Homeಮುಖಪುಟಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬಳಿಕ ವಿರೋಧ ಪಕ್ಷಗಳಲ್ಲಿ ಮಾತ್ರವಲ್ಲದೆ ಬಿಜೆಪಿಯ ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗಮಾ ಅವರು, ಏಕರೂಪ ನಾಗರಿಕ ಸಂಹಿತೆಯು ಭಾರತದ ಕಲ್ಪನೆಗೆ ವಿರುದ್ಧವಾಗಿ ಎಂದು ಹೇಳಿದ್ದಾರೆ.

ನ್ಯಾಷನಲ್ ಪೀಪಲ್ಸ್ ಪಾರ್ಟಿ ಸುಪ್ರಿಮೊ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ”ವೈವಿಧ್ಯತೆಯು ಭಾರತದ ಶಕ್ತಿಯಾಗಿದೆ ಮತ್ತು UCC ತನ್ನ ಪ್ರಸ್ತುತ ರೂಪದಲ್ಲಿ ಈ ಕಲ್ಪನೆಗೆ ವಿರುದ್ಧವಾಗಿ ಹೋಗುತ್ತದೆ” ಎಂದು ಹೇಳಿತು.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಪಡೆಯುವುದು ಮುಂತಾದ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ.

ಈಶಾನ್ಯ ರಾಜ್ಯಗಳು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ ಮತ್ತು ಅಸನ್ನು ಉಳಿಸಿಕೊಳ್ಳಲು ಬಯಸುತ್ತದೆ ಎಂದು ಸಂಗ್ಮಾ ಹೇಳಿದರು.

”ಮೇಘಾಲಯದಲ್ಲಿ ವಿಭಿನ್ನ ಸಂಸ್ಕೃತಿಗಳಿವೆ ಇವುಗಳನ್ನು ಬದಲಾಯಿಸಲಾಗುವುದಿಲ್ಲ. ಭಾರತವು ವೈವಿಧ್ಯಮಯ ರಾಷ್ಟ್ರ ಎಂಬ ಕಲ್ಪನೆಗೆ ವಿರುದ್ಧವಾಗಿ ಯುಸಿಸಿ ಹೋಗುತ್ತದೆ ಎಂದು ಎನ್‌ಪಿಪಿ ಭಾವಿಸುತ್ತದೆ, ವೈವಿಧ್ಯತೆಯು ನಮ್ಮ ಶಕ್ತಿ ಮತ್ತು ಗುರುತಾಗಿದೆ” ಎಂದು ಅವರು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಪ್ರಧಾನ ಮಂತ್ರಿಯವರ ಹೇಳಿಕೆಗೆ ಭೋಪಾಲ್‌ನಲ್ಲಿ ನಡೆದ ರ್ಯಾಲಿಯಲ್ಲಿ ವಿರೋಧ ಮತ್ತು ಟೀಕೆಗಳು ವ್ಯಕ್ತವಾದವು. ಇದು “ಧ್ರುವೀಕರಣ”ದ ತಂತ್ರ ಎಂದು ಟೀಕಿಸಲಾಯಿತು.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ವಿರೋಧ ಪಕ್ಷಗಳಿಂದಲೂ ಟೀಕೆ: 

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

21ನೇ ಕಾನೂನು ಆಯೋಗವು ಆಗಸ್ಟ್ 31, 2018ರಂದು ಸಮಾಲೋಚನಾ ಪತ್ರವನ್ನು ಬಿಡುಗಡೆ ಮಾಡಿತು, “ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯವೂ ಅಲ್ಲ ಅಥವಾ ಅಪೇಕ್ಷಣೀಯವೂ ಅಲ್ಲ” ಎಂದು ಹೇಳಿದೆ. ತಾರತಮ್ಯ ತಡೆಯಲು ವಿವಿಧ ಧರ್ಮಗಳ ವೈಯಕ್ತಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕ್ರೋಡೀಕರಿಸಬೇಕು ಎಂದು ಶಿಫಾರಸು ಮಾಡಿತ್ತು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ”ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು “ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....