Homeಮುಖಪುಟಸೆಂಥಿಲ್ ಬಾಲಾಜಿ ಬಂಧನ ಪ್ರಕರಣ; ಮದ್ರಾಸ್ ಹೈಕೋರ್ಟ್‌ನಿಂದ ಭಿನ್ನಮತದ ತೀರ್ಪು

ಸೆಂಥಿಲ್ ಬಾಲಾಜಿ ಬಂಧನ ಪ್ರಕರಣ; ಮದ್ರಾಸ್ ಹೈಕೋರ್ಟ್‌ನಿಂದ ಭಿನ್ನಮತದ ತೀರ್ಪು

- Advertisement -
- Advertisement -

ತಮಿಳುನಾಡಿನ ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರ ವಿವಾದಾತ್ಮಕ ಬಂಧನ ಪ್ರಕರಣದಲ್ಲಿ ಬಾಲಾಜಿ ಅವರ ಪತ್ನಿ ಸಲ್ಲಿಸಿರುವ ಹೆಬಿಯಸ್ ಕಾರ್ಪಸ್‌ ಅರ್ಜಿ ಕುರಿತು ಮದ್ರಾಸ್ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ಭಿನ್ನಮತದ ತೀರ್ಪು ಪ್ರಕಟಿಸಿದೆ.

ಜೂನ್ 14ರ ಮಧ್ಯ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದಾರೆ. ಸೆಂಥಿಲ್ ಅವರಿಗೆ ಹೃದಯಾಘಾತವಾಗಿದ್ದು, ಬೈಪಾಸ್‌ ಸರ್ಜನಿ ಮಾಡಲಾಗಿದೆ. ತಮ್ಮ ಪತಿಯನ್ನು ಹುಡುಕಿಕೊಡಿ ಎಂದು ಸೆಂಥಿಲ್ ಅವರ ಪತ್ನಿ ಮದ್ರಾಸ್ ಹೈಕೋರ್ಟ್‌ನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಹೆಬಿಯಸ್‌ ಕಾರ್ಪಸ್‌ ಅರ್ಜಿಯ ವಿಚಾರಣೆಗೆ ನ್ಯಾಯಮೂರ್ತಿ ನಿಶಾ ಬಾನು ಜಿ ಒಪ್ಪಿಗೆ ನೀಡಿದ್ದರೆ, ನ್ಯಾಯಮೂರ್ತಿ ಭರತ್ ಚಕ್ರವರ್ತಿ ಭಿನ್ನ ತೀರ್ಪು ನೀಡಿದ್ದು,  ಬಂಧನದ ಆದೇಶಿಸಿದ ನಂತರ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಪ್ರಕರಣದ ವಿಚಾರಣೆಯನ್ನು ಎರಡಕ್ಕಿಂತ ಹೆಚ್ಚು ನ್ಯಾಯಾಧೀಶರನ್ನು ಒಳಗೊಂಡ ಪೀಠಕ್ಕೆ ವರ್ಗಾಹಿಸಲು ನಿರ್ಧರಿಸಲಾಗಿದೆ.

ಎಐಎಡಿಎಂಕೆ ಸರ್ಕಾರದಲ್ಲಿ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದರು. 2011 ಮತ್ತು 2016ರ ನಡುವೆ ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬಾಲಾಜಿ ಅವರೀಗ ಡಿಎಂಕೆಯಿಂದ ಆರಿಸಿ ಬಂದು ಸಚಿವರಾಗಿದ್ದಾರೆ. 2021ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಚೆನ್ನೈ ಪೊಲೀಸರು ಬಾಲಾಜಿ ಮತ್ತು ಇತರ 46 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮದ್ರಾಸ್ ಹೈಕೋರ್ಟ್ 2022ರಲ್ಲಿ ನೀಡಿದ್ದ ಆದೇಶವನ್ನು ಕಳೆದ ಮೇ ತಿಂಗಳಿನಲ್ಲಿ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ಈ ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಇದಾದ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯು ಬಾಲಾಜಿ ಅವರ ಮನೆ, ಅವರ ಕೆಲವು ಬೆಂಬಲಿಗರ ಮನೆ ಮತ್ತು ಕಚೇರಿಗಳ ಮೇಲೆ ಎಂಟು ದಿನಗಳ ಕಾಲ ದಾಳಿ ನಡೆಸಿತ್ತು.

ಇದನ್ನೂ ಓದಿ; ನಮ್ಮನ್ನು ಎದುರು ಹಾಕಿಕೊಂಡರೆ ದಕ್ಕಿಸಿಕೊಳ್ಳುವುದು ನಿಮ್ಮಿಂದ ಸಾಧ್ಯವಿಲ್ಲ: ಸೆಂಥಿಲ್ ಬಾಲಾಜಿ ಬಂಧನದ ಕುರಿತು ಬಿಜೆಪಿಗೆ ತಮಿಳುನಾಡು ಸಿಎಂ ಸ್ಟಾಲಿನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...