Homeಕರ್ನಾಟಕಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

ಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

- Advertisement -
- Advertisement -

ಶಿವಮೊಗ್ಗ ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದಾಗಿ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ದಲಿತ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ.

ಈ ಕುರಿತು ಇಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪನವರಿಗೆ ಮನವಿ ಸಲ್ಲಿಸಿ, ಸರ್ಕಾರವು ಕೂಡಲೇ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿದು ದಲಿತ ಅಭ್ಯರ್ಥಿಗಳಿಗೆ ಕಾನೂನಾತ್ಮಕವಾಗಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರವು 1995 ರಲ್ಲಿ ಆದೇಶಿಸಿರುವ 100 ರಿಕ್ತ ಸ್ಥಾನಗಳ ರೋಸ್ಟರ್‌ನಂತೆ, ಸರ್ಕಾರಿ ವಿಶ್ವವಿದ್ಯಾಲಯಗಳು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ವಿಷಯ/ವಿಭಾಗವನ್ನು ಒಂದು ಘಟಕ ಎಂದು ಪರಿಗಣಿಸಿ ಒಂದೊಂದು ವಿಭಾಗಕ್ಕೂ ಪ್ರತ್ಯೇಕ ರೋಸ್ಟರ್‌ ಅನ್ನು ಮಾಡುತ್ತವೆ. ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ ಮತ್ತು ಪಶು ವೈದ್ಯಕೀಯ ಸಂಬಂದಿತ ವಿಶ್ವವಿದ್ಯಾಲಯಗಳು ಸಹ ಇದನ್ನೇ ಅನುಸರಿಸುತ್ತಾ ಬಂದಿವೆ. ಶಿವಮೊಗ್ಗದ “ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸಹ 2015 ರಲ್ಲಿ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ವಿಷಯ/ವಿಭಾಗವಾರು ರೋಸ್ಟರ್‌ ಮಾಡಿದಾಗ ಒಟ್ಟು 85 ಸ್ಥಾನಗಳಲ್ಲಿ 41 ಸ್ಥಾನಗಳು ಪ.ಜಾ./ಪ.ಪಂ. ಅಭ್ಯರ್ಥಿಗಳಿಗೆ ಕಾನೂನುಬದ್ಧವಾಗಿ ಲಭಿಸಿತ್ತು. ಆದರೆ ಅದನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನೇಮಕಾತಿಯನ್ನೇ ರದ್ದು ಮಾಡಿದವು. ಅದೇ ವಿಶ್ವವಿದ್ಯಾಲಯ 2019 ರಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಹೊಸದಾಗಿ 109 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪ್ರಕಟಣೆ ಮಾಡಿತು. ಆದರೆ ಈ ಬಾರಿ ಇಡೀ ವಿಶ್ವವಿದ್ಯಾಲಯವನ್ನೇ ಒಂದು ಘಟಕ ಎಂದು ಪರಿಗಣಿಸಿ ತಪ್ಪಾದ ರೋಸ್ಟರ್ ಮಾಡಿದೆ. ಪರಿಣಾಮ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಕೇವಲ 21 ಸ್ಥಾನ ಸಿಕ್ಕಿವೆ ಎಂದು ಒಕ್ಕೂಟ ಆರೋಪಿಸಿದೆ.

ಚಿತ್ರಕೃಪೆ: ವಾರ್ತಾಭಾರತಿ

ರಾಜ್ಯ ಸರ್ಕಾರದ ರೋಸ್ಟರ್ ನಿಯಮಗಳ ಪ್ರಕಾರ ಯಾವುದೇ ಹೊಸ ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರೋಸ್ಟರ್ ಮಾಡುವಾಗ ಪ್ರಾರಂಭದ ಮೊದಲ ಬಿಂದು ಪರಿಶಿಷ್ಟ ಅಭ್ಯರ್ಥಿಗೆ, ಎರಡನೆ ಬಿಂದು ಸಾಮಾನ್ಯ ಅಭ್ಯರ್ಥಿಗೆ ಮತ್ತು 3 ನೇ ಬಿಂದು ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಿರುತ್ತದೆ ಮತ್ತು ಇತರ ಸಮುದಾಯಗಳ ಮೀಸಲಾತಿ ಮುಂದಿನ ಬಿಂದುಗಳಲ್ಲಿ ಬರುತ್ತದೆ. ಹೊಸ ವಿಶ್ವವಿದ್ಯಾಲಯಗಳಲ್ಲಿ ಹೊಸದಾಗಿ ವಿಭಾಗವಾರು ರೋಸ್ಟರ್ ಮಾಡಿದಾಗ, 1 ವಿಭಾಗಕ್ಕೆ ಕೇವಲ 2 ರಿಂದ 4 ಹುದ್ದೆಗಳನ್ನು ಮಾತ್ರ ತುಂಬುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೊದಲ ನೇಮಕಾತಿಯಲ್ಲಿ ಹೆಚ್ಚಿನ ಸ್ಥಾನಗಳು ದೊರೆಯುತ್ತಿರುವ ಹಾಗೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದರೆ ನಂತರದ ನೇಮಕಾತಿಯಲ್ಲಿ ಇತರ ಮೀಸಲು ವರ್ಗಗಳಿಗೂ ಸ್ಥಾನಗಳು ದೊರೆಯುತ್ತವೆ ಎಂಬುದು ವಾಸ್ತವ ಸಂಗತಿ. ಅಂತಹ ಪದ್ದತಿಯನ್ನು ಕೈಬಿಟ್ಟಿರುವುದು ಅನ್ಯಾಯ ಎಂದು ಅಭ್ಯರ್ಥಿಗಳು ದೂರಿದ್ದಾರೆ.

ಆರ್.ಕೆ.ಸಭರವಾಲ ಮತ್ತು ಇತರರು V/s ಸ್ಟೇಟ್ ಆಫ್ ಪಂಜಾಬ್ ಮತ್ತು ಇತರರು (10.02.1995.), ಡಾ.ರಾಜ್ ಕುಮಾರ್ ಮತ್ತು ಇತರರು V/s ಗುಲ್ಬರ್ಗಾ ವಿಶ್ವವಿದ್ಯಾಲಯ ಮತ್ತು ಇತರರು (20.06.1990) ಪ್ರಕರಣ ಸೇರಿದಂತೆ ದೇಶದಲ್ಲಿನ ಅನೇಕ ನ್ಯಾಯಾಲಯಗಳು ವಿಷಯವಾರು/ವಿಭಾಗವಾರು ರೋಸ್ಟರ್ ಮಾಡುವುದೇ ಸಂವಿಧಾನಾತ್ಮಕ ಎಂದಿವೆ.

ವಿವೇಕಾನಂದ ತಿವಾರಿ ಮತ್ತು ಇತರರು V/s ಯುನಿಯನ್ ಆಫ್ ಇಂಡಿಯ ಮತ್ತು ಇತರರು (07.04.2017) ಕೇಸಿನಲ್ಲಿ ಅಲಹಾಬಾದ್ ಹೈ ಕೋರ್ಟ್ ವಿಭಾಗ/ವಿಷಯವಾರು ರೋಸ್ಟರ್‌ ಮಾಡುವುದೇ ಸಂವಿಧಾನಾತ್ಮಕ ನ್ಯಾಯ ಎಂದಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸಹ ಅಲಹಾಬಾದ್ ಉಚ್ಚ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಯುಜಿಸಿಯು ಸಹ 2018 ಮಾರ್ಚ್ 5 ರಂದು ಆದೇಶ ಹೊರಡಿಸಿ ಎಂದಿನಂತೆ ವಿಭಾಗ/ವಿಷಯವಾರು ರೋಸ್ಟ‌ರ್ ಮಾಡಲು ಆದೇಶಿಸಿದೆ. ಆದರೆ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದವು ವಿಶ್ವವಿದ್ಯಾಲಯ ಒಂದು ಘಟಕವಾಗಿ ರೋಸ್ಟರ್ ಮಾಡಿರುವುದರಿಂದ ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದೆ.

ವಿಶ್ವವಿದ್ಯಾಲಯ ಒಂದು ಘಟಕವನ್ನಾಗಿ ಮಾಡಿದಾಗ ಕೆಲವು ವಿಭಾಗಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕೆಲವು ವಿಭಾಗಗಳಲ್ಲಿ ಮೀಸಲಾತಿ ಅಭ್ಯರ್ಥಿಗಳು ತುಂಬುತ್ತಾರೆ ಮತ್ತು ಸಂವಿಧಾನದ 14, 16ರ ವಿಧಿಯ ಅತಿಕ್ರಮಣ ಆಗುತ್ತದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು. ಮುಂದುವರಿದು ಒಂದು ವಿಭಾಗದವರು ಮತ್ತೊಂದು ವಿಭಾಗದವರೊಂದಿಗೆ ಅಥವಾ ಒಂದು ವಿಷಯದವರು ಮತ್ತೊಂದು ವಿಷಯದವರೊಂದಿಗೆ ಸ್ಪರ್ಧಾಳು ಅಲ್ಲ ಹಾಗೂ ವರ್ಗಾವಣೆ ಮಾಡಲು ಸಹ ಸಾಧ್ಯವಿಲ್ಲ, ಆದುದರಿಂದ ವಿಶ್ವವಿದ್ಯಾಲಯಗಳು ನೇರ ನೇಮಕಾತಿಯಲ್ಲಿ ವಿಭಾಗ/ವಿಷಯವಾರು ರೋಸ್ಟರ್‌ನ್ನು ಪಾಲಿಸಲು ತಿಳಿಸಿತು ಮತ್ತು ಅಲಹಾಬಾದ್ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಎತ್ತಿ ಹಿಡಿಯಿತು.

ಎಲ್ಲಾ ರೋಸ್ಟರ್ ಅಂಶಗಳನ್ನು ಗಮನಿಸಿದಾಗ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯವು ಸಾರ್ವಜನಿಕವಾಗಿ ರಾಜ್ಯ ಸರ್ಕಾರದ ಆದೇಶ, ಯುಜಿಸಿ ಆದೇಶ, ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ 50 ದಲಿತ ಆಕಾಂಕ್ಷಿಗಳ ಭವಿಷ್ಯತ್ತಿಗೆ ಕೊಡಲಿ ಪೆಟ್ಟನ್ನು ನೀಡಿರುವುದು ಸ್ಪಷ್ಟವಾಗಿದೆ. ಶೋಷಿತ ಸಮುದಾಯಗಳಲ್ಲಿ ಬೆರಳಣಿಕೆಯಷ್ಟು ಜನ ಪಿ.ಹೆಚ್.ಡಿಯನ್ನು ಮುಗಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಆದ್ದರಿಂದ ರಾಜ್ಯ ಸರ್ಕಾರವು ಪ್ರಸ್ತುತ ಪ್ರಗತಿಯಲ್ಲಿರುವ ನೇಮಕಾತಿಯನ್ನು ಕೂಡಲೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ರೋಸ್ಟರ್‌ಅನ್ನು ಅಳವಡಿಸಿ ವಂಚಿತ ಅಭ್ಯರ್ಥಿಗಳಿಗೆೆ ನ್ಯಾಯ ಕೊಡಿಸುವುದರ ಮೂಲಕ ಸಂವಿಧಾನಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ ಎಂದು ಒಕ್ಕೂಟ ಒತ್ತಾಯಿಸಿದೆ.

ಇದನ್ನೂ ಓದಿ; ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...