Homeಚಳವಳಿಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತಿರುವ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಲಿ: ವರದರಾಜೇಂದ್ರ

ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತಿರುವ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಲಿ: ವರದರಾಜೇಂದ್ರ

- Advertisement -
- Advertisement -

ರಾಜ್ಯದಲ್ಲಿ ಬಹುಚರ್ಚಿತ ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷಗಳಾಗಿವೆ. ಅದರ ಯಶಸ್ಸಿಗೆ ದುಡಿದ ಹಮಾಲಿ ಕಾರ್ಮಿಕರ ಬದುಕು ಮಾತ್ರ ಸುಧಾರಿಸಿಲ್ಲ. ಹಾಗಾಗಿ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಸಂದರ್ಭದಲ್ಲಾದರೂ ಮಹಾರಾಷ್ಟ್ರ ಮಾದರಿಯಲ್ಲಿ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಯಾಗಬೇಕು ಎಂದು ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ವರದರಾಜೇಂದ್ರ ಒತ್ತಾಯಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು “ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2013ರಲ್ಲಿ ಅಧಿಕಾರದಲ್ಲಿದ್ದಾಗ ಪಡಿತರ ವಿತರಣೆಯ ವ್ಯವಸ್ಥೆಗೆ ಅನ್ನಭಾಗ್ಯ ಯೋಜನೆಯೆಂದು ಹೆಸರಿಟ್ಟು, ಫ್ರೀಡಂ ಪಾರ್ಕಿನಲ್ಲಿ ಚಾಲನೆ ನೀಡಿದ್ದರು. ಆ ಮೂಲಕ ಸಮಗ್ರ ನೀತಿ ಜಾರಿ ಮಾಡಿ, ಬಡವರ ಬದುಕಿಗೆ ಬಹುದೊಡ್ಡ ಆಸರೆ ಕಲ್ಪಿಸಿದ್ದರು. ಅವರು ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬಗ್ಗೆಯೂ ಕಾಳಜಿ ವಹಿಸಬೇಕು” ಎಂದರು.

‘ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಅದೇಶವನ್ನು ಈ ಕೂಡಲೇ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿರುವ ಅವರು, “ಅನ್ನಭಾಗ್ಯ ಯೋಜನೆ ಜಾರಿ ಅಡಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಯಾವುದೇ ಸರ್ಕಾರದ ಅಧಿಕಾರಿಗಳು, ಗುತ್ತಿಗೆದಾರರು ಕಿರುಕುಳ ನೀಡಿ ಕೆಲಸದಿಂದ ಕಿತ್ತುಹಾಕುವುದನ್ನು ತಪ್ಪಿಸಲು ಕೆಲಸದ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

“ಸಮಾನ ಕೆಲಸಕ್ಕೆ ಸಮಾನ ವೇತನ ನೀತಿಯನ್ನು ಜಾರಿಗೆ ತರಬೇಕು. ಎಲ್ಲ ಗುತ್ತಿಗೆ, ಅಸಂಘಟಿತ ಹಾಗೂ ಅಭದ್ರಿತ ಕಾರ್ಮಿಕರಿಗೂ ಕನಿಷ್ಟ 30 ಸಾವಿರ ವೇತನ ಹಾಗೂ ಉದ್ಯೋಗ ಭದ್ರತೆಯನ್ನು ಖಾತ್ರಿಗೊಳಿಸಿ ನೀತಿ ರೂಪಿಸಬೇಕು. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ನಗದು ಹಣ ನೀಡುವುದನ್ನು ನಿಲ್ಲಿಸಿ ಆಹಾರ ಧಾನ್ಯಗಳನ್ನೇ ನೀಡಬೇಕು. ಅನ್ನಭಾಗ್ಯ ಹಮಾಲಿ ಕಾರ್ಮಿಕರಿಗೆ ಆಹಾರ ನಿಗಮದ ಮೂಲಕ ಸರ್ಕಾರವೇ ನೇರ ಸಂಬಳ ಪಾವತಿ ಮಾಡಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಜುಲೈ 10ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಲೋಡಿಂಗ್‌ ಮತ್ತು ಅನ್‌ಲೋಡಿಂಗ್‌ ಕಾರ್ಮಿಕರ ದಶಮಾನೋತ್ಸವ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರು, ಅನ್ನಭಾಗ್ಯ ಹಮಾಲಿ ಕಾರ್ಮಿಕರು, ಮೆಟ್ರೋ ಕಾರ್ಮಿಕರು, ವಾಣಿಜ್ಯ ತೆರಿಗೆ ಕಾರ್ಮಿಕರು, ಬಿಬಿಎಂಪಿ ಪೌರ ಕಾರ್ಮಿಕರು, ರೇಸ್ ಕೋರ್ಸ್‌ ಕಾರ್ಮಿಕರು, ಆರೋಗ್ಯ ಸಾರಿಗೆ ಮುಂತಾದ ಇಲಾಖೆಗಳ ಕಾರ್ಮಿಕರೂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ, ಕಾರ್ಮಿಕ ಸಚಿವ ಸಂತೋಷ್ ಲಾಡ್‌, ಹಿರಿಯ ಕಾರ್ಮಿಕ ಮುಖಂಡ, ಹಿರಿಯ ಹೈಕೋರ್ಟ್ ವಕೀಲ ಎಸ್.ಬಾಲನ್, ಪ್ರೊ. ಬಾಬು ಮಾಥ್ಯೂ, ಸಾಮಾಜಿಕ ಕಾರ್ಯಕರ್ತರಾದ ಡಾ.ಹೆಚ್ ವಿ ವಾಸು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಆದಿನಾರಾಯಣ್, ರವಿ ಮೋಹನ್, ಬಿಬಿಎಂಪಿ ಪೌರ ಕಾರ್ಮಿಕ ಸಂಘದ ಚನ್ನಮ್ಮ ಉಪಸ್ಥಿತರಿದ್ದರು.

ಇದನ್ನೂ ಓದಿ: ಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...