Homeಕರ್ನಾಟಕಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರಿಕರಿಗೆ ಸಂಕಷ್ಟ; ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

ಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರಿಕರಿಗೆ ಸಂಕಷ್ಟ; ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

- Advertisement -
- Advertisement -

ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆಗೆ ತೆರಳಿದ್ದ ಕಲಬುರಗಿಯ 27 ಜನರು ಮತ್ತು ಗದಗ ಜಿಲ್ಲೆಯ 23 ಯಾತ್ರಿಕರು ಮಧ್ಯದಲ್ಲೇ ಉಳಿದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರುವಂತ ಕುಟುಂಬ ವರ್ಗದವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

”ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ. ಗದಗ್ ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ” ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ಕಲಬುರಗಿಯಿಂದ 22 ಜನರ ತಂಡವು ರಾಮತೀರ್ಥ ಸೇವಾ ಸಮಿತಿಯ ಮೂಲಕ ಅಮರನಾಥ ಯಾತ್ರೆಗೆ ತೆರಳಿದ್ದರು. ಎಲ್ಲರೂ ಕಲಬುರಗಿ ನಗರದವರಾಗಿದ್ದು, ಸಧ್ಯ ಹವಾಮಾನ ವೈಪರೀತ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಮ್ ಸಮೀಪದ ಬಾಲ್‌ ಹಾಲ್ ಶಿಬಿರದಲ್ಲಿ ಉಳಿದುಕೊಂಡಿದ್ದಾರೆ. ಉಳಿದ ಐದು ಜನರ ತಂಡವು ಸೇನಾ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ ಜುಲೈ 14ರಂದು ವಾಪಸಾಗಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ರಾಜಪ್ಪ ತಿಳಿಸಿದ್ದಾರೆ.

ಗದಗದಿಂದ ಹೋಗಿರುವ ವಿನೋದ್ ಸಿ.ಪಟೇಲ್, ನೀತಾ ವಿ.ಪಟೇಲ್, ಚಂದೂಲಾಲ್ ಪಟೇಲ್, ಭಾವನಾ ಪಟೇಲ್‌, ತೇಜಲ್, ಶಾರದಾ, ಭೂಮಿಕಾ, ರಿತೇಶ್, ಪರ್ವಿನ್ ವಿ.ನಿರ್ಮಲ್, ಟೀನಾ ಪಿ. ನಿರ್ಮಲ್, ರಾಜೇಶ್ ಬಿ., ಪಾಲಕ್ ಆಲ್., ವೈಶಾಲಿ ಬಿ., ಯಶ್ ಆರ್., ಪ್ರವೀಣ್ ಸಿ., ಪಿಂಕಿ ಪಿ.. ಪ್ರಣೀತಾ ಪಿ., ವಿನಯ್‌ ಪಿ., ಜಾಹ್ನವಿ ವಿ., ಭವೇಶ್ ಬಿ., ತೃಪ್ತಿ … ದಿವಿತ್ ಬಿ., ಮಾಳವಿಕಾ ಆರ್. ಸಂಘಾನಿ ಅಮರನಾಥದಲ್ಲಿ ಸಿಲುಕಿಕೊಂಡವರು.

ವಿನೋದ್ ಪಟೇಲ್ ಎನ್ನುವವರು ಪತ್ರಿಕೆಯೊಂದರ ಜೊತೆ ಮಾತನಾಡಿದ್ದು, ”ಗುಜರಾತಿ ಸಮಾಜಕ್ಕೆ ಸೇರಿದ ನಾವೆಲ್ಲ ಒಟ್ಟಾಗಿ ಗದಗ ನಗರದಿಂದ ಜುಲೈ 1ರಂದು ಅಮರನಾಥ ಯಾತ್ರೆಗೆ ಬಂದಿದ್ದವು. ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಮಧ್ಯದಲ್ಲೇ ಸಿಕ್ಕಿಹಾಕಿಕೊಂಡು, ಶಿಬಿರದಲ್ಲಿ ಕುಳಿತಿದ್ದೇವೆ. ಎಲ್ಲರೂ ಸುರಕ್ಷಿತವಾಗಿದ್ದೇವೆ. ಕೆಟ್ಟ ಹವಾಮಾನ ಇನ್ನೂ ಎರಡು ದಿನಗಳ ಕಾಲ ಹೀಗೆ ಇರಲಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ”ಆ ದಾರಿಯಲ್ಲಿ ಒಟ್ಟು 15 ಸಾವಿರ ಮಂದಿ ಯಾತ್ರಿಕರು ಇದ್ದಾರೆ. ಕನ್ನಡಿಗರು ಇರುವ ಕ್ಯಾಂಪ್‌ನಲ್ಲಿ 880 ಮಂದಿ ಇದ್ದಾರೆ. ಹವಾಮಾನ ಸರಿಯಿಲ್ಲ ಎಂಬ ಕಾರಣಕ್ಕೆ ಯಾತ್ರಿಕರನ್ನು ಮುಂದಕ್ಕೆ ಬಿಡುತ್ತಿಲ್ಲವಷ್ಟೇ, ಯಾತ್ರಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಅಲ್ಲಿನ ಅಧಿಕಾರಿಗಳು ನಮ್ಮ ಜತೆಗೆ ಸಂಪರ್ಕದಲ್ಲಿದ್ದು, ಯಾತ್ರಿಕರ ಕಾಳಜಿಗೆ ಕ್ರಮವಹಿಸಿದ್ದಾರೆ. ಎರಡು ದಿನಗಳ ಬಳಿಕ ಯಾತ್ರಿಕರು ಸುರಕ್ಷಿತವಾಗಿ ಹಿಂತಿರುಗುವ ಭರವಸೆ ಇದೆ” ಎಂದು ತಿಳಿಸಿದ್ದಾರೆ.

‘ಟೆಂಟ್‌ನಲ್ಲಿ ಸಿಲುಕಿರುವ ಯಾತ್ರಿಕರಿಗೆ ಬೇಕಿರುವ ಅಗತ್ಯ ಸೌಕರ್ಯಗಳನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುತ್ತಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದ್ದಾರೆ.

ಭಕ್ತರ ನೆರವಿಗೆ ಸಹಾಯವಾಣಿ ಆರಂಭ

ಸಂಕಷ್ಟದಲ್ಲಿರುವವರ ನೆರವಿಗಾಗಿ ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಅಮರನಾಥ ದೇವಸ್ಥಾನ ಮಂಡಳಿಯ ಸಹಾಯವಾಣಿ-14464, 18001807198 (ಟ್ರೋಲ್ ಫ್ರೀ) ಅಥವಾ ಪಂಚತಾರ್ನಿ ಬೇಸ್ ಕ್ಯಾಂಪ್‌ನ ಸಹಾಯವಾಣಿ- 9906037370, 9414121477, 9419123373, ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ- 1070, 080-22253707, 080-22340676 ಗೆ ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...