Homeಕರ್ನಾಟಕಮೋದಿಯ ಕರ್ನಾಟಕ ವಿರೋಧಿ ನೀತಿಯನ್ನು ಕನ್ನಡಿಗರು ಸಹಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

ಮೋದಿಯ ಕರ್ನಾಟಕ ವಿರೋಧಿ ನೀತಿಯನ್ನು ಕನ್ನಡಿಗರು ಸಹಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ, ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರೋಕ್ಷವಾಗಿ ನರೇಂದ್ರ ಮೋದಿಯ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ನಿನ್ನೆ ಸಿಎಂ ಯಡಿಯೂರಪ್ಪನವರು ಪ್ರವಾಹ ಪರಿಹಾರಕ್ಕೆ ಮನವಿ ಸಲ್ಲಿಸಲು ದೆಹಲಿಗೆ ತೆರಳಿದ್ದರು. ಪ್ರಧಾನಿ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದರೂ ಕೇಂದ್ರ ಸರ್ಕಾರ ಯಾವುದೇ ಪರಿಹಾರ ನೀಡದೇ, ಅಧ್ಯಯನ ತಂಡ ಕಳಿಸುವುದಾಗಿ ಹೇಳಿದೆ. ಅಂದರೆ ಕರ್ನಾಟಕದ ಜನರ ಮೇಲೆ ವಿಶ್ವಾಸವಿಡದೇ ಇಂತಹ ಸಂಕಷ್ಟದ ಕಾಲದಲ್ಲಿ ಪರಿಹಾರ ನೀಡದೇ ಮುಂದೂಡುತ್ತಿರುವುದು ಸರಿಯಲ್ಲ ಎಂದು ಹಲವರು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕದಿಂದ 25 ಎಂಪಿಗಳು ಬಿಜೆಪಿಯಿಂದ ಗೆದ್ದು ಹೋಗಿದ್ದರೂ ಸಹ ಬಿಜೆಪಿ ಕರ್ನಾಟಕಕ್ಕೆ ಅವಮಾನ ಮಾಡುತ್ತಿದೆ. ಅತಿ ದೊಡ್ಡ ಪ್ರವಾಹದಿಂದ ಕರ್ನಾಟಕ ನಲುಗಿಹೋಗಿರುವುದನ್ನು ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಕಣ್ಣಾರೆ ಕಂಡಿದ್ದಾರೆ. ಸಾಲದಕ್ಕೆ ಸದ್ಯ ಬಿಜೆಪಿ ಸರ್ಕಾರವೇ ಅಸ್ತಿತ್ವದಲ್ಲಿದೆ ಆದರೂ ಪರಿಹಾರಕ್ಕೆ ಮೀನಾಮೇಷ ಎಣಿಸುತ್ತಿರುವುದನ್ನು ಕನ್ನಡಿಗರು ಸಹಿಸುವುದಿಲ್ಲ ಎಂದಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರವು ಪ್ರಾರಂಭಿಸಿದ ಕೆಲವು ಜನರ ಪರವಾದ ಯೋಜನೆಗಳನ್ನು ಬಿಜೆಪಿ ಸರ್ಕಾರವು ಕಡಿತಗೊಳಿಸುತ್ತಿದೆ ಅಥವಾ ನಿರ್ಲಕ್ಷಿಸುತ್ತಿದೆ. ಅಂತಹ ಕ್ರಮವನ್ನು ಖಂಡಿಸುತ್ತೇವೆ ಮತ್ತು ಸಾಮಾನ್ಯ ಜನರ ಹಿತಾಸಕ್ತಿಗಳನ್ನು ಕಾಪಾಡಲು ರಾಜ್ಯದ್ಯಂತ ವ್ಯಾಪಕವಾದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನರೇಂದ್ರ ಮೋದಿಯವರ ನೀತಿ ನಿರೂಪಣೆಯ ಕಡೆಗಿನ ನಿರ್ಲಕ್ಷ್ಯ ಮತ್ತು ಅಸಡ್ಡೆ ವಿಧಾನದಿಂದ ಉಂಟಾಗಿರುವ ಈ ಆರ್ಥಿಕ ಕುಸಿತದಲ್ಲಿಯೂ ನಾವು ತಂದಿದ್ದ ಯೋಜನೆಗಳು ಜನರಿಗೆ ಬೆಂಬಲವಾಗಿ ಕಾರ್ಯನಿರ್ವಹಿಸುತ್ತಿವೆ. ನಮ್ಮ ಬಡವರ ಪರ ಯೋಜನೆಗಳಿಗೆ ಯಾವುದೇ ಅಡ್ಡಿ ಉಂಟು ಮಾಡಿದ್ದಲ್ಲಿ ಅನೇಕ ಕುಟುಂಬಗಳ ಜೀವನೋಪಾಯಕ್ಕೆ ಭಂಗ ತರುತ್ತದೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...