Homeಮುಖಪುಟಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

ಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಸಂಬಂದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಶುಕ್ರವಾರ BBCಗೆ  ಹೊಸ ಸಮನ್ಸ್ ನೀಡಿದೆ.

ಬಿಬಿಸಿ ಜೊತೆಗೆ ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಮಾನನಷ್ಟ ದೂರು ದಾಖಲಿಸಿದ್ದು, ”ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡದಿದ್ದರೂ, ವಿಕಿಪೀಡಿಯಾದಲ್ಲಿ ಅದನ್ನು ವೀಕ್ಷಿಸಲು ಲಿಂಕ್‌ಗಳನ್ನು ಒದಗಿಸುತ್ತದೆ ಮತ್ತು ಆ ಬಗ್ಗೆ ಇಂಟರ್ನೆಟ್ ಆರ್ಕೈವ್‌ನಲ್ಲಿ ವಿಷಯವು ಇನ್ನೂ ಲಭ್ಯವಿದೆ” ಎಂದು ಅವರು ಆರೋಪಿಸಿದ್ದಾರೆ.

ವಿಕಿಮೀಡಿಯಾ ಫೌಂಡೇಶನ್ ವಿಕಿಪೀಡಿಯಾ ವೆಬ್‌ಸೈಟ್‌ಗೆ ಹಣ ನೀಡುತ್ತದೆ. ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಎರಡೂ ಅಮೇರಿಕನ್ ಕಂಪನಿಗಳಾಗಿವೆ, ಆದರೆ BBC ಬ್ರಿಟಿಷ್ ಮಾಧ್ಯಮ ಸಂಸ್ಥೆಯಾಗಿದೆ.

ಮೇ 3 ರಂದು, ನ್ಯಾಯಾಲಯವು ಮೊದಲು ಸಮನ್ಸ್ ಜಾರಿಗೊಳಿಸಿದಾಗ, ಇಂಗ್ಲೆಂಡ್ ಮತ್ತು ಅಮೆರಿಕದಲ್ಲಿರುವ ಎರಡು ವಿದೇಶಿ ಘಟಕಗಳ ವಕೀಲರು ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಹೂಡುವ ಅಧಿಕಾರ ಇಲ್ಲ ಎಂದು ಹೇಳಿದ್ದರು.

”ಹೇಗ್ ಕನ್ವೆನ್ಷನ್ ಮತ್ತು ಭಾರತ ಸರ್ಕಾರದ ನಿಯಮಗಳ ಪ್ರಕಾರ, ವಿದೇಶಗಳಲ್ಲಿ ಸಮನ್ಸ್ ಅಥವಾ ನೋಟಿಸ್‌ಗಳನ್ನು ಕಾನೂನು ವ್ಯವಹಾರಗಳ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಮಾತ್ರ ಜಾರಿಗೊಳಿಸಬಹುದು ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರುಚಿಕಾ ಸಿಂಗ್ಲಾ ಗಮನಿಸಿದ್ದಾರೆ” ಎಂದು ದಿ ಹಿಂದೂ ವರದಿ ಮಾಡಿದೆ.

ಇದೀಗ ನ್ಯಾಯಾಲಯವು ಎರಡೂ ವಿದೇಶಿ ಸಂಸ್ಥೆಗಳಿಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಶುಕ್ರವಾರ ಹೊಸ ಸಮನ್ಸ್ ನೀಡಲಾಗಿದೆ.

”ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ಬಿಬಿಸಿ ಜನವರಿ 17ರಂದು ಬಿಡುಗಡೆ ಮಾಡಿತ್ತು. 2002ರ ಗುಜರಾತ್ ಗಲಭೆಗಳ ಕುರಿತು ಮತ್ತು ಇದರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮೋದಿಯವರ ಪಾತ್ರ ಏನು ಎಂಬ ಬಗ್ಗೆ ಸಾಕ್ಷ್ಯಚಿತ್ರ ತೋರಿಸಿದೆ. ಹಿಂಸಾಚಾರಕ್ಕೆ ಕಾರಣವಾದವರ ವಿರುದ್ಧ ಶಿಕ್ಷೆಯಿಲ್ಲದ ವಾತಾವರಣಕ್ಕೆ ಮುಖ್ಯಮಂತ್ರಿ ನೇರ ಹೊಣೆಗಾರರಾಗಿದ್ದರು ಎಂದು ಆ ಸಾಕ್ಷ್ಯಚಿತ್ರಗಳು ಹೇಳುತ್ತವೆ. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

ಯುನೈಟೆಡ್ ಕಿಂಗ್‌ಡಮ್ ಸರ್ಕಾರದಿಂದ ಕಳುಹಿಸಲಾದ ತನಿಖಾಧಿಕಾರಿಗಳಲ್ಲಿ ಮಾಜಿ ಹಿರಿಯ ರಾಜತಾಂತ್ರಿಕರನ್ನು ಒಳಗೊಂಡಿತ್ತು. ಅವರಲ್ಲಿ ಒಬ್ಬರು ಸಾಕ್ಷ್ಯಚಿತ್ರದಲ್ಲಿ ಮಾತನಾಡಿದ್ದು, ಈ ಹಿಂಸಾಚಾರವನ್ನು ಆರ್‌ಎಸ್ಎಸ್‌ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್‌ನಿಂದ ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಆಡಳಿತಾರೂಢ ಬಿಜೆಪಿ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜನವರಿ 21ರಂದು, ಕೇಂದ್ರವು ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಯೂಟ್ಯೂಬ್ ಮತ್ತು ಟ್ವಿಟರ್‌ಗೆ ನಿರ್ದೇಶಿಸಿತ್ತು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಾಕ್ಷ್ಯಚಿತ್ರವನ್ನು ರಾಜಕೀಯ ದುರುದ್ದೇಶ ಎಂದು ಕರೆದಿದ್ದರು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ ಎಂದು ಸಿಂಗ್ ತಮ್ಮ ಮನವಿಯಲ್ಲಿ ಆರೋಪಿಸಿದ್ದಾರೆ. ಸಾಕ್ಷ್ಯಚಿತ್ರವನ್ನು ಪ್ರಕಟಿಸದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದ್ದಾರೆ.

ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಗೆ ಬೇಷರತ್ ಕ್ಷಮೆಯಾಚಿಸಲು ಮತ್ತು 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಬಿಬಿಸಿ, ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ನಿರ್ದೇಶನ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ಬಿಬಿಸಿ ಸಾಕ್ಷ್ಯಚಿತ್ರವನ್ನು ಅಕ್ರಮವಾಗಿ ನಿಷೇಧಿಸಿದ್ದು ಹೇಗೆ?: ಸಾಕೇತ್ ಗೋಖಲೆ ಹಂಚಿಕೊಂಡ ವಿವರವಾದ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...