Homeಕರ್ನಾಟಕವಿಪಕ್ಷ ನಾಯಕನ ಆಯ್ಕೆ ವಿಳಂಬ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಬಿಜೆಪಿಯೇ ಸಂಕಷ್ಟದಲ್ಲಿ...

ವಿಪಕ್ಷ ನಾಯಕನ ಆಯ್ಕೆ ವಿಳಂಬ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಬಿಜೆಪಿಯೇ ಸಂಕಷ್ಟದಲ್ಲಿ…

- Advertisement -
- Advertisement -

ಸೋಮವಾರ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯ ಪಾಲರು ಭಾಷಣ ಮಾಡಿದ್ದಾರೆ. ಆದರೆ ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ಇದು ಪಕ್ಷಕ್ಕೆ ತೀವ್ರ ಇರಿಸುಮುರಿಸು ಉಂಟುಮಾಡಿದ್ದು, ಅಧಿವೇಶದನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಬೇಕಾದ ಬಿಜೆಪಿಯೇ ಈಗ ಸಂಕಷ್ಟಕ್ಕೆ ಸಿಲುಕಿದೆ.

ಇಂದು ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬಿಜೆಪಿ ಹೈಕಮಾಂಡ್​ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲು ಸೋಮವಾರ ವೀಕ್ಷಕರನ್ನು ನೇಮಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಯಕನ ಆಯ್ಕೆ ಮಾಡಲು ಕೇಂದ್ರೀಯ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ನೇಮಿಸಿದ್ದಾರೆ. ಅವರು ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಶಾಸಕಾಂಗ ಸಭೆ ನಡೆಯಲಿದ್ದಾರೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್​ಗೆ ಮಾಹಿತಿ ನೀಡಲಿದ್ದಾರೆ. ಬಳಿಕ ಅಧಿಕೃತವಾಗಿ ವಿರೋಧ ಪಕ್ಷ ನಾಯಕನ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಲಿಂಗಾಯತ ಸಮುದಾಯದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ರೇಸ್​ನಲ್ಲಿದ್ದಾರೆ. ಅಲ್ಲದೇ ಶಾಸಕ ಸುನಿಕ್ ಕುಮಾರ್ ಕೂಡ ವಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇನ್ನೂ ನಿಗೂಢವಾಗಿದೆ.

ಇದನ್ನೂ ಓದಿ: ವಿಪಕ್ಷ ನಾಯಕನಿಲ್ಲದೆ ಸದನ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬಿಜೆಪಿ ವಿರುದ್ಧ ಕಾಂಗ್ರೆಸ್​ ಟೀಕಾಪ್ರಹಾರ!

ಕಲಾಪ ಆರಂಭ ಆಗುವ ಮುನ್ನವೇ ವಿಪಕ್ಷ ನಾಯಕನ ಹೆಸರು ಅಂತಿಮ ಆಗಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ಇತ್ತ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಹೋಗಿಬಂದಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ನಿಗದಿಯಾಗಿದ್ದ ಸಭೆ ನಡೆಯಲೇ ಇಲ್ಲ. ಹೀಗಾಗಿ ವಿಪಕ್ಷ ನಾಯಕನ ಆಯ್ಕೆ ನೆನೆಗುದಿಗೆ ಬಿದ್ದಿದೆ. ಇಷ್ಟೇ ಅಲ್ಲ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಅಟ್ಯಾಕ್ ಮಾಡಿದೆ.

”ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನ ಗೌರವಿಸಲಿಲ್ಲ. ಈಗ ವಿಪಕ್ಷ ಸ್ಥಾನದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ಕಿಡಿಕಾರಿದೆ.

”ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು, ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಬಿಜೆಪಿ ಉತ್ತರಿಸಬೇಕು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

”ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ” ಎಂದು ವಾಗ್ದಾಳಿ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...