Homeಮುಖಪುಟಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

ಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

- Advertisement -
- Advertisement -

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ್ದ ಹಲವು ನಿರ್ಬಂಧಗಳು ಮತ್ತು ಟೇಕ್ ಡೌನ್ ಆದೇಶಗಳನ್ನು ಪ್ರಶ್ನಿಸಿ, “ಟ್ವಿಟರ್ ಸಂಸ್ಥೆ” ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದರ ಜೊತೆಗೆ ಟ್ವಿಟರ್ ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಲಾಗಿದೆ.

ಫೆಬ್ರವರಿ 2021 ರಿಂದ ಫೆಬ್ರವರಿ 2022 ರ ನಡುವೆ ಕೇಂದ್ರ ಸರ್ಕಾರವು 39 ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಬಂಧಿಸುವ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಮನವಿಯನ್ನು ಸಲ್ಲಿಸಿತ್ತು. ಟ್ವಿಟರ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಸಂಬಂಧದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಬೆಳಗ್ಗೆ ಪ್ರಕಟಿಸಿತು. ದಂಡದ ಮೊತ್ತವನ್ನು 45 ದಿನಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸುವಂತೆ ಆದೇಶಿಸಲಾಗಿದೆ. ಒಂದೊಮ್ಮೆ 45 ದಿನಗಳಲ್ಲಿ ದಂಡವನ್ನು ಪಾವತಿಸಲು ವಿಫಲವಾದರೆ ದಿನಕ್ಕೆ 5 ಸಾವಿರದಂತೆ ಹೆಚ್ಚುವರಿ ದಂಡ ವಿಧಿಸಲಾಗುವುದು” ಎಂದು ನ್ಯಾಯಪೀಠ ಹೇಳಿದೆ.

”ಸ್ವೀಟ್‌ಗಳನ್ನು ಮತ್ತು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರಕ್ಕೆ ಅಧಿಕಾರವಿದೆ ಎಂಬುದು ಕೇಂದ್ರ ಸರ್ಕಾರದ ಪರ ವಕೀಲರ ವಾದ ಸಮರ್ಥನೆಯಿಂದ ಪೀಠಕ್ಕೆ ಮನವರಿಕೆಯಾಗಿದೆ” ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ.

“ನೀವು [ಟ್ವಿಟ್ಟರ್] ನಿಯಮಗಳನ್ನು ಜಾರಿಗೆ ತರಲು ಏಕೆ ವಿಳಂಬಗೊಳಿಸಿದ್ದೀರಿ, ಒಂದು ವರ್ಷಕ್ಕೂ ಹೆಚ್ಚು ವಿಳಂಬ ಮಾಡಿರುವುದಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ… ನಂತರ ನೀವು ಇದ್ದಕ್ಕಿದ್ದಂತೆ ಪಾಲಿಸುತ್ತೀರಿ ಮತ್ತು ನ್ಯಾಯಾಲಯವನ್ನು ಸಂಪರ್ಕಿಸುತ್ತೀರಿ. ನೀವು ಕಾನೂನಿನ ಪರಿಚಯವಿಲ್ಲದ ರೈತರಲ್ಲ, ಆದರೆ ಬಿಲಿಯನ್ ಡಾಲರ್ ಕಂಪನಿಯವರು” ಎಂದು ನ್ಯಾಯಮೂರ್ತಿ ದೀಕ್ಷಿತ್ ಹೇಳಿದರು.

ಕೇಂದ್ರದ ವಾದವನ್ನು ತಮಗೆ ಮನವರಿಕೆಯಾಗಿದೆ ಎಂದ ನ್ಯಾಯಾಧೀಶರು, ಕೇಂದ್ರ ಸರ್ಕಾರವು ಟ್ವೀಟ್‌ಗಳನ್ನು ತೆಗೆದುಹಾಕಲು ಟ್ವಿಟರ್‌ಗೆ ಕೇಳುವ ಅಧಿಕಾರವನ್ನು ಹೊಂದಿದ್ದು ಮಾತ್ರವಲ್ಲದೆ ಖಾತೆಗಳನ್ನು ನಿರ್ಬಂಧಿಸಲು ಕಂಪನಿಯನ್ನು ಕೇಳಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಏನಿದು ಪ್ರಕರಣ?

ಫೆಬ್ರವರಿ 2021ರಲ್ಲಿ, ನವೆಂಬರ್ 2022ರ ನಡುವೆ ನಡೆದ ದೊಡ್ಡ ಪ್ರಮಾಣದ ರೈತ ಪ್ರತಿಭಟನೆಗಳನ್ನು ನಿಭಾಯಿಸುವಲ್ಲಿ ಕೇಂದ್ರ ಸೋತಿದೆ, ಕೇಂದ್ರ ಸರ್ಕಾರ ರೈತ ವಿರೋಧ ಕಾನೂನು ತರುತ್ತಿದೆ ಎಂದು ಟೀಕಿಸಿದ ನೂರಾರು ಖಾತೆಗಳನ್ನು ತೆಗೆದುಹಾಕಲು ಸರ್ಕಾರವು ಟ್ವಿಟರ್ ಅನ್ನು ಕೇಳಿದೆ. ಮೊದಲು ಸರ್ಕಾರದ ಬೇಡಿಕೆಯನ್ನು ಟ್ವಿಟರ್ ಸಂಸ್ಥೆ ನಿರಾಕರಿಸಿತು, ಆಗ ತನ್ನ ಸ್ಥಳೀಯ ಉದ್ಯೋಗಿಗಳಿಗೆ ಜೈಲಿಗೆ ಹಾಕುವ ಬೆದರಿಕೆ ಹಾಕಲಾಯಿತು.

ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಜುಲೈನಲ್ಲಿ, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಕೇಂದ್ರ ಸರ್ಕಾರ “ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಫೆಬ್ರವರಿ 2021 ಮತ್ತು ನವೆಂಬರ್ 2022ರ ನಡುವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 175 ಟ್ವೀಟ್‌ಗಳನ್ನು ಮತ್ತು 1,400ಕ್ಕೂ ಹೆಚ್ಚು ಖಾತೆಗಳನ್ನು ತೆಗೆದುಹಾಕಲು ಕೇಳಿಕೊಂಡಿದೆ ಎಂದು ಕಂಪನಿಯು ಹೈಕೋರ್ಟ್‌ಗೆ ತಿಳಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ”ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನ ಬಳಕೆದಾರರಿಗೆ ಅವರ ಖಾತೆಗಳನ್ನು ಯಾಕೆ ನಿರ್ಬಂಧಿಸಬೇಕು ಎನ್ನುವ ಬಗ್ಗೆ ಕಾರಣವನ್ನು ಸರ್ಕಾರ ನೀಡಬೇಕು” ಎಂದು ಟ್ವಿಟರ್ ವಾದಿಸಿತ್ತು.

”ನೋಟಿಸ್ ನೀಡದೆ ತಮ್ಮ ಖಾತೆಗಳನ್ನು ನಿರ್ಬಂಧಿಸಿದರೆ 19ನೇ ವಿಧಿಯ (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಅಡಿಯಲ್ಲಿ ತನ್ನ ಬಳಕೆದಾರರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತದೆ ಮತ್ತು ಖಾತೆಗಳನ್ನು ನಿರ್ಬಂಧಿಸಲು ಕಾರಣವನ್ನು ನಮೂದಿಸಬೇಕು” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿತ್ತು.

ಇದಕ್ಕೆ ಉತ್ತರವಾಗಿ ಕೇಂದ್ರ ಸರ್ಕಾರವು, ”ಟ್ವಿಟರ್ ವಿದೇಶಿ ವ್ಯಾಪಾರ ಸಂಸ್ಥೆಯಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಖಾತೆಗಳನ್ನು ನಿರ್ಬಂಧಿಸಿದವರ ಪರವಾಗಿ ಮಾತನಾಡುವ ಹಕ್ಕು ಇಲ್ಲ” ಎಂದು ದರ್ಪದ ಹೇಳಿಕೆ ನೀಡಿತ್ತು.

ಕಳೆದ ವರ್ಷ ಏಪ್ರಿಲ್‌ನಲ್ಲಿಯೂ ಸಹ, ಲಕ್ಷಗಟ್ಟಲೆ ಜನರು ಕೋವಿಡ್ ಎರಡನೇ ಅಲೆಗೆ ಸಾವಿಗೀಡಾದರು. ಈ ಸಮಯದಲ್ಲಿ ಸರ್ಕಾರವು ಕೋವಿಡ್ -19 ಅನ್ನು ನಿರ್ವಹಿಸುತ್ತಿರುವುದನ್ನು ಟೀಕಿಸಿದ ಖಾತೆಗಳನ್ನು ತೆಗೆದುಹಾಕಲು ಕೇಂದ್ರವು ಟ್ವಿಟರ್‌ಗೆ ಕೇಳಿಕೊಂಡಿತ್ತು. ಆದರೆ ಟ್ವಿಟರ್ ಈ ಬಗ್ಗೆ ತಲೆಕೆಡಸಿಕೊಳ್ಳಲಿಲ್ಲ, ಆಗಲೂ  ಕೇಂದ್ರವು ಟ್ವಿಟರ್ ಮೇಲೆ ಮುಗಿಬಿದ್ದಿತ್ತು.

ಹೈಕೋರ್ಟ್‌ ತೀರ್ಪಿಗೆ ಪ್ರತಿಕ್ರಿಯೆ

ಈ ಬಗ್ಗೆ ಇಂಟರ್ನೆಟ್ ಫ್ರೀಡಂ ಫೌಂಡೇಶನ್‌ನ ರಾಧಿಕಾ ರಾಯ್ ಅವರು ಪ್ರತಿಕ್ರಿಯಿಸಿ, ”ಸರ್ಕಾರವು ಪಕ್ಷಪಾತದ ರೀತಿಯಲ್ಲಿ ಜಾರಿಗೆ ತಂದಿರುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ರೂಪಿಸಲಾದ ಕಾರ್ಯವಿಧಾನವನ್ನು ಮಾತ್ರ ನ್ಯಾಯಾಲಯ ಗಮನಿಸುತ್ತಿದೆ. ಏಕೆಂದರೆ ಕಾಯಿದೆಯ ಸೆಕ್ಷನ್ 69A, ಇಂಟರ್ನೆಟ್ ಸೇವಾ ಪೂರೈಕೆದಾರರು, ಟೆಲಿಕಾಂ ಸೇವಾ ಪೂರೈಕೆದಾರರು, ವೆಬ್ ಹೋಸ್ಟಿಂಗ್ ಸೇವೆಗಳು, ಸರ್ಚ್ ಇಂಜಿನ್‌ಗಳು ಮತ್ತು ಆನ್‌ಲೈನ್ ಮಾರುಕಟ್ಟೆ ಸ್ಥಳಗಳಂತಹ ಆನ್‌ಲೈನ್ ಮಧ್ಯವರ್ತಿಗಳಿಗೆ ವಿಷಯವನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಲು ಸರ್ಕಾರಕ್ಕೆ ಅವಕಾಶ ನೀಡುತ್ತದೆ” ಎಂದು ಹೇಳಿದರು.

ವಿಷಯವನ್ನು ಬರೆದವರ ಗಮನಕ್ಕೆ ತರದೇ ಅದನ್ನು ತೆಗೆದುಹಾಕುವಿಕೆ ಮತ್ತು ಸರ್ಕಾರದ ಸೂಚನೆಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ. ಇದು ನೈಸರ್ಗಿಕ ನ್ಯಾಯದ ತತ್ವಗಳನ್ನು ನಿರಾಶೆಗೊಳಿಸುತ್ತದೆ. ಏಕೆಂದರೆ ಇದು ಸಂತ್ರಸ್ತರು, ಪೀಡಿತರು ವಾಪಸ್ ಸಮರ್ಪಕವಾಗಿ ಸವಾಲು ಹಾಕಲು ಅನುಮತಿಸುವುದಿಲ್ಲ. ಎಂದು ರಾಯ್ ಹೇಳಿದ್ದಾರೆ.

ಖಾತೆಗಳ ಹಲವಾರು ಪೋಸ್ಟ್‌ಗಳನ್ನು ಏಕಕಾಲಕ್ಕೆ ನಿರ್ಬಂಧಿಸುವಿಕೆಯನ್ನು ಅನುಮತಿಸುವ ನ್ಯಾಯಾಲಯದ ನಿರ್ಧಾರವು ಸಮಾನ ಆಯ್ಕೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. “ಒಂದು ಖಾತೆಯು ತನ್ನ ನೀತಿಗಳನ್ನು ಪದೇ ಪದೇ ಉಲ್ಲಂಘಿಸಿದರೆ, ಅದನ್ನು ನಿಷೇಧಿಸಲಾಗುವುದು ಎಂದು ಟ್ವಿಟರ್ ಸ್ವತಃ ಹೇಳುತ್ತದೆ. ಹಾಗಿದ್ದರೂ ಸರ್ಕಾರವು ಕೇವಲ ಒಂದು ಟ್ವೀಟ್‌ನ ಆಧಾರದ ಮೇಲೆ ಅದನ್ನು ಮಾಡಿದಾಗ, ಅವರು ಬಳಕೆದಾರರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಾರೆ. ಅಲ್ಲದೆ, ಬಳಕೆದಾರರು ತಮ್ಮ ಖಾತೆಗಳನ್ನು ಸರ್ಕಾರ ತಡೆಹಿಡಿಯಲು ಕಾರಣವೇನೆಂದು ಸಹ ಹಲವಾರು ಬಾರಿ ತಿಳಿದುಕೊಳ್ಳಲು ಸಾಧ್ಯವಿಕಾರಣಗಳ ಬಗ್ಗೆ ಅಪರೂಪವಾಗಿ ತಿಳಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...