Homeಮುಖಪುಟಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR...

ಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR ದಾಖಲು

- Advertisement -
- Advertisement -

ಸಿಧಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿ ಟೀಕಿಸಿ ಕಾರ್ಟೂನ್ ಟ್ವೀಟ್ ಮಾಡಿರುವ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಶುಕ್ರವಾರ ಭೋಪಾಲೋನ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಗಾಯಕಿ ನೇಹಾ ಸಿಂಗ್ ಅವರ ಟ್ವೀಟ್‌ನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂದು ಹೇಳಲಾಗಿದೆ. ಎಎನ್‌ಐ ಪ್ರಕಾರ, ಆರ್‌ಎಸ್‌ಎಸ್ ಉಡುಪಿನ ವ್ಯಕ್ತಿಯೊಬ್ಬರು ಮತ್ತೋರ್ವ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಆ ಚಿತ್ರದಲ್ಲಿ ಚಿತ್ರಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೇ ಚಿತ್ರಿಸುವಂತೆ ಈ ಟ್ವೀಟ್ ಮಾಡಲಾಗಿದೆ. ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ಮುಖಂಡನು ಬುಡಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದನು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಶುಕ್ಲಾ ಅವರನ್ನು ಬಂಧಿಸಲಾಗಿದೆ.

ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಂಡನೆ ವ್ಯಕ್ತವಾಯಿತು. ಆ ಬಳಿಕ ಆರೋಪಿಯನ್ನು ಬಂಧಿಸಿ ಎನ್‌ಎಸ್‌ಸಿ ಪ್ರಕರಣ ದಾಖಲಿಸಲಾಗಿದೆ.

ಇದೀಗ ಈ ಪ್ರಕರಣವನ್ನು ಟೀಕಿಸಿ ಟ್ವೀಟ್ ಮಾಡಿರುವವರ ವಿರುದ್ಧ ರಾಜ್ಯ ಬಿಜೆಪಿ ಸಮರ ಸಾರಿದ್ದು, ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಬೀಬ್‌ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೀಶ್ ಸಿಂಗ್ ಭಡೋರಿಯಾ, ”ನಾವು ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ” ಎಂದು ಹೇಳಿದ್ದಾರೆ.

”ನಾವು ಟ್ವಿಟರ್ ಕಂಪನಿಯಿಂದ ಖಾತೆದಾರರ ಬಗ್ಗೆ ಮಾಹಿತಿಯನ್ನು ಪಡೆಯುತ್ತೇವೆ. ಈ ರೀತಿಯ ಟ್ವೀಟ್‌ನ್ನು ಬೇರೆ ಯಾವುದೇ ವ್ಯಕ್ತಿ ಹಾಕಿದ್ದಾರೆಯೇ ಎಂಬುದು ತನಿಖೆಯ ನಂತರ ಸ್ಪಷ್ಟವಾಗುತ್ತದೆ. ಆರೆಸ್ಸೆಸ್ ಮತ್ತು ಬುಡಕಟ್ಟು ಸಮುದಾಯದ ನಡುವೆ ವೈಷಮ್ಯವನ್ನು ಹುಟ್ಟುಹಾಕಿದ ಆರೋಪ ಗಾಯಕಿಯ ಮೇಲಿದೆ” ಎಂದು ಅವರು ತಿಳಿಸಿದ್ದಾರೆ.

ಇದೀಗ ಈ ಘಟನೆ ಕುರಿತು ಹೇಳಿಕೆ ನೀಡಿರುವ ಸಂತ್ರಸ್ತ ದಶಮತ್ ರಾವತ್, ”ಆರೋಪಿಯಿಂದ ತಪ್ಪಾಗಿದೆ. ಅವರಿಗೆ ತಪ್ಪಿನ ಅರಿವಾಗಿದೆ. ಅವರನ್ನು ಬಿಡುಗಡೆಗೊಳಿಸಿ” ಎಂದು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

ಏನಿದು ಘಟನೆ:

ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯನ್ನು ದಾಖಲು ಮಾಡಿದ್ದಾರೆ.

ಆರೋಪಿ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾನನ್ನು ಬಂಧಿಸಲು ಹಲವಾರು ತಂಡಗಳನ್ನು ಕಳುಹಿಸಲಾಗಿತ್ತು. ಆರೋಪಿ ತನ್ನ ಸ್ಥಳಗಳನ್ನು ಬದಲಾಯಿಸುತ್ತಿದ್ದ ಕೊನೆಗೂ ಅವರನ್ನು ಪತ್ತೆಹಚ್ಚುವಲ್ಲಿ ಮಧ್ಯಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ನಿನ್ನೆ ತಡರಾತ್ರಿ ಆತನನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಪೊಲೀಸರು, NSA ಜೊತೆಗೆ, ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು SC/ST (ದೌರ್ಜನ್ಯ ತಡೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದು ಸುಮಾರು ಮೂರು ತಿಂಗಳ ಹಿಂದಿನ ವೀಡಿಯೋ ಎನ್ನುವುದು ಗೊತ್ತಾಗಿದೆ. ಈ ವಿಚಾರ ತಿಳಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಆರೋಪಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

ವಿಪಕ್ಷಗಳಿಂದ ಟೀಕೆ: 

”ಶುಕ್ಲಾ ಅವರು ಬಿಜೆಪಿಯ ಸಿದ್ಧಿ ಶಾಸಕ ಕೇದಾರನಾಥ್ ಶುಕ್ಲಾ ಅವರ ಸಹವರ್ತಿ” ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ಮತ್ತು ಅದರ ಶಾಸಕರು ನಿರಾಕರಿಸಿದ್ದಾರೆ.

ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‌ಪಿ ವರಿಷ್ಠೆ ಮಾಯಾವತಿ, ”ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಆ ಕ್ರಿಮಿನಲ್ ವಿರುದ್ಧ ಎನ್‌ಎಸ್‌ಎ ಮಾತ್ರವಲ್ಲದೆ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರು ತಮ್ಮ ಪಕ್ಷಕ್ಕೆ ಸೇರಿದವರು ಎಂದು ಹೇಳುತ್ತಿಲ್ಲ. ಇಂತಹ ಘಟನೆಗಳು ಎಲ್ಲರಿಗೂ ನಾಚಿಕೆ ತರುತ್ತವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...