Homeಕರ್ನಾಟಕಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ...

ಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ ವಿರುದ್ಧ ಡಿಕೆಶಿ ಗರಂ

- Advertisement -
- Advertisement -

ನಾವು ಜನರಿಗೆ ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಈಗ 5 ಕೆ.ಜಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕುಮಾರಕೃಪಾ ಅತಿಥಿಗೃಹದ ಬಳಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ನೀಡಿದರು.

”ಅಕ್ಕಿ ಖರೀದಿಗೆ ನಮ್ಮ ಸಚಿವರು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ. ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿರುವ ಬಗ್ಗೆ ಕೇಳಿದಾಗ, “ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ” ಎಂದು ಬಿಜೆಪಿ ವಿರುದ್ಧ ಡಿಕೆಶಿ ಹರಿಹಾಯ್ದರು.

ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ಬಹಳ ಸಂತೋಷ… ಪ್ರತಿಭಟನೆ ಮಾಡಬೇಕು… ನಾವು ಅವರನ್ನು ತಡೆಯುವುದಿಲ್ಲ. ಬಿಜೆಪಿಯವರು ಕೊಟ್ಟ ಮಾತು ಈಡೇರದೇ ಇರುವುದರ ಬಗ್ಗೆ ಹೋರಾಟ ಮಾಡಲು ಹೇಳಿದ್ದೇನೆ. ಅವರು ಹೋರಾಟದ ಮೂಲಕ ನಮ್ಮ ಯೋಜನೆಗೆ ಪ್ರಚಾರ ನೀಡುತ್ತಿದ್ದಾರೆ” ಎಂದರು.

”ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ, ಅಕ್ಕಿ ವಿಚಾರದಲ್ಲೂ ಅವರು ಹೇಗೆ ರಾಜಕೀಯ ಮಾಡುತ್ತಿದ್ದಾರೆ, ನಾವು ಜನರಿಗೆ ಅಕ್ಕಿ ನೀಡಲು ಎಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಗೋದಾಮಿನಲ್ಲಿ ಅಕ್ಕಿ ಹುಳ ಹಿಡಿಯುತ್ತಿದ್ದರು ಬಡವರಿಗೆ ನೀಡದೆ ರಾಜಕಾರಣ ಮಾಡುತ್ತಿದ್ದಾರೆ. ಇದೆಲ್ಲವೂ ಜನರಿಗೆ ಗೊತ್ತಿದೆ” ಎಂದು ಹೇಳಿದರು.

”ನಾವು ದೀರ್ಘಾವಧಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಿಗದಿ ಮಾಡಿರುವ ಮೊತ್ತಕ್ಕೆ ಅಕ್ಕಿ ಖರೀದಿಗೆ ಮುಂದಾಗಿದ್ದೇವೆ. ನಮ್ಮ ರಾಜ್ಯದಲ್ಲಿ ಅಕ್ಕಿ ಬೆಳೆದು ಈ ಮೊತ್ತಕ್ಕೆ ನೀಡಿದರೆ ಅವರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ. ನಮಗೆ ಕೆಲ ರಾಜ್ಯದವರು ಒಂದೆರಡು ತಿಂಗಳು ಅಕ್ಕಿ ಪೂರೈಸಲು ಮುಂದಾಗಿದ್ದರು. ನಮಗೆ ತಾತ್ಕಾಲಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ಬೇಕು. ನಾವು ಆರಂಭದಲ್ಲಿ ಅಕ್ಕಿ ನೀಡಿ ನಂತರ ಅದನ್ನು ನಿಲ್ಲಿಸುವಂತೆ ಆಗಬಾರದು. ಹೀಗಾಗಿ ಬಿಜೆಪಿ ನಾಯಕರು ಕೊಟ್ಟಿರುವ ಸಲಹೆಯಂತೆ ಈಗ ಹಣ ನೀಡಲು ನಿರ್ಧರಿಸಿದ್ದೇವೆ” ಎಂದು ತಿಳಿಸಿದರು.

ಬಿಜೆಪಿ ಆಂತರಿಕ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಿ, ”ಬಿಜೆಪಿಯವರ ಬಾಯಿಗೆ ನಾವು ಹಿಂದೆಯೂ ಬೀಗ ಹಾಕಿಲ್ಲ. ಈಗಲೂ ಹಾಕುವುದಿಲ್ಲ. ಅವರ ಅನುಭವ, ನುಡಿಮುತ್ತುಗಳನ್ನು ಜನರಿಗೆ ತಿಳಿಸುತ್ತಿದ್ದಾರೆ” ಎಂದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...