Homeಕರ್ನಾಟಕಹಾಸನ: ಶಾಲೆಯಲ್ಲಿ ಬಕ್ರಿದ್ ಆಚರಣೆ ವಿರುದ್ದ ಹಿಂದುತ್ವ ಸಂಘಟನೆಗಳ ಆಕ್ರೋಶ; ಆಡಳಿತ ಮಂಡಳಿ ಸ್ಪಷ್ಟನೆ ಇಲ್ಲಿದೆ..

ಹಾಸನ: ಶಾಲೆಯಲ್ಲಿ ಬಕ್ರಿದ್ ಆಚರಣೆ ವಿರುದ್ದ ಹಿಂದುತ್ವ ಸಂಘಟನೆಗಳ ಆಕ್ರೋಶ; ಆಡಳಿತ ಮಂಡಳಿ ಸ್ಪಷ್ಟನೆ ಇಲ್ಲಿದೆ..

- Advertisement -
- Advertisement -

ಬಕ್ರೀದ್ ಹಬ್ಬದ ಹಿನ್ನೆಲೆ ಶಾಲೆಯಲ್ಲಿ ಮಕ್ಕಳು ಸಾಮೂಹಿಕ ನಮಾಜ್ ಮಾಡಿರುವ ಆರೋಪ ಹಾಸನದಲ್ಲಿ ಕೇಳಿ ಬಂದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಜ್ಞಾನಸಾಗರ ಇಂಟರ್​ ನ್ಯಾಷನಲ್ ಶಾಲೆಯ ವಿರುದ್ಧ ಹಿಂದುತ್ವ ಸಂಘಟನೆಗಳು ಗಂಭೀರ ಆರೋಪ ಮಾಡಿದ್ದು, ಮಕ್ಕಳನ್ನು ಒಟ್ಟಿಗೆ ಸೇರಿಸಿ ಮುಸ್ಲಿಂ ಧರ್ಮದ ಶ್ಲೋಕ ಹೇಳಿಸಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಸಾಮೂಹಿಕವಾಗಿ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೇವಲ ಮೂರು ಮುಸ್ಲಿಂ ಮಕ್ಕಳು ಮಾತ್ರ ಪ್ರಾರ್ಥನೆ ಮಾಡಿವೆ. ಬೇರೆ ಮಕ್ಕಳಿಂದ ಪ್ರಾರ್ಥನೆ ಮಾಡಿಸಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವೈರಲ್ ಆಗಿರೋ ವಿಡಿಯೋಗೆ ಸ್ಪಷ್ಟನೆ ನೀಡಿದೆ.

ಶಾಲೆ ಆಡಳಿತ ಮಂಡಳಿ ಸ್ಪಷ್ಟನೆ

ಮಕ್ಕಳಿಂದ ಪ್ರಾರ್ಥನೆ ಮಾಡಿಸಿಲ್ಲ, ಕೇವಲ ಭಾವೈಕ್ಯತೆ ಮೂಡಿಸುವ ಉದ್ಧೇಶದಿಂದ ಆಚರಣೆ ಮಾಡಿದ್ದೇವೆ. ಮುಸ್ಲಿಂ ಸಮುದಾಯದ ಮೂರು ಮಕ್ಕಳು ಮಾತ್ರ ನಮಾಜ್ ಮಾಡಿದ್ದಾರೆ. ಉಳಿದ ಮಕ್ಕಳು ಕಣ್ಮುಚ್ಚಿ ಕುಳಿತಿದ್ದರು ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ನಾವು ಶಾಲೆಯಲ್ಲಿ ಎಲ್ಲಾ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಕೇವಲ ಮುಸ್ಲಿಂ ಹಬ್ಬ ಮಾತ್ರವಲ್ಲ ಎಲ್ಲಾ ಧರ್ಮದ ಹಬ್ಬಗಳ ಪರಿಚಯ ಮಾಡಲು ಸಾಂಕೇತಿಕ ಆಚರಣೆ ಮಾಡಲಾಗುತ್ತಿದೆ. ಈಗ ನೀವು ಬೇಡ ಎಂದು ಹೇಳಿದ ಮೇಲೆ ನಾವು ಆಚರಣೆ ಮಾಡಿಸಲ್ಲ ಎಂದು ಶಿಕ್ಷಕ ವರ್ಗ ಹೇಳಿದೆ.

ಮಕ್ಕಳು ಕಾರ್ಯಕ್ರಮ ನೀಡುತ್ತಿರುವ ವೇಳೆ ಇನ್ನುಳಿದವರು ಗಲಾಟೆ ಮಾಡಬಾರದು ಎಂದು ಕಣ್ಣುಚ್ಚಿ ಕುಳಿತುಕೊಳ್ಳಲು ಸೂಚನೆ ನೀಡಲಾಗಿತ್ತು. ಕುರಾನ್ ಪಠಣೆ ಮಾಡಿಸಲಾಗಿದೆಯಾ ಅಥವಾ ಇಲ್ಲವೇ ಎಂಬುದನ್ನು ಮಕ್ಕಳನ್ನು ಕೇಳಿ ತಿಳಿದುಕೊಳ್ಳಿ, ಇದು ಕೇವಲ ಮೂರು ಮಕ್ಕಳಿಂದ ನಡೆದ ಕಾರ್ಯಕ್ರಮವಾಗಿದೆ. ನಿಮಗೆ ಅನುಮಾನ ಇದ್ದರೆ ಮಕ್ಕಳ ಜೊತೆ ಮಾತನಾಡಬಹುದು ಎಂದು ಶಿಕ್ಷಕರು ಹೇಳಿದ್ದಾರೆ.

ಸೋಮವಾರ ಹೋರಾಟಕ್ಕೆ ಕರೆ

ಶಾಲೆಯಲ್ಲಿ ಮುಸ್ಲಿಂ ಧರ್ಮ ಸಾಮೂಹಿಕ ಆಚರಣೆ ಖಂಡಿಸಿ ಸೋಮವಾರ ಹೋರಾಟಕ್ಕೆ ಹಿಂದುತ್ವ ಸಂಘಟನೆಗಳು ಕರೆ ನೀಡಿದೆ. ಸದ್ಯ ಶಾಲೆಯ ಈ ಕಾರ್ಯಕ್ರಮ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...