Homeಮುಖಪುಟಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

ಮಾನನಷ್ಟ ಮೊಕದ್ದಮೆ: BBC, ಇಂಟರ್ನೆಟ್ ಆರ್ಕೈವ್, ವಿಕಿಮೀಡಿಯಾಗೆ ದೆಹಲಿ ಕೋರ್ಟ್‌ನಿಂದ ಹೊಸ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಸಂಬಂದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಶುಕ್ರವಾರ BBCಗೆ  ಹೊಸ ಸಮನ್ಸ್ ನೀಡಿದೆ.

ಬಿಬಿಸಿ ಜೊತೆಗೆ ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಮಾನನಷ್ಟ ದೂರು ದಾಖಲಿಸಿದ್ದು, ”ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡದಿದ್ದರೂ, ವಿಕಿಪೀಡಿಯಾದಲ್ಲಿ ಅದನ್ನು ವೀಕ್ಷಿಸಲು ಲಿಂಕ್‌ಗಳನ್ನು ಒದಗಿಸುತ್ತದೆ ಮತ್ತು ಆ ಬಗ್ಗೆ ಇಂಟರ್ನೆಟ್ ಆರ್ಕೈವ್‌ನಲ್ಲಿ ವಿಷಯವು ಇನ್ನೂ ಲಭ್ಯವಿದೆ” ಎಂದು ಅವರು ಆರೋಪಿಸಿದ್ದಾರೆ.

ವಿಕಿಮೀಡಿಯಾ ಫೌಂಡೇಶನ್ ವಿಕಿಪೀಡಿಯಾ ವೆಬ್‌ಸೈಟ್‌ಗೆ ಹಣ ನೀಡುತ್ತದೆ. ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಎರಡೂ ಅಮೇರಿಕನ್ ಕಂಪನಿಗಳಾಗಿವೆ, ಆದರೆ BBC ಬ್ರಿಟಿಷ್ ಮಾಧ್ಯಮ ಸಂಸ್ಥೆಯಾಗಿದೆ.

ಮೇ 3 ರಂದು, ನ್ಯಾಯಾಲಯವು ಮೊದಲು ಸಮನ್ಸ್ ಜಾರಿಗೊಳಿಸಿದಾಗ, ಇಂಗ್ಲೆಂಡ್ ಮತ್ತು ಅಮೆರಿಕದಲ್ಲಿರುವ ಎರಡು ವಿದೇಶಿ ಘಟಕಗಳ ವಕೀಲರು ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಹೂಡುವ ಅಧಿಕಾರ ಇಲ್ಲ ಎಂದು ಹೇಳಿದ್ದರು.

”ಹೇಗ್ ಕನ್ವೆನ್ಷನ್ ಮತ್ತು ಭಾರತ ಸರ್ಕಾರದ ನಿಯಮಗಳ ಪ್ರಕಾರ, ವಿದೇಶಗಳಲ್ಲಿ ಸಮನ್ಸ್ ಅಥವಾ ನೋಟಿಸ್‌ಗಳನ್ನು ಕಾನೂನು ವ್ಯವಹಾರಗಳ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಮಾತ್ರ ಜಾರಿಗೊಳಿಸಬಹುದು ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರುಚಿಕಾ ಸಿಂಗ್ಲಾ ಗಮನಿಸಿದ್ದಾರೆ” ಎಂದು ದಿ ಹಿಂದೂ ವರದಿ ಮಾಡಿದೆ.

ಇದೀಗ ನ್ಯಾಯಾಲಯವು ಎರಡೂ ವಿದೇಶಿ ಸಂಸ್ಥೆಗಳಿಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಮೂಲಕ ಶುಕ್ರವಾರ ಹೊಸ ಸಮನ್ಸ್ ನೀಡಲಾಗಿದೆ.

”ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ಬಿಬಿಸಿ ಜನವರಿ 17ರಂದು ಬಿಡುಗಡೆ ಮಾಡಿತ್ತು. 2002ರ ಗುಜರಾತ್ ಗಲಭೆಗಳ ಕುರಿತು ಮತ್ತು ಇದರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮೋದಿಯವರ ಪಾತ್ರ ಏನು ಎಂಬ ಬಗ್ಗೆ ಸಾಕ್ಷ್ಯಚಿತ್ರ ತೋರಿಸಿದೆ. ಹಿಂಸಾಚಾರಕ್ಕೆ ಕಾರಣವಾದವರ ವಿರುದ್ಧ ಶಿಕ್ಷೆಯಿಲ್ಲದ ವಾತಾವರಣಕ್ಕೆ ಮುಖ್ಯಮಂತ್ರಿ ನೇರ ಹೊಣೆಗಾರರಾಗಿದ್ದರು ಎಂದು ಆ ಸಾಕ್ಷ್ಯಚಿತ್ರಗಳು ಹೇಳುತ್ತವೆ. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

ಯುನೈಟೆಡ್ ಕಿಂಗ್‌ಡಮ್ ಸರ್ಕಾರದಿಂದ ಕಳುಹಿಸಲಾದ ತನಿಖಾಧಿಕಾರಿಗಳಲ್ಲಿ ಮಾಜಿ ಹಿರಿಯ ರಾಜತಾಂತ್ರಿಕರನ್ನು ಒಳಗೊಂಡಿತ್ತು. ಅವರಲ್ಲಿ ಒಬ್ಬರು ಸಾಕ್ಷ್ಯಚಿತ್ರದಲ್ಲಿ ಮಾತನಾಡಿದ್ದು, ಈ ಹಿಂಸಾಚಾರವನ್ನು ಆರ್‌ಎಸ್ಎಸ್‌ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್‌ನಿಂದ ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಆಡಳಿತಾರೂಢ ಬಿಜೆಪಿ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜನವರಿ 21ರಂದು, ಕೇಂದ್ರವು ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಯೂಟ್ಯೂಬ್ ಮತ್ತು ಟ್ವಿಟರ್‌ಗೆ ನಿರ್ದೇಶಿಸಿತ್ತು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಾಕ್ಷ್ಯಚಿತ್ರವನ್ನು ರಾಜಕೀಯ ದುರುದ್ದೇಶ ಎಂದು ಕರೆದಿದ್ದರು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ ಎಂದು ಸಿಂಗ್ ತಮ್ಮ ಮನವಿಯಲ್ಲಿ ಆರೋಪಿಸಿದ್ದಾರೆ. ಸಾಕ್ಷ್ಯಚಿತ್ರವನ್ನು ಪ್ರಕಟಿಸದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದ್ದಾರೆ.

ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಗೆ ಬೇಷರತ್ ಕ್ಷಮೆಯಾಚಿಸಲು ಮತ್ತು 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಬಿಬಿಸಿ, ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ನಿರ್ದೇಶನ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ಬಿಬಿಸಿ ಸಾಕ್ಷ್ಯಚಿತ್ರವನ್ನು ಅಕ್ರಮವಾಗಿ ನಿಷೇಧಿಸಿದ್ದು ಹೇಗೆ?: ಸಾಕೇತ್ ಗೋಖಲೆ ಹಂಚಿಕೊಂಡ ವಿವರವಾದ ಮಾಹಿತಿ ಇಲ್ಲಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...