜಿ ಇದು” ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತರಾಟೆಗೆ ತೆಗೆದುಕೊಂಡಿದ್ದಾರೆ.

370 ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಿರುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗಿತ್ತಿಕೊಂಡಿದೆ. ಮೊದಲೇ ಸಲ್ಲಿಸಿದ್ದ ಶರ್ಮಾ ಅರ್ಜಿಯನ್ನು ನೋಡಿದ ಮುಖ್ಯ ನ್ಯಾಯಮೂರ್ತಿಗಳು ‘ಈ ಅರ್ಜಿಗೆ ಯಾವುದೇ ಅರ್ಥವಿಲ್ಲ; ಎಂದು ಹೇಳಿದ್ದಾರೆ.

ವಕೀಲ ಮನೋಹರಲಾಲ್ ಶರ್ಮಾ ಉಳಿದ ಅರ್ಜಿಗಳನ್ನು ಸಹ ಗಂಭೀರವಾಗಿ ಪರಿಗಣಿಸದಂತೆ ಮಾಡಲು ಬೇಕಂತಲೇ ಈ ಅರ್ಜಿ ಸಲ್ಲಿಸಿದ್ದಾರೆ ಎಂದು ಹಲವರು ಆರೋಪ ಮಾಡಿದ್ದರು. ಏಕೆಂದರೆ ಈತ ಸರ್ಕಾರದ ನಿರ್ಧಾರದ ಪರವಾಗಿದ್ದರೂ ಸಹ ವಿಷಯಾಂತರ ಮಾಡಲು ಸುಮ್ಮನೆ ತಾನೇ ಮೊದಲಾಗಿ ಅದನ್ನು ವಿರೋಧಿಸುವ ರೀತಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಲೈವ್ ಲಾ ದಲ್ಲಿ ಕೆಲವರು ದೂರಿದ್ದರು.

ಇದನ್ನು ಓದಿ: 370ನೇ ವಿದಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಆರೆಸ್ಸೆಸ್ ವಕೀಲನಿಂದಲೇ ಅರ್ಜಿ: ಅಮಿತ್ ಶಾರ ಹೊಸ ನಾಟಕ

“ಇದು ಯಾವ ರೀತಿಯ ಅರ್ಜಿಯಾಗಿದೆ? ನೀವು ಏನು ಸವಾಲು ಮಾಡುತ್ತಿದ್ದೀರಿ, ನಿಮ್ಮ ಮನವಿಗಳು ಯಾವುವು” ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಶರ್ಮಾ ಅವರನ್ನು ಕೇಳಿದ್ದಾರೆ. ಅಲ್ಲದೇ “ನಾನು ನಿಮ್ಮ ಅರ್ಜಿಯನ್ನು ಅರ್ಧ ಘಂಟೆ ಓದಿದ್ದೇನೆ. ನನಗೆ ಅದು ಅರ್ಥವಾಗಲಿಲ್ಲ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಆರ್ಟಿಕಲ್ 370 ರದ್ದತಿಯ ಕುರಿತು ಇತರ ಏಳು ಅರ್ಜಿಗಳಿವೆ. “ಈ ರೀತಿಯ ವಿಷಯದಲ್ಲಿ ನೀವು ದೋಷಯುಕ್ತ ಅರ್ಜಿಯನ್ನು ಏಕೆ ಸಲ್ಲಿಸಿದ್ದೀರಿ? ಆರು ಅರ್ಜಿಗಳಿವೆ ಎಂದು ರಿಜಿಸ್ಟ್ರಾರ್ ಹೇಳುತ್ತಾರೆ. ನಿಮ್ಮಿಂದಾಗಿ ಜನರು ಈ ರೀತಿಯ ದೋಷಯುಕ್ತ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ.” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಮತ್ತು ಅರ್ಜಿದಾರ ಮನೋಹರಲಾಲ್ ಶರ್ಮಾರವರು ಮತ್ತೆ ತಿದ್ದುಪಡಿ ಮಾಡಿದ ಅರ್ಜಿಯನ್ನು ಸಲ್ಲಿಸುವುದಾಗಿ ಹೇಳಿದ್ದಾರೆ. ಮನೋಹರ್ ಲಾಲ್ ಶರ್ಮಾ ದೆಹಲಿ ಅತ್ಯಾಚಾರ ಪ್ರಕರಣದಲ್ಲಿಯೂ ಸಹ ಅತ್ಯಾಚಾರಿ ಆರೋಪಿಗಳ ಪರವಾಗಿ ವಾದಿಸಿದ್ದರು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ.

ಇದೇ ಸಂದರ್ಭದಲ್ಲಿ ಮಾಧ್ಯಮಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವಂತೆ ಕೋರಿ ಕಾಶ್ಮೀರ ಟೈಮ್ಸ್ ಸಂಪಾದಕರಾದ ಭಾಸಿಯಾ  ರವರು ಸಲ್ಲಿಸಿರುವ ಮತ್ತೊಂದು ಅರ್ಜಿಯನ್ನು ವಿಚಾರಣೆ ನಡೆಸಬೇಕಿದೆ. ವಿಚಾರಣೆಯನ್ನು ಮುಂದೂಡಿದ ಮುಖ್ಯ ನ್ಯಾಯಮೂರ್ತಿ, ಮಾಧ್ಯಮ ನಿರ್ಬಂಧಗಳ ಕುರಿತು ಅರ್ಜಿಯನ್ನು ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ ಮತ್ತು “ಈ ವಿಷಯಕ್ಕೆ ಸ್ವಲ್ಪ ಹೆಚ್ಚು ಸಮಯವನ್ನು ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ “ಕಾಶ್ಮೀರ ಟೈಮ್ಸ್ ಪತ್ರಿಕೆಯನ್ನು ಜಮ್ಮುವಿನಿಂದ ಮಾತ್ರ ಪ್ರಕಟಿಸಲಾಗಿದೆ. ನಾವು ಶ್ರೀನಗರದಿಂದ ಪ್ರಕಟಿಸಲಾಗುತ್ತಿಲ್ಲ. ದಿನದಿಂದ ದಿನಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಮತ್ತು ನಿರ್ಬಂಧಗಳನ್ನು ಕ್ರಮೇಣ ತೆಗೆದುಹಾಕಲಾಗುತ್ತಿದೆ.” ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ನಿರ್ಬಂಧಗಳನ್ನು ತೆಗೆದುಹಾಕಬೇಕೆಂದು ವಾದಿಸುತ್ತಿರುವ ವಕೀಲ ವೃಂದಾ ಗ್ರೋವರ್ “ಏನಾಗುತ್ತಿದೆ ಎಂಬುದರ ಬಗ್ಗೆ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಬೇಕಿದೆ. ಆಗ ಮಾತ್ರ ಪತ್ರಿಕೆ ಜನರಿಗೆ ಸಹಾಯ ಮಾಡಿದಂತಾಗುತ್ತದೆ. ಫೋನ್ ಮತ್ತು ಇಂಟರ್ ನೆಟ್ ಯಾವಾಗಿನಿಂದ ಕಾರ್ಯನಿರ್ವಹಿಸುತ್ತವೆ” ಎಂದು ಕೇಳಿದ್ದಾರೆ.

“ಇಂದು ಸಂಜೆ ಫೋನ್ ಸಂಪರ್ಕಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಮಾಧ್ಯಮಗಳು ಹೇಳುತ್ತಿವೆ ಕಾಯಿರಿ.” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...