HomeUncategorizedತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

ತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಶಿಫಾರಸು ಇಲ್ಲದೆ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ವಿರುದ್ದ ಗರಂ ಆಗಿದ್ದಾರೆ. ಶುಕ್ರವಾರ ರಾಜ್ಯಪಾಲ ರವಿ ಅವರು, ಸಚಿವ ಸೆಂಥಿಲ್‌ ಬಾಲಾಜಿ ವಜಾ ಆದೇಶ ಪ್ರಕಟಿಸಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ಸಿಎಂ ಸ್ಟಾಲಿನ್ ಸಮೇತ ತಮಿಳುನಾಡು ಸರ್ಕಾರ ರಾಜ್ಯಪಾಲರ೫ ವಿರುದ್ಧ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಈಗ ರಾಜ್ಯಪಾಲ ರವಿ ಅವರಿಗೆ ಸ್ಟಾಲಿನ್ ನೇರ ಉತ್ತರ ಕೊಟ್ಟಿದ್ದಾರೆ.

ಸೆಂಥಿಲ್‌ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದ ಆದೇಶವನ್ನ ತಾತ್ಕಾಲಿಕವಾಗಿ ತಡೆಹಿಡಿಯಲು ರಾಜ್ಯಪಾಲ ಆರ್‌.ಎನ್.ರವಿ ನಿರ್ಧಾರ ಮಾಡಿದ್ದಾರೆ. ಆದರೂ ವಿವಾದದ ಕಿಚ್ಚು ಮಾತ್ರ ತಣ್ಣಗಾಗುತ್ತಿಲ್ಲ. ಡಿಎಂಕೆ ಸರ್ಕಾರ ಈಗ ಕಾನೂನು ಹೋರಾಟಕ್ಕೆ ಸಿದ್ಧವಾಗಿದೆ. ಅಲ್ಲದೆ ನೇರವಾಗಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಸ್ಟಾಲಿನ್ ‘ನಮ್ಮ ಸರ್ಕಾರದ ಸಚಿವರನ್ನು ವಜಾ ಮಾಡಲು ನೀವು ಯಾರು? ಆ ಅಧಿಕಾರ ನಿಮಗೆ ಇಲ್ಲ’ ಎಂದಿದ್ದಾರೆ.

ರಾಜ್ಯಪಾಲರ ನಿರ್ಧಾರದ ಬಗ್ಗೆ ಸ್ವತಃ ಬಿಜೆಪಿಯ ಕೆಲವು ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿ ಇಂತಹ ನಿರ್ಧಾರ ತಗೆದುಕೊಳ್ಳದಿರುವಂತೆ ತಿಳಿಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ ಅಮಿತ್ ಶಾ ಅವರ ಸಲಹೆ ಮೇರೆಗೆ ತಮಿಳುನಾಡು ರಾಜ್ಯಪಾಲ ರವಿ ನಿರ್ಧಾರ ಬದಲಾಯಿಸಿದ್ದು, ತಮ್ಮ ವಜಾ ಆದೇಶವನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ್ದಾರೆ. ಆದರೆ ಇದೀಗ ಡಿಎಂಕೆ ಈ ವಿಚಾರವನ್ನೇ ಹಿಡಿದುಕೊಂಡು ಹೋರಾಟ ಸಂಘಟಿಸಲು ಸಿದ್ಧತೆ ನಡೆಸಿದೆ. ಹೀಗಾಗಿ ‘ಸಚಿವರ ನೇಮಕ ಹಾಗೂ ವಜಾಗೊಳಿಸುವುದು ಮುಖ್ಯಮಂತ್ರಿ ವಿವೇಚನಾಧಿಕಾರ’ ಎಂದು ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.

ವಜಾ ಪತ್ರ: ರಾಜ್ಯಪಾಲ ಆರ್.ಎನ್.ರವಿ ಅವರು ಗುರುವಾರ ಸಚಿವ ಬಾಲಾಜಿ ಅವರನ್ನ ಸಂಪುಟದಿಂದ ವಜಾ ಮಾಡಿದ್ದರು. ಜೊತೆಗೆ ರಾಜಭವನದಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿ ‘ಬಾಲಾಜಿ ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು ಮತ್ತು ಮನಿ ಲಾಂಡರಿಂಗ್ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದು. ಹೀಗಾಗಿ ರಾಜ್ಯಪಾಲರು ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾ ಮಾಡಿದ್ದಾರೆ’ ಎಂದು ತಿಳಿಸಲಾಗಿತ್ತು.

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಈ ತಿಕ್ಕಾಟ ಇದೇ ಮೊದಲೇನಲ್ಲ, ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವು ತಿಂಗಳಲ್ಲಿ ತಿಕ್ಕಾಟ ಶುರುವಾಗಿತ್ತು. ತಮಿಳುನಾಡು ರಾಜ್ಯಪಾಲರು ಹಾಗೂ ತಮಿಳುನಾಡು ಸರ್ಕಾರದ ನಡುವೆ ದೊಡ್ಡ ಸಂಘರ್ಷ ನಡೆಯುತ್ತಿದೆ. ಈ ಮಧ್ಯೆ ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು & ಮನಿ ಲಾಂಡರಿಂಗ್ ಸೇರಿ ಹಲವು ಆರೋಪದ ಅಡಿಯಲ್ಲಿ ಸಚಿವ ಸೆಂಥಿಲ್ ಬಾಲಾಜಿ ಬಂಧನವಾಗಿತ್ತು. ಈ ಘಟನೆ ಬಳಿಕ ಸರ್ಕಾರ ಮತ್ತು ರಾಜ್ಯಪಾಲರ ಮಧ್ಯೆ ತಿಕ್ಕಾಟ ಬಲು ಜೋರಾಗಿ ನಡೆಯುತ್ತಿತ್ತು. ಗುರುವಾರ ತಮಿಳುನಾಡು ರಾಜ್ಯಪಾಲರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಸಚಿವ ಸೆಂಥಿಲ್ ಬಾಲಾಜಿರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದರು. ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಹೇಳಿಕೆ ಕೂಡ ನೀಡಲಾಗಿತ್ತು. ಈಗ ಅದೇ ನಿರ್ಧಾರ ಉಲ್ಟಾ ಆದಂತೆ ಕಾಣುತ್ತಿದೆ.

ಡಿಎಂಕೆ ನಾಯಕರು ತಮಿಳುನಾಡು ರಾಜ್ಯಪಾಲರ ವಿರುದ್ಧ ಕೆಂಡವಾಗಿದ್ದು, ಈ ವಿಚಾರವನ್ನ ನ್ಯಾಯಾಲಯದ ತನಕ ಕೊಂಡೊಯ್ಯಲು ಸಿದ್ಧತೆ ನಡೆಸಿದ್ದಾರೆ. ರಾಜ್ಯಪಾಲ ರವಿ ಅವರು ತೆಗೆದುಕೊಂಡ ಏಕಪಕ್ಷೀಯವಾದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಡಿಎಂಕೆ ನಾಯಕರ ಗಂಭೀರ ಆರೋಪವಾಗಿದೆ. ಹೀಗಾಗಿ ಜಟಾಪಟಿ ಜೋರಾಗಿದ್ದು, ಗಲಾಟೆಗೆ ಮುಂದೆ ವಿಪರೀತವಾಗುವ ಮುನ್ಸೂಚನೆ ಸಿಗುತ್ತಿದೆ.

ಇದನ್ನೂ ಓದಿ: ಸಿಎಂ ಶಿಫಾರಸಿಲ್ಲದೆಯೇ ಸೆಂಥಿಲ್‌ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ಆದೇಶ ವಾಪಸ್ ಪಡೆದ ತಮಿಳುನಾಡು ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...