Homeಮುಖಪುಟಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

ಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಸಂಬಂದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಶುಕ್ರವಾರ BBCಗೆ  ಹೊಸ ಸಮನ್ಸ್ ನೀಡಿದೆ.

ಬಿಬಿಸಿ ಜೊತೆಗೆ ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಮಾನನಷ್ಟ ದೂರು ದಾಖಲಿಸಿದ್ದು, ”ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡದಿದ್ದರೂ, ವಿಕಿಪೀಡಿಯಾದಲ್ಲಿ ಅದನ್ನು ವೀಕ್ಷಿಸಲು ಲಿಂಕ್‌ಗಳನ್ನು ಒದಗಿಸುತ್ತದೆ ಮತ್ತು ಆ ಬಗ್ಗೆ ಇಂಟರ್ನೆಟ್ ಆರ್ಕೈವ್‌ನಲ್ಲಿ ವಿಷಯವು ಇನ್ನೂ ಲಭ್ಯವಿದೆ” ಎಂದು ಅವರು ಆರೋಪಿಸಿದ್ದಾರೆ.

ವಿಕಿಮೀಡಿಯಾ ಫೌಂಡೇಶನ್ ವಿಕಿಪೀಡಿಯಾ ವೆಬ್‌ಸೈಟ್‌ಗೆ ಹಣ ನೀಡುತ್ತದೆ. ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಎರಡೂ ಅಮೇರಿಕನ್ ಕಂಪನಿಗಳಾಗಿವೆ, ಆದರೆ BBC ಬ್ರಿಟಿಷ್ ಮಾಧ್ಯಮ ಸಂಸ್ಥೆಯಾಗಿದೆ.

ಮೇ 3 ರಂದು, ನ್ಯಾಯಾಲಯವು ಮೊದಲು ಸಮನ್ಸ್ ಜಾರಿಗೊಳಿಸಿದಾಗ, ಇಂಗ್ಲೆಂಡ್ ಮತ್ತು ಅಮೆರಿಕದಲ್ಲಿರುವ ಎರಡು ವಿದೇಶಿ ಘಟಕಗಳ ವಕೀಲರು ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಹೂಡುವ ಅಧಿಕಾರ ಇಲ್ಲ ಎಂದು ಹೇಳಿದ್ದರು.

”ಹೇಗ್ ಕನ್ವೆನ್ಷನ್ ಮತ್ತು ಭಾರತ ಸರ್ಕಾರದ ನಿಯಮಗಳ ಪ್ರಕಾರ, ವಿದೇಶಗಳಲ್ಲಿ ಸಮನ್ಸ್ ಅಥವಾ ನೋಟಿಸ್‌ಗಳನ್ನು ಕಾನೂನು ವ್ಯವಹಾರಗಳ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಮಾತ್ರ ಜಾರಿಗೊಳಿಸಬಹುದು ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರುಚಿಕಾ ಸಿಂಗ್ಲಾ ಗಮನಿಸಿದ್ದಾರೆ” ಎಂದು ದಿ ಹಿಂದೂ ವರದಿ ಮಾಡಿದೆ.

ಇದೀಗ ನ್ಯಾಯಾಲಯವು ಎರಡೂ ವಿದೇಶಿ ಸಂಸ್ಥೆಗಳಿಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಶುಕ್ರವಾರ ಹೊಸ ಸಮನ್ಸ್ ನೀಡಲಾಗಿದೆ.

”ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ಬಿಬಿಸಿ ಜನವರಿ 17ರಂದು ಬಿಡುಗಡೆ ಮಾಡಿತ್ತು. 2002ರ ಗುಜರಾತ್ ಗಲಭೆಗಳ ಕುರಿತು ಮತ್ತು ಇದರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮೋದಿಯವರ ಪಾತ್ರ ಏನು ಎಂಬ ಬಗ್ಗೆ ಸಾಕ್ಷ್ಯಚಿತ್ರ ತೋರಿಸಿದೆ. ಹಿಂಸಾಚಾರಕ್ಕೆ ಕಾರಣವಾದವರ ವಿರುದ್ಧ ಶಿಕ್ಷೆಯಿಲ್ಲದ ವಾತಾವರಣಕ್ಕೆ ಮುಖ್ಯಮಂತ್ರಿ ನೇರ ಹೊಣೆಗಾರರಾಗಿದ್ದರು ಎಂದು ಆ ಸಾಕ್ಷ್ಯಚಿತ್ರಗಳು ಹೇಳುತ್ತವೆ. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

ಯುನೈಟೆಡ್ ಕಿಂಗ್‌ಡಮ್ ಸರ್ಕಾರದಿಂದ ಕಳುಹಿಸಲಾದ ತನಿಖಾಧಿಕಾರಿಗಳಲ್ಲಿ ಮಾಜಿ ಹಿರಿಯ ರಾಜತಾಂತ್ರಿಕರನ್ನು ಒಳಗೊಂಡಿತ್ತು. ಅವರಲ್ಲಿ ಒಬ್ಬರು ಸಾಕ್ಷ್ಯಚಿತ್ರದಲ್ಲಿ ಮಾತನಾಡಿದ್ದು, ಈ ಹಿಂಸಾಚಾರವನ್ನು ಆರ್‌ಎಸ್ಎಸ್‌ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್‌ನಿಂದ ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಆಡಳಿತಾರೂಢ ಬಿಜೆಪಿ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜನವರಿ 21ರಂದು, ಕೇಂದ್ರವು ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಯೂಟ್ಯೂಬ್ ಮತ್ತು ಟ್ವಿಟರ್‌ಗೆ ನಿರ್ದೇಶಿಸಿತ್ತು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಾಕ್ಷ್ಯಚಿತ್ರವನ್ನು ರಾಜಕೀಯ ದುರುದ್ದೇಶ ಎಂದು ಕರೆದಿದ್ದರು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ ಎಂದು ಸಿಂಗ್ ತಮ್ಮ ಮನವಿಯಲ್ಲಿ ಆರೋಪಿಸಿದ್ದಾರೆ. ಸಾಕ್ಷ್ಯಚಿತ್ರವನ್ನು ಪ್ರಕಟಿಸದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದ್ದಾರೆ.

ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಗೆ ಬೇಷರತ್ ಕ್ಷಮೆಯಾಚಿಸಲು ಮತ್ತು 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಬಿಬಿಸಿ, ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ನಿರ್ದೇಶನ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ಬಿಬಿಸಿ ಸಾಕ್ಷ್ಯಚಿತ್ರವನ್ನು ಅಕ್ರಮವಾಗಿ ನಿಷೇಧಿಸಿದ್ದು ಹೇಗೆ?: ಸಾಕೇತ್ ಗೋಖಲೆ ಹಂಚಿಕೊಂಡ ವಿವರವಾದ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...