Homeಕರ್ನಾಟಕಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರಿಕರಿಗೆ ಸಂಕಷ್ಟ; ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

ಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರಿಕರಿಗೆ ಸಂಕಷ್ಟ; ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

- Advertisement -
- Advertisement -

ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆಗೆ ತೆರಳಿದ್ದ ಕಲಬುರಗಿಯ 27 ಜನರು ಮತ್ತು ಗದಗ ಜಿಲ್ಲೆಯ 23 ಯಾತ್ರಿಕರು ಮಧ್ಯದಲ್ಲೇ ಉಳಿದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರುವಂತ ಕುಟುಂಬ ವರ್ಗದವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

”ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ. ಗದಗ್ ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ” ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ಕಲಬುರಗಿಯಿಂದ 22 ಜನರ ತಂಡವು ರಾಮತೀರ್ಥ ಸೇವಾ ಸಮಿತಿಯ ಮೂಲಕ ಅಮರನಾಥ ಯಾತ್ರೆಗೆ ತೆರಳಿದ್ದರು. ಎಲ್ಲರೂ ಕಲಬುರಗಿ ನಗರದವರಾಗಿದ್ದು, ಸಧ್ಯ ಹವಾಮಾನ ವೈಪರೀತ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಮ್ ಸಮೀಪದ ಬಾಲ್‌ ಹಾಲ್ ಶಿಬಿರದಲ್ಲಿ ಉಳಿದುಕೊಂಡಿದ್ದಾರೆ. ಉಳಿದ ಐದು ಜನರ ತಂಡವು ಸೇನಾ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ ಜುಲೈ 14ರಂದು ವಾಪಸಾಗಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ರಾಜಪ್ಪ ತಿಳಿಸಿದ್ದಾರೆ.

ಗದಗದಿಂದ ಹೋಗಿರುವ ವಿನೋದ್ ಸಿ.ಪಟೇಲ್, ನೀತಾ ವಿ.ಪಟೇಲ್, ಚಂದೂಲಾಲ್ ಪಟೇಲ್, ಭಾವನಾ ಪಟೇಲ್‌, ತೇಜಲ್, ಶಾರದಾ, ಭೂಮಿಕಾ, ರಿತೇಶ್, ಪರ್ವಿನ್ ವಿ.ನಿರ್ಮಲ್, ಟೀನಾ ಪಿ. ನಿರ್ಮಲ್, ರಾಜೇಶ್ ಬಿ., ಪಾಲಕ್ ಆಲ್., ವೈಶಾಲಿ ಬಿ., ಯಶ್ ಆರ್., ಪ್ರವೀಣ್ ಸಿ., ಪಿಂಕಿ ಪಿ.. ಪ್ರಣೀತಾ ಪಿ., ವಿನಯ್‌ ಪಿ., ಜಾಹ್ನವಿ ವಿ., ಭವೇಶ್ ಬಿ., ತೃಪ್ತಿ … ದಿವಿತ್ ಬಿ., ಮಾಳವಿಕಾ ಆರ್. ಸಂಘಾನಿ ಅಮರನಾಥದಲ್ಲಿ ಸಿಲುಕಿಕೊಂಡವರು.

ವಿನೋದ್ ಪಟೇಲ್ ಎನ್ನುವವರು ಪತ್ರಿಕೆಯೊಂದರ ಜೊತೆ ಮಾತನಾಡಿದ್ದು, ”ಗುಜರಾತಿ ಸಮಾಜಕ್ಕೆ ಸೇರಿದ ನಾವೆಲ್ಲ ಒಟ್ಟಾಗಿ ಗದಗ ನಗರದಿಂದ ಜುಲೈ 1ರಂದು ಅಮರನಾಥ ಯಾತ್ರೆಗೆ ಬಂದಿದ್ದವು. ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಮಧ್ಯದಲ್ಲೇ ಸಿಕ್ಕಿಹಾಕಿಕೊಂಡು, ಶಿಬಿರದಲ್ಲಿ ಕುಳಿತಿದ್ದೇವೆ. ಎಲ್ಲರೂ ಸುರಕ್ಷಿತವಾಗಿದ್ದೇವೆ. ಕೆಟ್ಟ ಹವಾಮಾನ ಇನ್ನೂ ಎರಡು ದಿನಗಳ ಕಾಲ ಹೀಗೆ ಇರಲಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ”ಆ ದಾರಿಯಲ್ಲಿ ಒಟ್ಟು 15 ಸಾವಿರ ಮಂದಿ ಯಾತ್ರಿಕರು ಇದ್ದಾರೆ. ಕನ್ನಡಿಗರು ಇರುವ ಕ್ಯಾಂಪ್‌ನಲ್ಲಿ 880 ಮಂದಿ ಇದ್ದಾರೆ. ಹವಾಮಾನ ಸರಿಯಿಲ್ಲ ಎಂಬ ಕಾರಣಕ್ಕೆ ಯಾತ್ರಿಕರನ್ನು ಮುಂದಕ್ಕೆ ಬಿಡುತ್ತಿಲ್ಲವಷ್ಟೇ, ಯಾತ್ರಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಅಲ್ಲಿನ ಅಧಿಕಾರಿಗಳು ನಮ್ಮ ಜತೆಗೆ ಸಂಪರ್ಕದಲ್ಲಿದ್ದು, ಯಾತ್ರಿಕರ ಕಾಳಜಿಗೆ ಕ್ರಮವಹಿಸಿದ್ದಾರೆ. ಎರಡು ದಿನಗಳ ಬಳಿಕ ಯಾತ್ರಿಕರು ಸುರಕ್ಷಿತವಾಗಿ ಹಿಂತಿರುಗುವ ಭರವಸೆ ಇದೆ” ಎಂದು ತಿಳಿಸಿದ್ದಾರೆ.

‘ಟೆಂಟ್‌ನಲ್ಲಿ ಸಿಲುಕಿರುವ ಯಾತ್ರಿಕರಿಗೆ ಬೇಕಿರುವ ಅಗತ್ಯ ಸೌಕರ್ಯಗಳನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುತ್ತಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದ್ದಾರೆ.

ಭಕ್ತರ ನೆರವಿಗೆ ಸಹಾಯವಾಣಿ ಆರಂಭ

ಸಂಕಷ್ಟದಲ್ಲಿರುವವರ ನೆರವಿಗಾಗಿ ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಅಮರನಾಥ ದೇವಸ್ಥಾನ ಮಂಡಳಿಯ ಸಹಾಯವಾಣಿ-14464, 18001807198 (ಟ್ರೋಲ್ ಫ್ರೀ) ಅಥವಾ ಪಂಚತಾರ್ನಿ ಬೇಸ್ ಕ್ಯಾಂಪ್‌ನ ಸಹಾಯವಾಣಿ- 9906037370, 9414121477, 9419123373, ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ- 1070, 080-22253707, 080-22340676 ಗೆ ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...