Homeಮುಖಪುಟಗುಜರಾತ್ ಹೈಕೋರ್ಟ್ ತೀರ್ಪಿಗೆ ಬ್ರೇಕ್ ಹಾಕಿದ ಸುಪ್ರೀಂ; ತೀಸ್ತಾ ಸೆಟಲ್ವಾಡ್‌ಗೆ ತಾತ್ಕಾಲಿಕ ರಿಲೀಫ್

ಗುಜರಾತ್ ಹೈಕೋರ್ಟ್ ತೀರ್ಪಿಗೆ ಬ್ರೇಕ್ ಹಾಕಿದ ಸುಪ್ರೀಂ; ತೀಸ್ತಾ ಸೆಟಲ್ವಾಡ್‌ಗೆ ತಾತ್ಕಾಲಿಕ ರಿಲೀಫ್

- Advertisement -
- Advertisement -

ನ್ಯಾಯಾಲಯಕ್ಕೆ ಕೂಡಲೇ ಶರಣಾಗುವಂತೆ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಗುಜರಾತ್ ಹೈಕೋರ್ಟ್ ಶನಿವಾರ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಒಂದು ವಾರದ ಮಟ್ಟಿಗೆ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ ಮತ್ತು ದೀಪಂಕರ್ ದತ್ತ ಅವರಿದ್ದ ತ್ರಿಸದಸ್ಯ ಪೀಠವು, ಸಂಜೆ ವಿಭಾಗೀಯ ಪೀಠ ನಡೆಸಿದ್ದ ವಿಚಾರಣೆಯನ್ನು ಅವಲೋಕಿಸಿ ಈ ಆದೇಶ ಪ್ರಕಟಿಸಿದೆ. ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ತೀಸ್ತಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಅಭಯ್‌ ಎಸ್. ಓಕಾ ಮತ್ತು ಮತ್ತು ಪ್ರಶಾಂತ್‌ ಕುಮಾರ್ ಮಿಶ್ರಾ ಅವರು ವಿಸ್ತ್ರತ ಪೀಠಕ್ಕೆ ವರ್ಗಾಯಿಸಿದ್ದರು.

ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆತಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ 7 ದಿನಗಳ ಮಧ್ಯಂತರ ರಕ್ಷಣೆ ನೀಡಿದೆ. ಈ ಮೂಲಕ ತೀಸ್ತಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ವಿಚಾರಣೆಯ ಸಂದರ್ಭದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ತ್ರಿಸದಸ್ಯ ಪೀಠವು ,ಸುಪ್ರೀಂ ಕೋರ್ಟ್ ನಲ್ಲಿ ಗುಜರಾತ್ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಜಾಮೀನು ಅರ್ಜಿ ತಿರಸ್ಕರಿಸಿರುವ ಬಗ್ಗೆ ಪ್ರಶ್ನೆ ಮಾಡಿತು. ಜಾಮೀನು ಪ್ರಶ್ನಿಸಲು ವ್ಯಕ್ತಿಗೆ ಏಳು ದಿನಗಳ ಕಾಲಾವಕಾಶವನ್ನು ನೀಡಬಾರದು, ತುರ್ತಾಗಿ ಶರಣಾಗಬೇಕು ಎಂದಿದ್ದೀರಿ, ಒಬ್ಬ ವ್ಯಕ್ತಿ ಇಷ್ಟು ದಿನ ಹೊರಗೆ ಇದ್ದಾಗ ಮಧ್ಯಂತರ ರಕ್ಷಣೆಯನ್ನು ನೀಡಿದರೆ ಆಕಾಶವು ಕುಸಿಯುತ್ತದೆಯೇ.? ಹೈಕೋರ್ಟ್ ಏನು ಮಾಡುತ್ತಿದೆ? ಅಂತಹ ಅವಸರವೇನು? ಎಂದು ಪೀಠ ಪ್ರಶ್ನಿಸಿತು.

ತಕ್ಷಣವೇ ಶರಣಾಗುವಂತೆ ಗುಜರಾತ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ತೀಸ್ತಾ ಸೆತಲ್ವಾಡ್ ಮಧ್ಯಂತರ ರಕ್ಷಣೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ಅರ್ಜಿ ಸಲ್ಲಿಕೆ ಹಿನ್ನಲೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ, 7 ದಿನಗಳ ಕಾಲ ಮಧ್ಯಂತರ ರಕ್ಷಣೆ ನೀಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನಿನ ಆಧಾರದಲ್ಲಿ ಅರ್ಜಿದಾರರು ಈಗಾಗಲೇ ಹೊರಗೆ ಇರುವುದರಿಂದ, ಅವರು ಈ ತಕ್ಷಣವೇ ಶರಣಾಗುವಂತೆ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಆದೇಶಿಸಿದ್ದರು. ತೀಸ್ತಾ ಬಗ್ಗೆ ಮೃದು ಧೋರಣೆ ತಾಳಿದರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲವೂ ಮೃದುವಾಗಿರುತ್ತದೆ ಎಂಬ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ ಎಂದು ತಮ್ಮ ಆದೇಶವನ್ನು ಸಮರ್ಥಿಸಿಕೊಂಡರು.

ಏನಿದು ಪ್ರಕರಣ?

2002ರ ಗುಜರಾತ್‌ ಗಲಭೆ ಪ್ರಕರಣದಲ್ಲಿ ಮುಗ್ಧ ಜನರನ್ನು ಸಾಕ್ಷ್ಯಗಳಾಗಿ ತಯಾರು ಮಾಡಿದ ಆರೋಪ ಮೇಲೆ ತೀಸ್ತಾ, ನಿವೃತ್ತ ಪೊಲೀಸ್‌ ಅಧಿಕಾರಿ ಆರ್.ಬಿ. ಶ್ರೀಕುಮಾರ್ ಸೇರಿದಂತೆ ಇತರರ ವಿರುದ್ಧ ಗುಜರಾತ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ತೀಸ್ತಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದರ ಅವಧಿ ಮುಗಿದಿದ್ದರಿಂದ ಕೋರ್ಟ್‌ಗೆ ಶರಣಾಗುವಂತೆ ಹೈಕೋರ್ಟ್ ಸೂಚಿಸಿತ್ತು. ಹಾಗಾಗಿ, ತ್ವರಿತವಾಗಿ ಜಾಮೀನಿನ ವಿಚಾರಣೆ ನಡೆಸುವಂತೆ ತೀಸ್ತಾ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಅವರ ಸೂಚನೆ ಮೇರೆಗೆ ನ್ಯಾಯಾಲಯದ ಕಲಾಪ ಮುಗಿದ ಬಳಿಕ ಸಂಜೆ 6.30ಕ್ಕೆ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಈ ಬಗ್ಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿ ವಿಸ್ತ್ರತ ಪೀಠಕ್ಕೆ ಜಾಮೀನು ಅರ್ಜಿಯನ್ನು ವರ್ಗಾಯಿಸಿತ್ತು. ‘ತೀಸ್ತಾಗೆ ಶರಣಾಗಲು ಹೈಕೋರ್ಟ್‌ ಸ್ವಲ್ಪ ಕಾಲಾವಕಾಶ ನೀಡಬೇಕಿತ್ತು’ ಎಂದು ನ್ಯಾಯಮೂರ್ತಿ ಓಕಾ ಹೇಳಿದರು.

ಸರ್ಕಾರದ ವಾದವೇನು?: ಗುಜರಾತ್‌ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮಡ್ತಾ, ‘ಸರ್ಕಾರದ ವಿರುದ್ಧ ತೀಸ್ತಾ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪ ಹೊತ್ತಿರುವ ಅವರು ಮಧ್ಯಂತರ ಜಾಮೀನಿಗೂ ಅರ್ಹರಿಲ್ಲ’ ಎಂದು ವಾದಿಸಿದರು.

ಹಿರಿಯ ವಕೀಲ ಚಂದರ್‌ ಉದಯ್ ಸಿಂಗ್ ಮತ್ತು ವಕೀಲರಾದ ಅರ್ಪಣಾ ಭಟ್ ಅವರು, ತೀಸ್ತಾ ಪರ ಹಾಜರಾಗಿದ್ದರು.

ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಕಳಂಕ ತರುವ ಉದ್ದೇಶದಿಂದ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ವಿರುದ್ಧ 2022ರ ಜೂನ್ 21ರಂದು ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಅವರಿಗೆ ಸೆಪ್ಟೆಂಬರ್ 2ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ; ತಕ್ಷಣವೇ ಶರಣಾಗುವಂತೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...