Homeಚಳವಳಿನುಡಿನಮನ: ಪಟ್ಟಾಭಿಯವರದು ನ್ಯಾಯಕ್ಕಾಗಿ ನಡೆಸಿದ ರಾಜಿರಹಿತ ಹೋರಾಟ

ನುಡಿನಮನ: ಪಟ್ಟಾಭಿಯವರದು ನ್ಯಾಯಕ್ಕಾಗಿ ನಡೆಸಿದ ರಾಜಿರಹಿತ ಹೋರಾಟ

ಅವರದು ನ್ಯಾಯಕ್ಕಾಗಿ ನಡೆಸಿದ ರಾಜಿರಹಿತ ಹೋರಾಟ. ಅವರು ಹೆಸರಿಗಾಗಿ, ದುಡ್ಡಿಗಾಗಿ ಆಸೆ ಪಟ್ಟವರಲ್ಲ. ನನ್ನ ನೆಚ್ಚಿನ ಗೆಳೆಯನ ಈ ಸ್ವಭಾವದ ಬಗ್ಗೆ ನನಗೆ ಹೆಮ್ಮೆ ಇದೆ.

- Advertisement -
- Advertisement -

1-1-2023ರಂದು ಪಟ್ಟಾಭಿರಾಮ ಸೋಮಯಾಜಿ ನಮ್ಮೆಲ್ಲರನ್ನು ಅಗಲಿ ಕಾಲವಾಗಿದ್ದಾರೆ. ನೆಚ್ಚಿನ ಗೆಳೆಯನಿಗೆ ಹೃತ್ಪೂರ್ವಕ ಶ್ರದ್ಧಾಂಜಲಿ.

ಹೊಸೂರು ಪಟ್ಟಾಭಿರಾಮ ಸೋಮಯಾಜಿ ನನ್ನ ದೀರ್ಘಕಾಲದ ಸ್ನೇಹಿತ. 1978ರಲ್ಲಿ ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಅವರು ಇಂಗ್ಲಿಷ್ ಸಾಹಿತ್ಯದ ಬಿ.ಎ. ವಿದ್ಯಾರ್ಥಿ. ನಾನು ಬಿ.ಕಾಂ.ವಿದ್ಯಾರ್ಥಿ. ನಾನು ಕಾಮರ್ಸ್ ಕಲಿಯುತ್ತಿದ್ದರೂ ನನ್ನ ನಿಜವಾದ ಆಸಕ್ತಿ ಇದ್ದದ್ದು ಸಾಹಿತ್ಯದಲ್ಲಿ. ಕಾಲೇಜಿನ ಭಿತ್ತಿ ಪತ್ರಿಕೆಗೆ ನಾವಿಬ್ಬರೂ ಬರೆಯುತ್ತಿದ್ದೆವು. ಹಾಗಾಗಿ ಸಮಾನ ಆಸಕ್ತರಾಗಿದ್ದ ನಾವು ಗೆಳೆಯರಾದೆವು.

ಉಡುಪಿಯ ಸಗ್ರಿ ಗುಡ್ಡೆಯಲ್ಲಿರುವ ಆ ಕಾಲೇಜಿನ ಹತ್ತಿರವೇ ನನ್ನ ಮನೆ ಇತ್ತು. ಕುಂದಾಪುರದ ನೀಲಾವರದ ಹತ್ತಿರದ ಹೊಸೂರು ಎನ್ನುವ ಹಳ್ಳಿಯ ಪಟ್ಟಾಭಿ, ಉಡುಪಿಯ ಕುಂಜಿಬೆಟ್ಟು ಎನ್ನುವಲ್ಲಿ ಸಣ್ಣ ಬಾಡಿಗೆ ಮನೆಯ ಮಹಡಿಯಲ್ಲಿ ಸ್ವಂತ ಅಡಿಗೆ ಮಾಡಿಕೊಂಡು ವಾಸಿಸುತ್ತಿದ್ದರು. ನಾವಿಬ್ಬರೂ ಪರಸ್ಪರರ ಮನೆಗೆ ಹೋಗಿ ಸಾಹಿತ್ಯದ ಬಗ್ಗೆ ತುಂಬಾ ಚರ್ಚಿಸುತ್ತಿದ್ದೆವು. ಕಾಲೇಜಿನ ಸುತ್ತಲೂ ಇರುವ ಮಾವಿನ ಮರಗಳ ಕೆಳಗೆ ಕೂತು ಕನ್ನಡ ಸಾಹಿತ್ಯದ ಗಿರೀಶ್ ಕಾರ್ನಾಡ್, ಅನಂತಮೂರ್ತಿ, ಶಿವರಾಮ ಕಾರಂತರ ಬರಹಗಳ ಬಗ್ಗೆ ಮತ್ತು ಇಂಗ್ಲಿಷ್ ಸಾಹಿತ್ಯದ Murder in the Cathedral, The Outsider, Dostovsky ಬರಹಗಳ ಬಗ್ಗೆ ಆಗ ಚಾಲ್ತಿಯಲ್ಲಿದ್ದ ನವ್ಯ ಸಾಹಿತ್ಯದ ಬಗ್ಗೆ ತುಂಬಾ ಚರ್ಚಿಸುತ್ತಿದ್ದೆವು.

ಪಟ್ಟಾಭಿಯ ಜೊತೆ ಕಳೆದ ಆ ಮೂರು ವರ್ಷ ನನ್ನ ಜೀವನದ ಅರ್ಥಪೂರ್ಣ ವರ್ಷಗಳು!!! ಅವರು ನನಗೆ ಇಂಗ್ಲಿಷ್ ಸಾಹಿತ್ಯದ ಬಗ್ಗೆ ತುಂಬಾ ಒಳನೋಟ ನೀಡಿದ್ದರಿಂದ ಮುಂದೆ ನಾನು ಇಂಗ್ಲಿಷ್ ಸಾಹಿತ್ಯದಲ್ಲೇ ಎಂ.ಎ. ಮಾಡಲು ಪ್ರೇರಣೆ ಸಿಕ್ಕಿತು.

ಕಾಲೇಜಿನ ಭಿತ್ತಿ ಪತ್ರಿಕೆ Sagri centinal ಮತ್ತು ವಾರ್ಷಿಕ ಸಂಚಿಕೆಗಳಲ್ಲಿ ಅವರ ಪ್ರಬುದ್ಧ ಲೇಖನಗಳು ಪ್ರಕಟವಾಗುತ್ತಿದ್ದವು. ಇಡೀ ಕಾಲೇಜಿನಲ್ಲಿ ಅವರು ಒಳ್ಳೆಯ ಬರಹಗಾರ ಎಂದು ಗುರುತಿಸಲ್ಪಟ್ಟಿದ್ದರು. ಕಾಲೇಜಿನ ಪ್ರಾಂಶುಪಾಲ ದಿವಂಗತ ಪ್ರೊ. ಕು.ಶಿ. ಹರಿದಾಸ ಭಟ್, ಪ್ರಾಧ್ಯಾಪಕರಾದ ಕೃಷ್ಣಪ್ಪ, ಎನ್.ಟಿ. ಭಟ್, ರಾಮ ಭಟ್, ಶ್ರೀನಿವಾಸ ಭಟ್ ಮುಂತಾದವರ ಮೆಚ್ಚಿನ ವಿದ್ಯಾರ್ಥಿ ಇವರಾಗಿದ್ದರು. ಮುಂದೆ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಬಿ.ಎ. ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದರು.

ಆನಂತರ ಅವರು ಮೈಸೂರಿಗೆ ಹೋಗಿ ಮಾನಸಗಂಗೋತ್ರಿಯಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಮಾಡಿದರು. ಅಲ್ಲಿ ಅವರು ಡಾ.ಯು.ಆರ್. ಅನಂತಮೂರ್ತಿಯವರ ಅಚ್ಚುಮೆಚ್ಚಿನ ವಿದ್ಯಾರ್ಥಿ ಆದರು. ಆ ಸಮಯದಲ್ಲಿ ಅನಂತಮೂರ್ತಿಯವರು ನಮ್ಮ ಕಾಲೇಜಿನ ವಾರ್ಷಿಕೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಬಂದಿದ್ದರು. ಆಗ ನಮ್ಮ ಕನ್ನಡ ಪ್ರಾಧ್ಯಾಪಕ ಶಿವಸ್ವಾಮಿಯವರು ತಮ್ಮ ಹಳೇ ವಿದ್ಯಾರ್ಥಿ ಪಟ್ಟಾಭಿ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದಾಗ ಅನಂತಮೂರ್ತಿಯವರು He is one of my best students ಎಂದು ಹೇಳಿದ್ದರು!!!

ಮೈಸೂರಿನಲ್ಲಿ ಪಟ್ಟಾಭಿ ಬೌದ್ಧಿಕವಾಗಿ ತುಂಬಾ ಬೆಳೆದರು. ಮಹಾ ನಿಷ್ಠುರವಾದಿ ದಿವಂಗತ ಪ್ರೊಫೆಸರ್ ಬಿ. ದಾಮೋದರ ರಾವ್ ಕೂಡಾ ಅವರ ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸಿದರು. ಅನಂತಮೂರ್ತಿಯವರಂತೂ ಇವರನ್ನು ತಮ್ಮ ಅಂತರಂಗದ ಶಿಷ್ಯನನ್ನಾಗಿ ಸ್ವೀಕರಿಸಿ, ತನ್ನ ಮಗನಂತೆಯೇ ನೋಡಿಕೊಂಡರು. ಇವರು ಅವರ ಮನೆ ‘ಅಭಯ’ಕ್ಕೆ ಯಾವಾಗಲೂ ಹೋಗುತ್ತಿದ್ದರು.

ನಾನು ಆಗ ಬೆಂಗಳೂರಿನಲ್ಲಿ ಸಿ.ಎ. ಮಾಡುತ್ತಿದ್ದೆ. ನನಗೆ ಅದರಲ್ಲಿ ಆಸಕ್ತಿ ಇರಲಿಲ್ಲ. ಪಟ್ಟಾಭಿಯ ಬೆಂಬಲದಿಂದ ನಾನು ಸಿ.ಎ ಅರ್ಧಕ್ಕೆ ಬಿಟ್ಟು ಮೈಸೂರಿಗೆ ಹೋಗಿ, ಡಿಪ್ಲೊಮ ಇನ್ ಇಂಗ್ಲಿಷ್‌ಗೆ ಸೇರಿದೆ. ಆಗ ನಾನು ವಾಸಿಸಲು ತೊಡಗಿದ್ದು ಪಟ್ಟಾಭಿಯ ಪುಟ್ಟ ಬಾಡಿಗೆ ರೂಮ್‌ನಲ್ಲಿ. ಅವರ ಸಹಾಯದಿಂದಲೇ ನಾನು ಹಾಲೆಂಡ್‌ನ ಯಾನ್ ಬ್ರೋವರ್ ಜೊತೆ ದುಭಾಷಿಯಾಗಿ ಕೆಲಸಕ್ಕೆ ಸೇರಿ… ಮುಂದೆ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಮಾಡಿ… ಲೆಕ್ಚರರ್ ಆಗಿ… ಅದೊಂದು ದೊಡ್ಡ ಕಥೆ. ಹಾಗೆ ಕಷ್ಟ ಕಾಲದಲ್ಲಿ ಸಹಾಯ ಮಾಡಿದ ಪಟ್ಟಾಭಿಗೆ ನಾನು ಚಿರ ಋಣಿ!!!

ರೂಮಿನಲ್ಲಿ ಒಟ್ಟಿಗೆ ಇದ್ದಾಗ ಅವರು ನನಗೂ ಪಾಠ ಮಾಡಿದ್ದಾರೆ. ಒಮ್ಮೆ ಷೇಕ್ಸ್‌ಪಿಯರ್‌ನ ಸಾನೆಟ್ The Expense of Spirit in the waste of Shame, is lust in action…. ಎನ್ನುವ ಸಾನೆಟನ್ನು ಅದ್ಭುತವಾಗಿ ಪಾಠ ಮಾಡಿದ್ದರು. ಅನಂತಮೂರ್ತಿಯವರ ಸಂಪಾದಕತ್ವದ ‘ರುಜುವಾತು’ ಪತ್ರಿಕೆಯ ಕೆಲಸವನ್ನು ಪಟ್ಟಾಭಿ ಇಷ್ಟಪಟ್ಟು ಮಾಡುತ್ತಿದ್ದರು. ಅವರ ಜೊತೆ ಮೀನಾ ಮೈಸೂರು ಮತ್ತು ಸರ್ವಮಂಗಳ ಇರುತ್ತಿದ್ದರು. ಪಟ್ಟಾಭಿಯವರಿಗೆ ಎಂ.ಎ.ಯಲ್ಲಿ ಪ್ರಥಮ ಸ್ಥಾನ ಬರಬೇಕಾಗಿತ್ತು. ಆದರೆ ಜಾತಿ ರಾಜಕಾರಣದಿಂದಾಗಿ ಅದು ಕೈ ತಪ್ಪಿ ಹೋಯಿತು. ಎಂ.ಜಿ.ಎಂ. ಕಾಲೇಜಿನವರು ಅವರನ್ನು ತಾವಾಗಿಯೇ ಉಪನ್ಯಾಸಕ ಹುದ್ದೆಗೆ ಆಹ್ವಾನಿಸಿದ್ದರು. ಆದರೆ ಪಟ್ಟಾಭಿ ಮೈಸೂರಿನಲ್ಲೇ ಉಳಿದರು.

ನಂತರ ಪಟ್ಟಾಭಿ ತಮ್ಮ ಉಪನ್ಯಾಸಕ ವೃತ್ತಿಯನ್ನು ಶುರು ಮಾಡಿದರು. ಮಂಗಳೂರು ವಿಶ್ವವಿದ್ಯಾನಿಲಯ ಸೇರಿದರು. ಈ ನಡುವೆ ಅವರು ಹಲವು ಹೋರಾಟಗಳಲ್ಲಿ ಭಾಗವಹಿಸಿ ಒಳ್ಳೆಯ ಹೆಸರು ಗಳಿಸಿದ್ದರು. ಅವರದು ನ್ಯಾಯಕ್ಕಾಗಿ ನಡೆಸಿದ ರಾಜಿರಹಿತ ಹೋರಾಟ. ಅವರು ಹೆಸರಿಗಾಗಿ, ದುಡ್ಡಿಗಾಗಿ ಆಸೆ ಪಟ್ಟವರಲ್ಲ. ನನ್ನ ನೆಚ್ಚಿನ ಗೆಳೆಯನ ಈ ಸ್ವಭಾವದ ಬಗ್ಗೆ ನನಗೆ ಹೆಮ್ಮೆ ಇದೆ.

ಪಟ್ಟಾಭಿಯವರ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳು ತುಂಬಾ ಚೆನ್ನಾಗಿತ್ತು. ಅವರು ಇತ್ತೀಚೆಗೆ ವಾಟ್ಸ್ಆ್ಯಪ್ ಕವನಗಳನ್ನು ಬರೆಯುತ್ತಾ ಇದ್ದರು. ಅವು ತುಂಬಾ ಅರ್ಥಪೂರ್ಣವಾಗಿರುತ್ತಿದ್ದವು. ಪಟ್ಟಾಭಿಯವರ ಮಾತೃಭಾಷೆ ಕುಂದಾಪ್ರ ಕನ್ನಡ. ಆ ಭಾಷಾ ಪ್ರಭೇದದಲ್ಲೂ ಅವರು ಒಳ್ಳೆಯ ಕವನಗಳನ್ನು ರಚಿಸಿದ್ದಾರೆ. ಪಟ್ಟಾಭಿ ಅದ್ಭುತ ಭಾಷಣಕಾರರು. ಸಾವಿರಾರು ಜನ ಸೇರಿದ್ದ ಸಭೆಗಳಲ್ಲಿ ಅವರು ನಿರ್ಭೀತಿಯಿಂದ ನಿರರ್ಗಳವಾಗಿ ಭಾಷಣ ಮಾಡಿದ್ದನ್ನು ನಾನು ನೋಡಿದ್ದೇನೆ. ಇಂಗ್ಲಿಷ್ ಭಾಷೆಯ ಸೆಮಿನಾರ್‌ಗಳಲ್ಲೂ ಅವರು ಮಿಂಚಿದ್ದನ್ನು ನಾನು ಕಂಡಿದ್ದೇನೆ.

ಅವರು ಸಾಹಿತ್ಯ ಕೃತಿಗಳನ್ನು ವಿಶ್ಲೇಷಣೆ ಮಾಡುವ ವಿಧಾನದಲ್ಲಿ ಅವರದೇ ಛಾಫು ಮೂಡಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಇನ್ನೂ ಬಹಳಷ್ಟು ಕೆಲಸ ಮಾಡಲಿಕ್ಕಿತ್ತು. ನೆನಪಿನಿಂದ ಹೇಳುವುದಾದರೆ… ಪಟ್ಟಾಭಿ ಡಿಗ್ರಿಯಲ್ಲಿ ಇದ್ದಾಗ ಪ್ರಿನ್ಸಿಪಾಲ್ ಪ್ರೊ. ಕು.ಶಿ.ಹರಿದಾಸ ಭಟ್ ನಿವೃತ್ತರಾದರು. ಅವರ ಬಗ್ಗೆ ಆ ಸಂದರ್ಭದಲ್ಲಿ ಪಟ್ಟಾಭಿ ಒಂದು ಒಳ್ಳೆಯ ಲೇಖನ ಬರೆದಿದ್ದರು.

ಮೈಸೂರಿನಲ್ಲಿ ಇದ್ದಾಗ ಯಲ್ಲಿ “what shall we ever do!?” ಎನ್ನುವ ಕರ್ಕೆಗಾಡ್ ಮೇಲೆ ಪ್ರಬುದ್ಧ ಲೇಖನ ಬರೆದಿದ್ದರು. ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಪಟ್ಟು ‘ರಾಮಲಲ್ಲಾ’ ಮೇಲೆ ತುಂಬಾ ಒಳನೋಟದ ಲೇಖನ ಬರೆದಿದ್ದರು. ‘ರುಜುವಾತು’ನಲ್ಲಿ ಬೇಂದ್ರೆ ಅವರ ಕವನ ‘ಹುಬ್ಬಳಿಯಾಂವ’ ಮೇಲೆ ‘ಪದ್ಯ ಬಗೆವ ಬಗೆ’ ಶೀರ್ಷಿಕೆಯಡಿ ರಚನಾತ್ಮಕ ವಿಶ್ಲೇಷಣೆ ಮಾಡಿದ್ದರು.

ಇಂಗ್ಲಿಷ್ ಲೇಖಕ ಡಿ.ಎಚ್. ಲಾರೆನ್ಸನ ಕಾದಂಬರಿಗಳ ಬಗ್ಗೆ ಒಳನೋಟಗಳುಳ್ಳ ಅದ್ಭುತ ಭಾಷಣ ಮಾಡಿದ್ದನ್ನು ನಾನು ಕೇಳಿದ್ದೇನೆ. ಐಚ್ಛಿಕ ಇಂಗ್ಲಿಷ್‌ನ ವಿದ್ಯಾರ್ಥಿಗಳು ಇಂಗ್ಲಿಷ್ ಸಾಹಿತ್ಯದ ಮೇಲಿನ ಅವರ ಪಾಠಗಳನ್ನು ಹೊಗಳಿದ್ದನ್ನೂ ಕೇಳಿದ್ದೇನೆ.

  • ಡಾ. ಎಸ್. ಹಯವದನ ಉಪಾಧ್ಯಾಯ, ಪ್ರಾಧ್ಯಾಪಕರು, ಕುಂದಾಪುರ.

(ಈ ಲೇಖನ ಮೊದಲು ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾಗಿದೆ)

ಇದನ್ನೂ ಓದಿ: ನುಡಿನಮನ: ಹೋರಾಟದ ಸಂಗಾತಿ ಪಟ್ಟಾಭಿಯವರ ನೆನಪುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...