Homeಮುಖಪುಟಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬಳಿಕ ವಿರೋಧ ಪಕ್ಷಗಳಲ್ಲಿ ಮಾತ್ರವಲ್ಲದೆ ಬಿಜೆಪಿಯ ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗಮಾ ಅವರು, ಏಕರೂಪ ನಾಗರಿಕ ಸಂಹಿತೆಯು ಭಾರತದ ಕಲ್ಪನೆಗೆ ವಿರುದ್ಧವಾಗಿ ಎಂದು ಹೇಳಿದ್ದಾರೆ.

ನ್ಯಾಷನಲ್ ಪೀಪಲ್ಸ್ ಪಾರ್ಟಿ ಸುಪ್ರಿಮೊ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ”ವೈವಿಧ್ಯತೆಯು ಭಾರತದ ಶಕ್ತಿಯಾಗಿದೆ ಮತ್ತು UCC ತನ್ನ ಪ್ರಸ್ತುತ ರೂಪದಲ್ಲಿ ಈ ಕಲ್ಪನೆಗೆ ವಿರುದ್ಧವಾಗಿ ಹೋಗುತ್ತದೆ” ಎಂದು ಹೇಳಿತು.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಪಡೆಯುವುದು ಮುಂತಾದ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ.

ಈಶಾನ್ಯ ರಾಜ್ಯಗಳು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ ಮತ್ತು ಅಸನ್ನು ಉಳಿಸಿಕೊಳ್ಳಲು ಬಯಸುತ್ತದೆ ಎಂದು ಸಂಗ್ಮಾ ಹೇಳಿದರು.

”ಮೇಘಾಲಯದಲ್ಲಿ ವಿಭಿನ್ನ ಸಂಸ್ಕೃತಿಗಳಿವೆ ಇವುಗಳನ್ನು ಬದಲಾಯಿಸಲಾಗುವುದಿಲ್ಲ. ಭಾರತವು ವೈವಿಧ್ಯಮಯ ರಾಷ್ಟ್ರ ಎಂಬ ಕಲ್ಪನೆಗೆ ವಿರುದ್ಧವಾಗಿ ಯುಸಿಸಿ ಹೋಗುತ್ತದೆ ಎಂದು ಎನ್‌ಪಿಪಿ ಭಾವಿಸುತ್ತದೆ, ವೈವಿಧ್ಯತೆಯು ನಮ್ಮ ಶಕ್ತಿ ಮತ್ತು ಗುರುತಾಗಿದೆ” ಎಂದು ಅವರು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಪ್ರಧಾನ ಮಂತ್ರಿಯವರ ಹೇಳಿಕೆಗೆ ಭೋಪಾಲ್‌ನಲ್ಲಿ ನಡೆದ ರ್ಯಾಲಿಯಲ್ಲಿ ವಿರೋಧ ಮತ್ತು ಟೀಕೆಗಳು ವ್ಯಕ್ತವಾದವು. ಇದು “ಧ್ರುವೀಕರಣ”ದ ತಂತ್ರ ಎಂದು ಟೀಕಿಸಲಾಯಿತು.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ವಿರೋಧ ಪಕ್ಷಗಳಿಂದಲೂ ಟೀಕೆ: 

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

21ನೇ ಕಾನೂನು ಆಯೋಗವು ಆಗಸ್ಟ್ 31, 2018ರಂದು ಸಮಾಲೋಚನಾ ಪತ್ರವನ್ನು ಬಿಡುಗಡೆ ಮಾಡಿತು, “ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯವೂ ಅಲ್ಲ ಅಥವಾ ಅಪೇಕ್ಷಣೀಯವೂ ಅಲ್ಲ” ಎಂದು ಹೇಳಿದೆ. ತಾರತಮ್ಯ ತಡೆಯಲು ವಿವಿಧ ಧರ್ಮಗಳ ವೈಯಕ್ತಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕ್ರೋಡೀಕರಿಸಬೇಕು ಎಂದು ಶಿಫಾರಸು ಮಾಡಿತ್ತು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ”ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು “ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...