Homeಮುಖಪುಟರಾಜಸ್ಥಾನ: ಗೆಹ್ಲೋಟ್‌ ಜೊತೆಗಿನ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಚುನಾವಣೆ ಎದುರಿಸುತ್ತೇವೆ; ಸಚಿನ್‌ ಪೈಲಟ್‌

ರಾಜಸ್ಥಾನ: ಗೆಹ್ಲೋಟ್‌ ಜೊತೆಗಿನ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಚುನಾವಣೆ ಎದುರಿಸುತ್ತೇವೆ; ಸಚಿನ್‌ ಪೈಲಟ್‌

- Advertisement -
- Advertisement -

ರಾಜಸ್ತಾನ ಕಾಂಗ್ರೆಸ್ ನಾಯಕರಲ್ಲಿನ ಕಿತ್ತಾಟಕ್ಕೆ ಇದೀಗ ಬ್ರೇಕ್ ಬಿದ್ದಿದ್ದು, ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಶನಿವಾರ ಹೇಳಿದ್ದಾರೆ. ಸಾಮೂಹಿಕ ನಾಯಕತ್ವವೇ ವಿಧಾನಸಭೆ ಚುನಾವಣೆಗೆ ಮುಂದಿರುವ ಏಕೈಕ ಮಾರ್ಗ ಎಂದಿದ್ದಾರೆ.

ಕೆಲದ ದಿನಗಳ ಹಿಂದಿನಿಂದ ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ್‌ ಪೈಲಟ್‌ ನಡುವಿನ ಕಿತ್ತಾಟ ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿತ್ತು. ಆದರೆ ಇದೀಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಲಹೆ ಮೇರೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯುವುದಾಗಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಶನಿವಾರ ಹೇಳಿದ್ದು, ಸಾಮೂಹಿಕ ನಾಯಕತ್ವವೇ ವಿಧಾನಸಭೆ ಚುನಾವಣೆಗೆ ಮುಂದಿರುವ ಏಕೈಕ ಮಾರ್ಗ ಎಂದಿದ್ದಾರೆ. ಪಕ್ಷದ ನಿರ್ಣಾಯಕ ರಾಜಸ್ಥಾನ ಚುನಾವಣಾ ಕಾರ್ಯತಂತ್ರದ ಸಭೆಯ ಕೆಲವೇ ದಿನಗಳಲ್ಲಿ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

”ಎಲ್ಲವನ್ನು  ಕ್ಷಮಿಸಿ, ಹಳೆಯದನ್ನು ಮರೆತು ಮುಂದೆ ಸಾಗಿ ಎಂದು ಖರ್ಗೆ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. ”ಅಶೋಕ್ ಗೆಹ್ಲೋಟ್ ಜಿ ನನಗಿಂತ ಹಿರಿಯರು, ಅವರಿಗೆ ಹೆಚ್ಚು ಅನುಭವವಿದೆ, ಅವರ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ನಾನು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾಗ, ನಾನು ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದೆ. ಇಂದು ಅವರು ಮುಖ್ಯಮಂತ್ರಿ (ಗೆಹ್ಲೋಟ್). ಆದ್ದರಿಂದ ಅವರು ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾವಿಸುತ್ತೇನೆ” ಎಂದು ಸಚಿನ್‌ ಪೈಲಟ್‌ ಹೇಳಿದ್ದಾರೆ.

”ಸ್ವಲ್ಪ ಆಚೆ ಈಚೆ ಆದರೆ ಅದು ದೊಡ್ಡ ಸಮಸ್ಯೆಯಲ್ಲ. ಏಕೆಂದರೆ ಯಾವುದೇ ವ್ಯಕ್ತಿಗಿಂತ ಪಕ್ಷ ಮತ್ತು ಸಾರ್ವಜನಿಕರೇ ಮುಖ್ಯ. ನನಗೂ ಇದು ಅರ್ಥವಾಗಿದೆ ಮತ್ತು ಅವರಿಗೂ ಅರ್ಥವಾಗಿದೆ” ಎಂದು ಹೇಳಿದ್ದಾರೆ.

ಹಿಂದಿನ ವಸುಂಧರಾ ರಾಜೇ ಸರ್ಕಾರದ ಭ್ರಷ್ಟಾಚಾರದಂತಹ ವಿಷಯಗಳ ಬಗ್ಗೆ ತನಿಖೆ ನಡೆಸದೇ ಇರುವುದಕ್ಕಾಗಿ ಗೆಹ್ಲೋಟ್ ಸರ್ಕಾರವನ್ನು ಟೀಕಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಪೈಲಟ್, ”ಆ ಸಮಯ ಕಳೆದು ಹೋಗಿದೆ, ಅದು ಮತ್ತೆ ಬರುವುದಿಲ್ಲ, ನಾವು ಭವಿಷ್ಯದ ಬಗ್ಗೆ ಚಿಂತಿಸಬೇಕು ಎಂದು ಖರ್ಗೆ ಹೇಳಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸಭೆ ಬಳಿಕ ಕಾಂಗ್ರೆಸ್, ಒಗ್ಗಟ್ಟಿನಿಂದ ಇದ್ದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಪ್ರತಿಪಾದಿಸಿತು. ಅದೇ ವೇಳೆ ಶಿಸ್ತು ಕಾಪಾಡದ ಮತ್ತು ಪಕ್ಷದ ವೇದಿಕೆಯ ಹೊರಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಎಂದಿಗೂ ಘೋಷಿಸುವುದಿಲ್ಲ ಎಂಬ ಕಾಂಗ್ರೆಸ್ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ, ಪೈಲಟ್ ”ವೇಣುಗೋಪಾಲ್ ಜಿ ಅವರು ಹೇಳಿದ್ದು ತಪ್ಪಲ್ಲ ಎಂದು ನಾನು ಭಾವಿಸುತ್ತೇನೆ. ನಾವು ಪ್ರತಿ ಬಾರಿ ಚುನಾವಣೆಗೆ ಸ್ಪರ್ಧಿಸಿದಾಗ ಅದು ವೈಯಕ್ತಿಕವಾಗಿರುವ ಸ್ಪರ್ಧೆಯಲ್ಲ. 2018ರಲ್ಲಿ ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ. ನಾವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದಾಗ ಎಕ್ಸ್, ವೈ, ಝಡ್ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿರಲಿಲ್ಲ. ಅದು ಚುನಾವಣೆಯ ನಂತರದ ನಿರ್ಧಾರ” ಎಂದು ಉತ್ತರಿಸಿದರು.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರಿಗೆ ಜೀವಾವಧಿ ಶಿಕ್ಷೆ..!: ಮಸೂದೆ ಅಂಗೀಕಾರಕ್ಕೆ ಮುಂದಾದ ರಾಜಸ್ಥಾನ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...