Homeಮುಖಪುಟಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಮೊದಲು ಕೇಂದ್ರ ಸರ್ಕಾರವು ಭಾರತವು ಧಾರ್ಮಿಕ ವೈವಿಧ್ಯತೆಯಿಂದ ಕೂಡಿದೆ ಎನ್ನುವುದು ನೆನಪಿರಲಿ. ಜಾರಿಗೊಳಿಸಿದರೆ ಎದುರಾಗುವ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಬಗ್ಗೆ ಒಲವು ತೋರಿದ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಪ್ರತಿಕ್ರಿಯಿಸಿ, ”ಮೋದಿ ಅವರು ಅದರ ಬಗ್ಗೆ ಮರುಚಿಂತನೆ ಮಾಡಬೇಕು. ಇದು ವೈವಿಧ್ಯಮಯ ರಾಷ್ಟ್ರವಾಗಿದೆ. ಇಲ್ಲಿ ವಿವಿಧ ಜನಾಂಗಗಳು ಮತ್ತು ಧರ್ಮಗಳ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಮುಸ್ಲಿಮರು ತಮ್ಮದೇ ಆದ ಷರಿಯಾ ಕಾನೂನನ್ನು ಹೊಂದಿದ್ದಾರೆ” ಎಂದು  ಹೇಳಿದರು.

”ಏಕರೂಪ ನಾಗರಿಕ ಸಂಹಿತೆಯನ್ನು ಅನುಷ್ಠಾನಗೊಳಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಸರ್ಕಾರ ಯೋಚಿಸಬೇಕು ಮತ್ತು ಮರುಚಿಂತನೆ ಮಾಡಬೇಕು. ಅವರು ಈ ಎಲ್ಲವನ್ನು ಪರಿಗಣನೆಯಲ್ಲಿ ಇಟ್ಟುಕೊಳ್ಳಬೇಕು ಮತ್ತು ಅದನ್ನು ಜಾರಿ ಮಾಡುವ ಬದಲು, ಪರಿಣಾಮಗಳ ಬಗ್ಗೆ ಯೋಚಿಸಬೇಕು. ಅವರು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದರೆ ಎದುರಾಗವು ಸಕಂಷ್ಟಗಳ ಬಗ್ಗೆ ಯೋಚಿಸಬೇಕು” ಎಂದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

ವಿರೋಧ ಪಕ್ಷದ ನಾಯಕರಿಂದ ಟೀಕೆ

ಮೋದಿ ಹೇಳಿಕೆ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ”ನಿಜವಾದ ಪ್ರಶ್ನೆಗಳಿಗೆ” ಮೋದಿ ಉತ್ತರಿಸಬೇಕು ಎಂದು ಹೇಳಿದರು.

”ಕಳೆದ 60 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಈ ಬಗ್ಗೆ ಪ್ರಧಾನಿ ಏಕೆ ಒಂದೇ ಒಂದು ಮಾತನ್ನೂ ಆಡಿಲ್ಲ? ಇವೆಲ್ಲವೂ ದಿಕ್ಕು ತಪ್ಪಿಸುವ ಸಮಸ್ಯೆಗಳು. ಅವರು ದೇಶದ ನಿಜವಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಬಯಸುತ್ತಾರೆ, ಅದಕ್ಕಾಗಿಯೇ ಅವರು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ” ಎಂದರು.

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು?” ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಈ ಮೂಲಕ ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು ”ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...