Homeಮುಖಪುಟದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ: ಮಧ್ಯಪ್ರದೇಶದಲ್ಲಿ ಮುಂದುವರೆದ ಜಾತಿ ದೌರ್ಜನ್ಯ

ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ: ಮಧ್ಯಪ್ರದೇಶದಲ್ಲಿ ಮುಂದುವರೆದ ಜಾತಿ ದೌರ್ಜನ್ಯ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಇತ್ತಿಚೆಗೆ ಆದಿವಾಸಿ ವ್ಯಕ್ತಿ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ, ಹೇಯ ಕೃತ್ಯ ಬಹಿರಂಗವಾಗಿದೆ. ಇಬ್ಬರು ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ ಮಾಡಲಾಗಿದೆ.

ಮಧ್ಯಪ್ರದೇಶದ ಶಿವಗಿರಿ ಎಂಬಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರ ಮುಖಕ್ಕೆ ಮಸಿ ಬಳಿದು, ಮಲ ತಿನಿಸಿ, ಚಪ್ಪಲಿ ಹಾರ ಹಾಕಿ ಊರೆಲ್ಲಾ ಮೆರವಣಿಗೆ ಮಾಡಲಾಗಿದೆ. ಅಲ್ಲದೆ ಅವರ ಮನೆಯನ್ನೂ ದ್ವಂಸ ಮಾಡಲಾಗಿದೆ.

ಈ ಘಟನೆ ಜೂನ್​ 30ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 7 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶಿವಪುರಿ ಎಸ್‌ಪಿ ರಘುವಂಶ್ ಸಿಂಗ್ ಭಡೋರಿಯಾ, ಜೂನ್ 30 ರಂದು ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ದಲಿತ ಯುವಕರ ಮೇಲೆ ದೌರ್ಜನ್ಯ ನಡೆದಿತ್ತು. ದೌರ್ಜನ್ಯ ನಡೆಸಿರುವ ವಿಡಿಯೋ ಬುಧವಾರ ವೈರಲ್ ಆದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ” ಎಂದು ತಿಳಿಸಿದ್ದಾರೆ.

”ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ನಿರ್ದೇಶನದ ಮೇರೆಗೆ ಯುವಕರ ಮೇಲೆ ದೌರ್ಜನ್ಯ ನಡೆಸಿದ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಕೇಸ್ ಹಾಕಲಾಗಿದೆ” ಎಂದು ತಿಳಿಸಿದರು.

”ಆರೋಪಿ ಕುಟುಂಬದ ಯುವತಿ(26)ಯೊಂದಿಗೆ 23 ಮತ್ತು 24 ವರ್ಷ ವಯಸ್ಸಿನ ಇಬ್ಬರು ದಲಿತ ಯುವಕರು ಫೋನ್‌ನಲ್ಲಿ ಮಾತನಾಡಿದ್ದಾರೆ. ಈ ವಿಷಯ ತಿಳಿದ ಮನೆಯವರು ಆ ಇಬ್ಬರು ಯುವಕರನ್ನು ಮನೆಗೆ ಕರೆಸುವಂತೆ ಯುವತಿಗೆ ಒತ್ತಾಯಿಸಿದ್ದಾರೆ. ಅದರಂತೆ ಯುವಕರ ಜೂನ್ 30ರಂದು ಯುವತಿಯ ಮನೆಗೆ ಬಂದಾಗ ಕುಟುಂಬಸ್ಥರೆಲ್ಲ ಸೇರಿಕೊಂಡು ಯುವಕರ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ” ಎಂದು ಎಸ್​ಪಿ ಭಡೋರಿಯಾ ಹೇಳಿದ್ದಾರೆ.

”ತಮ್ಮ ಮನೆಯ ಯುವತಿಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಸಾಬೀತಾಗಿದ್ದು ಆರೋಪಿಗಳು ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ” ಎಂದು ದಲಿತ ಯುವಕರು ಕಣ್ಣೀರಿಟ್ಟಿದ್ದಾರೆ.

”ನಮ್ಮನ್ನು ಭೇಟಿಯಾಗಲು ಕರೆದ ನಂತರ ನಾವು ಅವರ ಮನೆಗೆ ಹೋದೆವು. ನಾವು ಯಾವುದೇ ಅಪರಾಧ ಮಾಡಿಲ್ಲ” ಎಂದು ದೌರ್ಜನ್ಯಕ್ಕೊಳಗಾದ ಇಬ್ಬರು ಯುವಕರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಆದಿವಾಸಿ ಯುವಕನ ಮುಖದ ಮೇಲೆ ಬಿಜೆಪಿ ಮುಖಂಡನಿಂದ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...