Homeಮುಖಪುಟಪವಾರ್ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಪವಾರ್ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಎನ್‌ಸಿಪಿ

- Advertisement -
- Advertisement -

ಭಾನುವಾರದಂದು ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತು ಇತರ ಎಂಟು ಶಾಸಕರು ಬಿಜೆಪಿ-ಶಿವಸೇನೆ ಸರ್ಕಾಕ್ಕೆ ಬೆಂಬಲ ಘೋಷಿಸಿ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಈ ಎಲ್ಲ ನಾಯಕರ ಅನರ್ಹತೆ ಅರ್ಜಿ ಸಲ್ಲಿಸಲಾಗಿದೆ ಎಂದು ಎನ್‌ಸಿಪಿ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ರವಿವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಭಾನುವಾರ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಟೀಲ್, ”ಅನರ್ಹತೆ ಅರ್ಜಿಯನ್ನು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

”ಶಾಸಕರ ಸಂಖ್ಯೆ ಮುಖ್ಯವಲ್ಲ, ಪಕ್ಷದ ಅಧಿಕೃತ ವಿಪ್ ಪರಿಗಣಿಸಲಾಗುವುದು ಮತ್ತು ಇದು ಎಲ್ಲಾ ಶಾಸಕರಿಗೂ ಅನ್ವಯಿಸುತ್ತದೆ. ಪಕ್ಷವು ನೇಮಿಸಿದ ವಿಪ್ ಅನ್ನು ಅಧಿಕೃತವೆಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪು ಸ್ಪಷ್ಟವಾಗಿ ಹೇಳುತ್ತದೆ” ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಏಕನಾಥ್ ಶಿಂಧೆ ಅವರು ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಲು ಶಾಸಕರ ಗುಂಪಿನೊಂದಿಗೆ ಪಕ್ಷದಿಂದ ಹೊರನಡೆದ ನಂತರ ಶಿವಸೇನೆಯಲ್ಲಿನ ಒಡಕಿನ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಪಾಟೀಲ್ ಉಲ್ಲೇಖಿಸಿದ್ದಾರೆ.

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇದೆ ಎಂದು ತಿಳಿಸಲು ಪಕ್ಷವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ ಎಂದು ಪಾಟೀಲ್ ಹೇಳಿದರು. ಹೆಚ್ಚಿನ ಶಾಸಕರು ಎನ್‌ಸಿಪಿಗೆ ಮರಳುತ್ತಾರೆ ಎಂದು ನಾವು ನಂಬುತ್ತೇವೆ ಮತ್ತು ನಾವು ಅವರನ್ನು ಮತ್ತೆ ಒಪ್ಪಿಕೊಳ್ಳುತ್ತೇವೆ” ಎಂದು ಅವರು ಹೇಳಿದರು, ಎಎನ್‌ಐ ವರದಿ ಮಾಡಿದೆ.

ಈ ಮಧ್ಯೆ ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ ಅವರು, ”ಅಜಿತ್ ಪವಾರ್ ಅವರು ಪ್ರತಿಪಾದಿಸುತ್ತಿರುವ 36 ಶಾಸಕರ ಬೆಂಬಲವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳುವುದನ್ನು ತಪ್ಪಿಸಲು ಅಜಿತ್ ಪವಾರ್ ಅವರಿಗೆ 36 ಶಾಸಕರ ಬೆಂಬಲ ಬೇಕಾಗಿದೆ. ಪಾಟೀಲ್ ಮತ್ತು ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಎಲ್ಲಾ 53 ಶಾಸಕರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಕ್ರಾಸ್ಟೊ ತಿಳಿಸಿದ್ದಾರೆ.

ಅಜಿತ್ ಪವಾರ್ 2019ರಲ್ಲೂ ಬಿಜೆಪಿಯೊಂದಿಗೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದಾಗ್ಯೂ, ಮೈತ್ರಿ ಮೂರು ದಿನಗಳಿಗಿಂತ ಹೆಚ್ಚು ಕಾಲ ಉಳಿಯಲಿಲ್ಲ ಮತ್ತು ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರ ರಚನೆಯಾಗುತ್ತಿದ್ದಂತೆ ಎನ್‌ಸಿಪಿಗೆ ಮರಳಿದರು. ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರದಲ್ಲಿ ಅವರು ಮತ್ತೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಎಂಟು ಎನ್‌ಸಿಪಿ ಶಾಸಕರಾದ ಧರ್ಮೋಬಾಬಾ ಅತ್ರಮ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಧನಂಜಯ್ ಮುಂಡೆ, ಅದಿತಿ ತತ್ಕರೆ, ಅನಿಲ್ ಪಾಟೀಲ್, ಸಂಜಯ್ ಭನ್ಸೋಡೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ತಮ್ಮ ಪ್ರಮಾಣ ವಚನದ ನಂತರ ಮಾತನಾಡಿದ ಅಜಿತ್ ಪವಾರ್ ಅವರು, ನಾವು ಪಕ್ಷವನ್ನು ಒಡೆದಿಲ್ಲ, ನಮಗೆ ಎಲ್ಲಾ ಶಾಸಕರ ಬೆಂಬಲವಿದೆ. ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಎನ್‌ಸಿಪಿಯೇ ಬೆಂಬಲ ನೀಡಿದೆ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕರ ಖರೀದಿ ದಂಧೆ: ವಿರೋಧ ಪಕ್ಷಗಳ ಟೀಕೆ

ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರು ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಬೆಂಬಲವನ್ನು ನೀಡಿದ ನಂತರ ವಿರೋಧ ಪಕ್ಷಗಳು ಭಾನುವಾರ ಬಿಜೆಪಿಯನ್ನು ಟೀಕಿಸಿದವು. ಕೇಸರಿ ಪಕ್ಷವು “ಎಂಎಲ್‌ಎ ಖರೀದಿಯ ಭರಾಟೆ”ಯಲ್ಲಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

”ಮಹಾರಾಷ್ಟ್ರದ ಜನಾದೇಶವನ್ನು ಬಿಜೆಪಿ ಪದೇ ಪದೇ ದುರ್ಬಲಗೊಳಿಸುತ್ತಿರುವ ವಿಧಾನವನ್ನು ಖಂಡಿಸಲು ಯಾವುದೇ ಪದಗಳು ಸಾಕಾಗುವುದಿಲ್ಲ. ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವುದು ಮಾತ್ರವಲ್ಲದೆ ಅವರು ಅಂತಹ ಅವಮಾನಕರ ಕೃತ್ಯಗಳಿಗೆ ರಕ್ಷಣೆ ನೀಡಲು ರಾಷ್ಟ್ರಗೀತೆಯನ್ನು ಬಳಸುತ್ತಿದ್ದಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

”ಬಿಜೆಪಿಯು ತನ್ನ ‘ವಾಷಿಂಗ್ ಮೆಷಿನ್ ಕಾರ್ಯಾಚರಣೆ’ಯನ್ನು ಪುನರಾರಂಭಿಸಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯಾದವರು ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಂದ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈಗ ಅವರೆಲ್ಲರಿಗೂ ಕ್ಲೀನ್ ಚಿಟ್ ಸಿಕ್ಕಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಜಿತ್ ಪವಾರ್, ಭುಜಬಲ್ ಮತ್ತು ಮುಶ್ರಿಫ್ ಅವರು ಜಾರಿ ನಿರ್ದೇಶನಾಲಯದ ತನಿಖೆಯನ್ನು ಎದುರಿಸುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಇಬ್ಬಾಗವಾದ ಎನ್‌ಸಿಪಿ; ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿ, ಡಿಸಿಎಂ ಆದ ಅಜಿತ್ ಪವಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...