Homeಮುಖಪುಟಬಿಆರ್‌ಎಸ್ ಪಕ್ಷವು ಬಿಜೆಪಿಯ 'ಬಿ ಟೀಮ್': ರಾಹುಲ್ ಗಾಂಧಿ

ಬಿಆರ್‌ಎಸ್ ಪಕ್ಷವು ಬಿಜೆಪಿಯ ‘ಬಿ ಟೀಮ್’: ರಾಹುಲ್ ಗಾಂಧಿ

- Advertisement -
- Advertisement -

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷವು ಬಿಜೆಪಿಯ “ಬಿ ಟೀಮ್” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಪರ ಪ್ರಚಾರ ನಡೆಸುವ ವೇಳೆ ಹೇಳಿದ್ದಾರೆಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಬಿಆರ್‌ಎಸ್ ಪಕ್ಷವು ಬಿಜೆಪಿ ರಿಷ್ಟೇದಾರ್ (ಸಂಬಂಧಿ) ಸಮಿತಿ ಇದ್ದಂತೆ ಎಂದು ಖಮ್ಮಂ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಹೇಳಿದರು. ”ಕೆಸಿಆರ್ [ರಾವ್] ಅವರು ರಾಜ ಮತ್ತು ತೆಲಂಗಾಣ ಅವರ ಸಾಮ್ರಾಜ್ಯ ಎಂದು ಭಾವಿಸುತ್ತಾರೆ” ಎಂದು ಹರಿಹಾಯ್ದರು.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಿಆರ್‌ಎಸ್‌ ಪಕ್ಷದ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆ ನಡೆಸಿರುವುದನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ”ಬಿಆರ್‌ಎಸ್ ಪಕ್ಷವು ಬಿಜೆಪಿಗೆ ಅಧೀನವಾಗಿದೆ” ಎಂದರು.

”ದೆಹಲಿ ಮದ್ಯ ಪ್ರಕರಣದಲ್ಲಿ ಕೆಸಿಆರ್ ಪುತ್ರಿ ಭಾಗಿಯಾಗಿರುವ ಕಾರಣ ಕೆಸಿಆರ್ (ರಾವ್) ಅವರು ನರೇಂದ್ರ ಮೋದಿ ಸರ್ಕಾರದಿಂದ ರಕ್ಷಣೆ ಕೋರುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

”ಮೋದಿ ಈಗ ಬಿಜೆಪಿಯನ್ನು ಬೆಂಬಲಿಸುವಂತೆ ಕೆಸಿಆರ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಸಿಆರ್ ಅವರ ರಿಮೋಟ್ ಕಂಟ್ರೋಲ್ ಈಗ ಮೋದಿ ಕೈಯಲ್ಲಿದೆ” ಎಂದು ಟೀಕಿಸಿದ್ದಾರೆ.

ಇತ್ತೀಚೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ”ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ” ವಿರುದ್ಧ ಚುನಾವಣೆಯಲ್ಲಿ ಹೋರಾಡಿ ಗೆಲುವು ಸಾಧಿಸಿತು. ”ಕರ್ನಾಟಕದಲ್ಲಿ ಬಡವರು, ಒಬಿಸಿಗಳು, ಅಲ್ಪಸಂಖ್ಯಾತರು ಮತ್ತು ತುಳಿತಕ್ಕೊಳಗಾದವರ ಬೆಂಬಲದೊಂದಿಗೆ” ಬಿಜೆಪಿಯನ್ನು ಸೋಲಿಸಿದೆವು ಎಂದು ಭಾನುವಾರ ಗಾಂಧಿ ಹೇಳಿದರು.

”ತೆಲಂಗಾಣದಲ್ಲೂ ಅದೇ ರೀತಿಯ ಏನಾದರೂ ಸಂಭವಿಸಲಿದೆ. ಒಂದು ಕಡೆ ರಾಜ್ಯದ ಶ್ರೀಮಂತರು ಮತ್ತು ಶಕ್ತಿಶಾಲಿಗಳು ಮತ್ತು ಇನ್ನೊಂದು ಕಡೆ ನಮ್ಮೊಂದಿಗೆ ಬಡವರು, ಆದಿವಾಸಿಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಯವರು ಇರುತ್ತಾರೆ. ಕರ್ನಾಟಕದಲ್ಲಿ ಏನಾಗಿದೆಯೋ ಅದೇ ತೆಲಂಗಾಣದಲ್ಲೂ ಪುನರಾವರ್ತನೆಯಾಗುತ್ತದೆ” ಎಂದು ರಾಹುಲ್ ಹೇಳಿದರು.

ಕರ್ನಾಟಕ ಚುನಾವಣೆಯಲ್ಲಿ ಸೋತ ನಂತರ ತೆಲಂಗಾಣದಲ್ಲಿ ಬಿಜೆಪಿ ಕೊನೆಗೊಂಡಿದೆ. ತೆಲಂಗಾಣದಲ್ಲಿ ಈಗ ಕಾಂಗ್ರೆಸ್ ಮತ್ತು ಬಿಆರ್‌ಎಸ್ ನಡುವೆ ಹೋರಾಟ ನಡೆಯುತ್ತಿದೆ. ಕರ್ನಾಟಕದಂತೆಯೇ ತೆಲಂಗಾಣದಲ್ಲೂ ಭ್ರಷ್ಟ ಬಿಆರ್‌ಎಸ್ ಅನ್ನು ತೆಲಂಗಾಣದ ಜನರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೋಲಿಸುತ್ತಾರೆ” ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದರು.

ಈ ವರ್ಷದ ಕೊನೆಯಲ್ಲಿ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ದ್ವೇಷ, ಹಿಂಸೆಯೆಂಬ ವಿಪತ್ತನ್ನು ಪ್ರೀತಿ ಮತ್ತು ಮಾತುಕತೆ ಮೂಲಕ ಮಾತ್ರ ಎದುರಿಸಬಹುದು: ಮಣಿಪುರ ಭೇಟಿ ಬಳಿಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...