Homeಕರ್ನಾಟಕಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

ಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ಪ್ರಾಥಮಿಕ ಹಂತದಿಂದಲೇ ವೈಚಾರಿಕತೆ ಬೆಳೆಸುವುದು ನಮ್ಮ ಸರ್ಕಾರದ ಆಧ್ಯತೆಯಾಗಿದೆ. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿರುವುದು ಬೇಸರದ ಸಂಗತಿ. ಮಕ್ಕಳಲ್ಲಿ ವಿಶ್ವಮಾನವ ಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆಧ್ಯತೆಯಾಗಿದೆ ಎಂದು ಹೇಳಿದರು.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ೆಂದು ತಿಳಿಸಿದರು.

ಶೂದ್ರರಂತೆ ಮಹಿಳೆಯರೂ ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರಾಗಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಡರಾದರೆ ಶೋಷಣೆ, ದೌರ್ಜನ್ಯ ಕಡಿಮೆಯಾಗುತ್ತದೆ ಎಂದರು.

ಸರ್ಕಾರಿ ಭೂಮಿ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಭೂ ಹೀನರಿಗೆ ಭೂಮಿ ಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡಿದ್ದೇನೆ. ಅವರಿಗೆ ಯಾವ ರೀತಿಯ ಕೌಶಲ್ಯದ ವಿದ್ಯಾರ್ಥಿಗಳ ಅಗತ್ಯವಿದೆ ಎನ್ನುವ ಬಗ್ಗೆ ಚರ್ಚಿಸಿದ್ದೇನೆ. ಅದಕ್ಕೆ ತಕ್ಕಂತೆ ಶಿಕ್ಷಣವನ್ನು ರೂಪಿಸುವ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅರ್ಹರನ್ನು ಸೃಷ್ಟಿಸಬೇಕಾಗುತ್ತದೆ ಎಂದರು.

ಇದನ್ನೂ ಓದಿ: 40% ಕಮಿಷನ್, ಕೊರೊನಾ ಸಂದರ್ಭದ ಅವ್ಯವಹಾರಗಳ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

ಸಮ ಸಮಾಜ ಬಂದರೆ ಶಾಂತಿಯ ತೋಟ

”ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ಮುಟ್ಟಿನ ರಜೆ ಪರಿಶೀಲನೆ

ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ

ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭರವಸೆ ನೀಡಿದರು.

ಅಕಾಡೆಮಿಗಳ ನೇಮಕಾತಿಗೆ ಸಮಿತಿ ರಚನೆ

ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸುತ್ತಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...