Homeಮುಖಪುಟಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಪಾಕಿಸ್ತಾನದ ಗುಪ್ತಚರ ವಿಭಾಗದ ಪರ ಕೆಲಸ ಮಾಡುತ್ತಿದ್ದ ಯುವತಿಯ ಜೊತೆಗೆ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರೂಲ್ಕರ್ ಅವರು ಭಾರತದ ಕ್ಷಿಪಣಿ ಯೋಜನೆ ಕುರಿತಂತೆ ವಿವಿಧ ವರ್ಗೀಕೃತ ರಕ್ಷಣಾ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ಎಂದು ದೆಹಲಿ ಪೊಲೀಸರು ಆರೋಪಪಟ್ಟಿಯಲ್ಲಿ ಸಲ್ಲಿಸಿದ್ದಾರೆ ಎಂದು ಶನಿವಾರ ಪಿಟಿಐ ವರದಿ ಮಾಡಿದೆ.

ಜರಾ ದಾಸ್‌ಗುಪ್ತಾ ಎಂಬ ಹೆಸರಿನಲ್ಲಿ ಪ್ರದೀಪ್ ಕುರೂಲ್ಕರ್ ಜತೆ ಚಾಟಿಂಗ್ ನಡೆಸುತ್ತಿದ್ದ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯ ಯುವತಿ, ಅವರಿಂದ ಅನೇಕ ರಹಸ್ಯ ವಿಚಾರಗಳನ್ನು ಪಡೆದುಕೊಂಡಿದ್ದಳು ಎನ್ನಲಾಗಿದೆ.

ಪುಣೆಯಲ್ಲಿನ ಡಿಆರ್‌ಡಿಒ ಪ್ರಯೋಗಾಲಯಗಳ ಪೈಕಿ ಒಂದರ ನಿರ್ದೇಶಕರಾಗಿದ್ದ ಕುರೂಲ್ಕರ್ ವಿರುದ್ಧ ಕಳೆದ ವಾರ ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರೋಪಪಟ್ಟಿ ಸಲ್ಲಿಸಿದೆ.

ಮೇ 3 ರಂದು, ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳವು ಶಂಕಿತ ಹನಿ ಟ್ರ್ಯಾಪಿಂಗ್ ಪ್ರಕರಣದಲ್ಲಿ ಬೇಹುಗಾರಿಕೆ ಮತ್ತು ಅಕ್ರಮ ಸಂವಹನಕ್ಕೆ ಸಂಬಂಧಿಸಿದ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಕುರುಲ್ಕರ್ ಅವರನ್ನು ಬಂಧಿಸಿತ್ತು.

ಕುರುಲ್ಕರ್ ಅವರು ಪರಮಾಣು ಸಾಮರ್ಥ್ಯದ ಅಗ್ನಿ ಕ್ಷಿಪಣಿ ಮತ್ತು ಮಿಷನ್ ಶಕ್ತಿ, ಉಪಗ್ರಹ ವಿರೋಧಿ ಕ್ಷಿಪಣಿ ಪರೀಕ್ಷೆ ಸೇರಿದಂತೆ ಹಲವಾರು ಕಾರ್ಯತಂತ್ರದ ಮಹತ್ವದ DRDO ಯೋಜನೆಗಳ ಪ್ರಮುಖ ಸದಸ್ಯರಾಗಿದ್ದರು. ಪ್ರಸ್ತುತ ಪುಣೆಯ ಯರವಾಡ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರದೀಪ್ ಕುರೂಲ್ಕರ್ ಮತ್ತು ‘ಜರಾ ದಾಸ್‌ಗುಪ್ತಾ’ ಇಬ್ಬರೂ ವಾಟ್ಸಾಪ್, ವಾಯ್ಸ್ ಮತ್ತು ವಿಡಿಯೋ ಕಾಲ್‌ಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದರು ಎಂದು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಬ್ರಿಟನ್‌ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಎಂದು ಗುರುತಿಸಿಕೊಂಡಿದ್ದ ಜರಾ, ಕುರೂಲ್ಕರ್ ಅವರಿಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಕಳುಹಿಸುವ ಮೂಲಕ ಅವರ ಗೆಳೆತನ ಸಂಪಾದಿಸಿದ್ದಳು. ತನಿಖೆ ವೇಳೆ ಆಕೆಯ ಐಪಿ ವಿಳಾಸ ಪಾಕಿಸ್ತಾನದಲ್ಲಿ ಪತ್ತೆಯಾಗಿತ್ತು ಎಂದು ಎಟಿಎಸ್ ಹೇಳಿದೆ.

ಬ್ರಹ್ಮೋಸ್ ಲಾಂಚರ್, ಡ್ರೋನ್, ಯುಸಿವಿ, ಅಗ್ನಿ ಕ್ಷಿಪಣಿ ಲಾಂಚರ್ ಮತ್ತು ಮಿಲಿಟರಿ ಬ್ರಿಡ್ಜಿಂಗ್ ವ್ಯವಸ್ಥೆ ಸೇರಿದಂತೆ ಅನೇಕ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಕರೂಲ್ಕರ್ ಅವರಿಂದ ಪಡೆದುಕೊಳ್ಳಲು ಪಾಕಿಸ್ತಾನದ ಏಜೆಂಟ್ ಪ್ರಯತ್ನಿಸಿದ್ದಳು.

ಇಲ್ಲಿಯವರೆಗೆ, ಪೊಲೀಸರು ಡಿಆರ್‌ಡಿಒ ಅಧಿಕಾರಿಗಳು ಮತ್ತು ಭಾರತೀಯ ವಾಯುಪಡೆಯ ಅಧಿಕಾರಿ ಸೇರಿದಂತೆ 203 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದಾರೆ, ಅವರನ್ನು ಪಾಕಿಸ್ತಾನಿ ಆಪರೇಟಿವ್ ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದೆ.

”ಕರೂಲ್ಕರ್ ಅವರು ಜರಾ ದಾಸ್‌ಗುಪ್ತ ಎಂಬ ನಕಲಿ ಹೆಸರಿನಿಂದ ಪರಿಚಿತಳಾದ ಯುವತಿ ಕಡೆ ಆಕರ್ಷಿತಳಾಗಿದ್ದಳು. ಡಿಆರ್‌ಡಿಒದ ವರ್ಗೀಕೃತ ಮತ್ತು ಗೋಪ್ಯ ಮಾಹಿತಿಗಳ ದತ್ತಾಂಶಗಳನ್ನು ತಮ್ಮ ವೈಯಕ್ತಿಕ ಫೋನ್‌ನಲ್ಲಿ ಇರಿಸಿಕೊಂಡಿದ್ದ ಅವರು, ಅದನ್ನು ಆಕೆ ಜತೆ ಹಂಚಿಕೊಂಡಿದ್ದರು” ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

“ಆಕೆಯಿಂದ ಆಕರ್ಷಿತರಾದ ಕುರುಲ್ಕರ್, ಡಿಆರ್‌ಡಿಒದ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಯನ್ನು ತನ್ನ ವೈಯಕ್ತಿಕ ಫೋನ್‌ನಲ್ಲಿ ಸಂಗ್ರಹಿಸಿದರು ಮತ್ತು ನಂತರ ಅದನ್ನು ಜಾರಾ ಅವರೊಂದಿಗೆ ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿ ಆರೋಪಿಸಿದೆ.

ಇಬ್ಬರು ಇಮೇಲ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕದಲ್ಲಿದ್ದರು ಮತ್ತು ಮಹಿಳೆ ಸೂಚಿಸಿದ “bingechat.net” ಮತ್ತು “cloudchat.net” ಎಂಬ ಎರಡು ಅಪ್ಲಿಕೇಶನ್‌ಗಳ ಮೂಲಕ ವೀಡಿಯೊ ಕರೆಗಳ ಮೂಲಕವೂ ಸಂಪರ್ಕದಲ್ಲಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆ್ಯಪ್ ಅನ್ನು ಬಳಸುವುದರಿಂದ, ಆರೋಪಿಯ ಮೊಬೈಲ್ ಫೋನ್‌ನಲ್ಲಿ ಮಾಲ್‌ವೇರ್ ಅನ್ನು ಸೇರಿಸುವ ಸಾಧ್ಯತೆಯಿದೆ” ಎಂದು ಆರೋಪಪಟ್ಟಿ ಹೇಳಿದೆ. ಕುರುಲ್ಕರ್ ಅವರ ಫೋನ್‌ನ ಫೋರೆನ್ಸಿಕ್ ವಿಶ್ಲೇಷಣೆಯಲ್ಲಿ, ಡಿಆರ್‌ಡಿಒ ಮಾಲ್‌ವೇರ್ ಅನ್ನು ಕಂಡುಹಿಡಿದಿದೆ, ನಂತರ ಅದನ್ನು ಭಯೋತ್ಪಾದನಾ ನಿಗ್ರಹ ದಳಕ್ಕೆ ವರದಿ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕುರುಲ್ಕರ್ ಅವರು ಮಿಲಿಟರಿಗಾಗಿ ರೊಬೊಟಿಕ್ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ಖಾಸಗಿ ಮಾರಾಟಗಾರರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಹೆಸರುಗಳು ಮತ್ತು ಇತರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

”ಶತ್ರು ರಾಷ್ಟ್ರವು ಸಿಇಒ ಅವರ ಕಾರ್ಯಸ್ಥಳ ಮತ್ತು ಕೆಲಸದ ಸ್ವರೂಪ ಮತ್ತು ಸಶಸ್ತ್ರ ಪಡೆಗಳಿಗಾಗಿ ಅವರು ತಯಾರಿಸಿದ ಉಪಕರಣಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ನಿರ್ದಿಷ್ಟ ಮಾಹಿತಿಯನ್ನು ಹುಡುಕಬಹುದು ಎಂದು ತಿಳಿದಿದ್ದರೂ, ಕುರುಲ್ಕರ್ ಅವರು ಕಾರ್ಯಾಚರಣೆಯ ರಚನೆಯನ್ನು ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಮೇಲ್ಮೈನಿಂದ ಮೇಲ್ಮೈಗೆ ಹಾರುವ ವಾಯು ಕ್ಷಿಪಣಿಗಳು (ಎಸ್‌ಎಎಂ), ಡ್ರೋನ್‌ಗಳು, ಬ್ರಹ್ಮೋಸ್ ಮತ್ತು ಅಗ್ನಿ ಕ್ಷಿಪಣಿ ಲಾಂಚರ್‌ಗಳು ಮತ್ತು ಯುಸಿವಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಕುರೂಲ್ಕರ್ ಅವರು ಆಕೆ ಜತೆ ಮಾತನಾಡಿದ್ದರು. ಅವರಿಬ್ಬರೂ ಜೂನ್ 2022ರಿಂದ ಡಿಸೆಂಬರ್ 2022ರವರೆಗೂ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಮಾಹಿತಿ ನೀಡಿದೆ.

ಪ್ರದೀಪ್ ಕುರೂಲ್ಕರ್ ಅವರ ಚಟುವಟಿಕೆಗಳು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಡಿಆರ್‌ಡಿಒ ತನಿಖೆ ಆರಂಭಿಸಿತ್ತು. ಅದಕ್ಕೂ ಮುನ್ನ 2023ರ ಫೆಬ್ರವರಿಯಲ್ಲಿ ಜರಾಳ ನಂಬರ್ ಅನ್ನು ಕುರೂಲ್ಕರ್ ಬ್ಲಾಕ್ ಮಾಡಿದ್ದರು. ಇದಾಗಿ ಸ್ವಲ್ಪ ಸಮಯದಲ್ಲಿಯೇ ಅಪರಿಚಿತ ಭಾರತೀಯ ಸಂಖ್ಯೆಯಿಂದ ಅವರಿಗೆ ವಾಟ್ಸಾಪ್ ಸಂದೇಶ ಬಂದಿತ್ತು. ‘ನನ್ನ ನಂಬರ್ ಏಕೆ ಬ್ಲಾಕ್ ಮಾಡಿದ್ದೀರಿ?’ ಎಂದು ಅದರಲ್ಲಿ ಪ್ರಶ್ನಿಸಲಾಗಿತ್ತು. ವಿಜ್ಞಾನಿಗಳು ಯಾರ ಜತೆಗೂ ತಮ್ಮ ವೈಯಕ್ತಿಕ ಹಾಗೂ ಅಧಿಕೃತ ಕಾರ್ಯಕ್ರಮಗಳು ಮತ್ತು ಸ್ಥಳಗಳ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂಬುದು ತಿಳಿದಿದ್ದರೂ ಆಕೆಗೆ ಅವುಗಳನ್ನು ರವಾನಿಸಿದ್ದರು.

ಇದನ್ನೂ ಓದಿ: ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...