Homeಕರ್ನಾಟಕನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆಯುತ್ತಿದೆ. ಮತ್ತೊಂದೆಡೆ ನಾಳೆ (ಸೋಮವಾರ) 16ನೇ ವಿಧಾನಸಭೆಯ ಮೊದಲ ಜಂಟಿ ಅಧಿವೇಶನದ ಆರಂಭವಾಗುತ್ತಿದೆ. ಆದರೂ ಈ ವರೆಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಿಲ್ಲ. ಸಮರ್ಥ ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲದಲ್ಲಿದೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲು ಇಂದು (ಭಾನುವಾರ, ಜು.2) ಮಧ್ಯಾಹ್ನದ ಬಳಿಕ ಬಿಜೆಪಿ ನಾಯಕರು ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ಬಸವರಾಜ ಬೊಮ್ಮಾಯಿ ಅವರನ್ನು ನಾಯಕರಾಗಿ ಆಯ್ಕೆ ಮಾಡುವ ಸಂಭವ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ. ಯಡಿಯೂರಪ್ಪ ಅವರು ಬೊಮ್ಮಾಯಿ ಅವರ ಮೇಲೆ ಒಲವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಬಸನಗೌಡ ಪಾಟೀಲ್ ಯತ್ನಾಳ ಅವರು ಪ್ರಭಲ ಪೈಪೋಟಿ ನೀಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಈ ಬಗ್ಗೆ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾತನಾಡಿದ್ದು. ”ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಯಾರಾಗಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ. ಹಾಗಾಗಿ, ಭಾನುವಾರ ಸಭೆ ನಡೆಯುವುದು ಅನುಮಾನ. ಸೋಮವಾರ ಬೆಳಿಗ್ಗೆ ಕಲಾಪ ಆರಂಭವಾಗುವುದಕ್ಕೆ ಮುನ್ನ, ನಾಯಕನ ಆಯ್ಕೆಗೆ ವರಿಷ್ಠರು ಸೂಚನೆ ನೀಡುವ ಸಾಧ್ಯತೆ ಇದೆ” ಎಂದು ಹೇಳಿದರು.

ಪಕ್ಷದ ರಾಷ್ಟ್ರೀ ಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ವರಿಷ್ಠರು ಸಂದೇಶ ಕಳುಹಿಸಿದ್ದಾರೆ. ಭಾನುವಾರ ಮಧ್ಯಾಹ್ನ 2ಗಂಟೆಗೆ ಅವರು ದೆಹಲಿ ತಲುಪಲಿದ್ದಾರೆ. ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ, ನಾಯಕನ ಆಯ್ಕೆಯ ಸೂತ್ರ ಹೊರಬೀಳಲಿದೆ. ಅದಾದ ಬಳಿಕ, ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬರಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಯಡಿಯೂರಪ್ಪ ಅವರು ದೆಹಲಿ ನಾಯಕರ ಭೇಟಿ ವೇಳೆ, ಕೇಂದ್ರ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯದಿಂದ ಯಾರನ್ನು ಕೈಬಿಟ್ಟು, ಮತ್ತೆ ಯಾರನ್ನು ಸೇರ್ಪಡೆ ಮಾಡಬೇಕು ಎಂಬ ವಿಷಯದ ಕುರಿತು ವರಿಷ್ಠರು ಯಡಿಯೂರಪ್ಪನವರ ಜತೆ ಚರ್ಚೆ ನಡೆಸಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಸನಗೌಡ ಪಾಟೀಲ ಯತ್ನಾಳ ತೀವ್ರಯತ್ನ ನಡೆಸಿದ್ದಾರೆ. ಆದರೆ ತಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸಿಕೊಂಡು ಬಂದು, ಸರ್ಕಾರದ ವರ್ಚಸ್ಸು ಕೆಡಲು ಯತ್ನಾಳ ಕಾರಣ ಎಂದು ವಾದಿಸುತ್ತಿರುವ ಯಡಿಯೂರಪ್ಪ ಅವರು, ಯತ್ನಾಳ ಆಯ್ಕೆಗೆ ಸುತರಾಂ ಒಪ್ಪುವುದಿಲ್ಲ. ಹೀಗಾಗಿ, ಬಸವರಾಜ ಬೊಮ್ಮಾಯಿ ಆಯ್ಕೆ ಸಾಧ್ಯತೆ ಹೆಚ್ಚು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್: ಕಾಂಗ್ರೆಸ್

‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್‌ನ ಟ್ವಿಟರ್‌ ಘಟಕ ಶನಿವಾರ ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡಿದೆ. ಈ ಮೂಲಕ ವಿಧಾನಸಭೆ ಚುನಾವಣೆ ನಡೆದು ಇದುವರೆಗೆ ಬಿಜೆಪಿ ವಿರೋಧಪಕ್ಷದ ನಾಯಕನನ್ನು ನೇಮಿಸದಿದ್ದಕ್ಕೆ ವ್ಯಂಗ್ಯವಾಡಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಬರೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...