Homeಮುಖಪುಟಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ...

ಸಿದ್ದರಾಮಯ್ಯ ಬಜೆಟ್: ವಿಪಕ್ಷಗಳ ಪ್ರತಿಕ್ರಿಯೆ ಹೀಗಿದೆ…

- Advertisement -
- Advertisement -

ಇಂದು ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ಪ್ರತಿಪಕ್ಷಿಗಳು ಟೀಕಾಪ್ರಹಾರ ನಡೆಸಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷ ಇದೊಂದು ನಿರಾಶಾದಾಯಕ ಬಜೆಟ್ ಎಂದು ಕರೆದಿವೆ.

ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ ಬಜೆಟ್: ಬಸವರಾಜ ಬೊಮ್ಮಾಯಿ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್..: ಹೆಚ್.ಡಿ ಕುಮಾರಸ್ವಾಮಿ

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಜೆಟ್ಟಿನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು; ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೇ ಈ ಬಜೆಟ್ ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದೆ: ಪೃಥ್ವಿ ರೆಡ್ಡಿ

ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಬಜೆಟ್‌ ಭರವಸೆ ನೀಡಿದ್ದಾರೆ. ವಾಸ್ತವದಲ್ಲಿ ಇಂದು ಮಂಡಿಸಿರುವ ಬಜೆಟ್‌ನಲ್ಲಿ ಶೇ.109ರಷ್ಟು ಆದಾಯ ಕೊರತೆ ಹೆಚ್ಚಳವಾಗಿದ್ದು, ಅದು ದುಪ್ಪಟ್ಟಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳು ಕೇವಲ ಮತಕ್ಕಾಗಿಯೇ ಹೊರತು ಮತದಾರರಿಗಾಗಿ ಅಲ್ಲ.

ಕರ್ನಾಟಕದ ಜನರು “ಖಾತರಿ”ಗಳಿಂದ ವಂಚಿಸಿದ್ದಾರೆ, ವಾಸ್ತವದಲ್ಲಿ ಕಾಂಗ್ರೆಸ್ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು ಎರಡು ಕೈಯಿಂದ ತೆಗೆದುಕೊಳ್ಳುತ್ತಿದೆ ಎಂಬುದನ್ನು ಬಜೆಟ್ ಬಹಿರಂಗಪಡಿಸುತ್ತದೆ. ಕೃಷಿ ಮತ್ತು ತೋಟಗಾರಿಕೆ ಶೇ.25ರಷ್ಟು ಕಡಿಮೆಯಾಗಿದೆ. ಸಮಾಜ ಕಲ್ಯಾಣ 42% ರಷ್ಟು ಕಡಿಮೆಯಾಗಿದೆ. ಸಹಕಾರ 16% ಕಡಿಮೆಯಾಗಿದೆ. ಅರಣ್ಯ, ಪರಿಸರ ಮತ್ತು ಪರಿಸರವನ್ನು 67% ರಷ್ಟು ಕಡಿತಗೊಳಿಸಲಾಗಿದೆ. ಹಾಲು ಶೇ.2ರಷ್ಟು ಕಡಿತವಾಗಿದೆ. ಸಾರ್ವಜನಿಕ ಸಾಲವನ್ನು ಸುಮಾರು 19000 ಕೋಟಿ ಅಥವಾ 28% ರಷ್ಟು ಹೆಚ್ಚಿಸುವ ಮೂಲಕ, ಅದೂ ಮುಖ್ಯವಾಗಿ ಮುಕ್ತ ಮಾರುಕಟ್ಟೆಯಿಂದ .ಸಾಲ ಮತ್ತು ಬಡ್ಡಿಯ ಮರುಪಾವತಿಯು ಪ್ರಾಮಾಣಿಕ ತೆರಿಗೆದಾರರ ಮೇಲೆ ಮತ್ತಷ್ಟು ಹೊರೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; 2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...