Homeಚಳವಳಿಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತಿರುವ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಲಿ: ವರದರಾಜೇಂದ್ರ

ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತಿರುವ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಲಿ: ವರದರಾಜೇಂದ್ರ

- Advertisement -
- Advertisement -

ರಾಜ್ಯದಲ್ಲಿ ಬಹುಚರ್ಚಿತ ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷಗಳಾಗಿವೆ. ಅದರ ಯಶಸ್ಸಿಗೆ ದುಡಿದ ಹಮಾಲಿ ಕಾರ್ಮಿಕರ ಬದುಕು ಮಾತ್ರ ಸುಧಾರಿಸಿಲ್ಲ. ಹಾಗಾಗಿ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಸಂದರ್ಭದಲ್ಲಾದರೂ ಮಹಾರಾಷ್ಟ್ರ ಮಾದರಿಯಲ್ಲಿ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಬೇಕು ಎಂದು ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ವರದರಾಜೇಂದ್ರ ಒತ್ತಾಯಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು “ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2013ರಲ್ಲಿ ಅಧಿಕಾರದಲ್ಲಿದ್ದಾಗ ಪಡಿತರ ವಿತರಣೆಯ ವ್ಯವಸ್ಥೆಗೆ ಅನ್ನಭಾಗ್ಯ ಯೋಜನೆಯೆಂದು ಹೆಸರಿಟ್ಟು, ಫ್ರೀಡಂ ಪಾರ್ಕಿನಲ್ಲಿ ಚಾಲನೆ ನೀಡಿದ್ದರು. ಆ ಮೂಲಕ ಸಮಗ್ರ ನೀತಿ ಜಾರಿ ಮಾಡಿ, ಬಡವರ ಬದುಕಿಗೆ ಬಹುದೊಡ್ಡ ಆಸರೆ ಕಲ್ಪಿಸಿದ್ದರು. ಅವರು ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬಗ್ಗೆಯೂ ಕಾಳಜಿ ವಹಿಸಬೇಕು” ಎಂದರು.

‘ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಅದೇಶವನ್ನು ಈ ಕೂಡಲೇ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿರುವ ಅವರು, “ಅನ್ನಭಾಗ್ಯ ಯೋಜನೆ ಜಾರಿ ಅಡಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಯಾವುದೇ ಸರ್ಕಾರದ ಅಧಿಕಾರಿಗಳು, ಗುತ್ತಿಗೆದಾರರು ಕಿರುಕುಳ ನೀಡಿ ಕೆಲಸದಿಂದ ಕಿತ್ತುಹಾಕುವುದನ್ನು ತಪ್ಪಿಸಲು ಕೆಲಸದ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

“ಸಮಾನ ಕೆಲಸಕ್ಕೆ ಸಮಾನ ವೇತನ ನೀತಿಯನ್ನು ಜಾರಿಗೆ ತರಬೇಕು. ಎಲ್ಲ ಗುತ್ತಿಗೆ, ಅಸಂಘಟಿತ ಹಾಗೂ ಅಭದ್ರಿತ ಕಾರ್ಮಿಕರಿಗೂ ಕನಿಷ್ಟ 30 ಸಾವಿರ ವೇತನ ಹಾಗೂ ಉದ್ಯೋಗ ಭದ್ರತೆಯನ್ನು ಖಾತ್ರಿಗೊಳಿಸಿ ನೀತಿ ರೂಪಿಸಬೇಕು. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ನಗದು ಹಣ ನೀಡುವುದನ್ನು ನಿಲ್ಲಿಸಿ ಆಹಾರ ಧಾನ್ಯಗಳನ್ನೇ ನೀಡಬೇಕು. ಅನ್ನಭಾಗ್ಯ ಹಮಾಲಿ ಕಾರ್ಮಿಕರಿಗೆ ಆಹಾರ ನಿಗಮದ ಮೂಲಕ ಸರ್ಕಾರವೇ ನೇರ ಸಂಬಳ ಪಾವತಿ ಮಾಡಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಜುಲೈ 10ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಲೋಡಿಂಗ್‌ ಮತ್ತು ಅನ್‌ಲೋಡಿಂಗ್‌ ಕಾರ್ಮಿಕರ ದಶಮಾನೋತ್ಸವ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರು, ಅನ್ನಭಾಗ್ಯ ಹಮಾಲಿ ಕಾರ್ಮಿಕರು, ಮೆಟ್ರೋ ಕಾರ್ಮಿಕರು, ವಾಣಿಜ್ಯ ತೆರಿಗೆ ಕಾರ್ಮಿಕರು, ಬಿಬಿಎಂಪಿ ಪೌರ ಕಾರ್ಮಿಕರು, ರೇಸ್ ಕೋರ್ಸ್‌ ಕಾರ್ಮಿಕರು, ಆರೋಗ್ಯ ಸಾರಿಗೆ ಮುಂತಾದ ಇಲಾಖೆಗಳ ಕಾರ್ಮಿಕರೂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ, ಕಾರ್ಮಿಕ ಸಚಿವ ಸಂತೋಷ್ ಲಾಡ್‌, ಹಿರಿಯ ಕಾರ್ಮಿಕ ಮುಖಂಡ, ಹಿರಿಯ ಹೈಕೋರ್ಟ್ ವಕೀಲ ಎಸ್.ಬಾಲನ್, ಪ್ರೊ. ಬಾಬು ಮಾಥ್ಯೂ, ಸಾಮಾಜಿಕ ಕಾರ್ಯಕರ್ತರಾದ ಡಾ.ಹೆಚ್ ವಿ ವಾಸು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಆದಿನಾರಾಯಣ್, ರವಿ ಮೋಹನ್, ಬಿಬಿಎಂಪಿ ಪೌರ ಕಾರ್ಮಿಕ ಸಂಘದ ಚನ್ನಮ್ಮ ಉಪಸ್ಥಿತರಿದ್ದರು.

ಇದನ್ನೂ ಓದಿ: ಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...