Homeಮುಖಪುಟಗೋಲ್ವಾಲ್ಕರ್ ಹೇಳಿಕೆ ಉಲ್ಲೇಖಿಸಿ ಟ್ವೀಟ್: ದಿಗ್ವಿಜಯ್ ಸಿಂಗ್ ವಿರುದ್ಧ RSS ಕಾರ್ಯಕರ್ತನಿಂದ ದೂರು ದಾಖಲು

ಗೋಲ್ವಾಲ್ಕರ್ ಹೇಳಿಕೆ ಉಲ್ಲೇಖಿಸಿ ಟ್ವೀಟ್: ದಿಗ್ವಿಜಯ್ ಸಿಂಗ್ ವಿರುದ್ಧ RSS ಕಾರ್ಯಕರ್ತನಿಂದ ದೂರು ದಾಖಲು

- Advertisement -
- Advertisement -

ಆ‌ರ್‌ಎಸ್‌ಎಸ್ ಮುಖ್ಯಸ್ಥರಾಗಿದ್ದ ಎಂ.ಎಸ್‌.ಗೋಲ್ವಾಲ್ಕರ್ ಹೇಳಿದ್ದಾರೆ ಎನ್ನಲಾದ ಹೇಳಿಕೆಯ ಪೇಪರ್ ಕಟಿಂಗ್‌ನ್ನು ಟ್ವೀಟ್ ಮಾಡಿದ್ದ ಕಾರಣಕ್ಕೆ ಇದೀಗ ಕಾಂಗ್ರೆಸ್‌ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರ್‌ಎಸ್‌ಎಸ್‌ ಕಾರ್ಯಕರ್ತ ಹಾಗೂ ವಕೀಲ ರಾಜೇಶ ಜೋಶಿ ಎಂಬುವವರು, ದಿಗ್ವಿಜಯ್ ಸಿಂಗ್ ವಿರುದ್ಧ ದೂರು ನೀಡಿದ್ದು, ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಬಿತ್ತುವುದು, ಮಾನಹಾನಿ, ಸಾರ್ವಜನಿಕ ಸ್ಥಳ ದುರ್ಬಳಕೆ ಅರೋಪಗಳ ಮೇಲೆ ಪ್ರಕರಣ ದಾಖಲಾಗಿದೆ.

ದಿಗ್ವಿಜಯ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 153 ಎ, 469, 500 ಮತ್ತು 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಗೋಲ್ವಾಲ್ಕರ್ ವಿರುದ್ಧದ ಹೇಳಿಕೆಯ ಟ್ವಿಟ್ ಮಾಡಿದ್ದಾರೆ. ಇದರಿಂದ ದಲಿತರು, ಹಿಂದುಳಿದ ವರ್ಗ, ಮುಸ್ಲಿಂ ಹಾಗೂ ಹಿಂದೂಗಳ ನಡುವೆ ಪರಸ್ಪರ ದ್ವೇಷ ಭಾವನೆ ಮೂಡಲಿದೆ. ಜತೆಗೆ ಹಿಂದೂಗಳ ಭಾವನೆಗೆ ಮತ್ತು ಅರ್‌ಎಸ್‌ಎಸ್‌ನ ಕಾರ್ಯಕರ್ತರ ನಂಬಿಕೆಗಳಿಗೆ ಧಕ್ಕೆ ತಂದಿದೆ ಎಂದು ಜೋಶಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಶನಿವಾರ ಪೋಸ್ಟರ್ ಒಂದನ್ನು ಟ್ವೀಟ್ ಮಾಡಿದ್ದು, ”ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರು ಮತ್ತು ರಾಷ್ಟ್ರೀಯ ನೀರು, ಅರಣ್ಯ ಮತ್ತು ನೆಲದ ಮೇಲಿನ ಗುರು ಗೋಲ್ವಾಲ್ಕರ್ ಜಿ ಅವರ ಚಿಂತನೆಗಳು ಹೀಗಿದ್ದವು” ಎಂದು ಶೀರ್ಷಿಕೆ ನೀಡಿದ್ದಾರೆ.

”ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರಿಗೆ ಸಮಾನವಾದ ಹಕ್ಕುಗಳನ್ನು ನೀಡುವುದಕ್ಕಿಂತ ಬ್ರಿಟಿಷ್ ಆಳ್ವಿಕೆಯಲ್ಲಿ ಗುಲಾಮನಾಗಿ ನಾನು ಬದುಕಲು ಬಯಸುತ್ತೇನೆ” ಎಂದಿರುವ ಗೋಲ್ವಾಲ್ಕರ್ ಹೇಳಿಕೆಯನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌ ಪ್ರಚಾರ ವಿಭಾಗದ ಮುಖ್ಯಸ್ಥ ಸುನೀಲ್‌ ಅಂಬೇಕರ್, ”ಗೋಲ್ವಾಲ್ಕರ್ ಗುರೂಜಿ ಅವರ ದೃಷ್ಟಿಯಲ್ಲಿ, ಈ ಟ್ವೀಟ್ ವಾಸ್ತವವಲ್ಲ ಮತ್ತು ಸಾಮಾಜಿಕ ಅಸಂಗತತೆಯನ್ನು ಉಂಟುಮಾಡುತ್ತದೆ. ಸುಳ್ಳು ಫೋಟೋಶಾಪ್ ಚಿತ್ರವನ್ನು ಹಾಕಲಾಗಿದೆ. ಸಂಘದ ವರ್ಚಸ್ಸಿಗೆ ಕಳಂಕ ತರುವ ಗುರಿ ಇದೆ. ಗುರೂಜಿ ಅಂತಹ ಮಾತನ್ನು ಎಂದಿಗೂ ಹೇಳಲಿಲ್ಲ. ಅವರ ಇಡೀ ಜೀವನವು ಸಾಮಾಜಿಕ ತಾರತಮ್ಯವನ್ನು ಕೊನೆಗೊಳಿಸುವಲ್ಲಿ ತೊಡಗಿಸಿಕೊಂಡಿದೆ” ಎಂದಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ವಕೀಲ ರಾಜೇಶ್ ಜೋಶಿ ಅವರು ಎಫ್‌ಐಆರ್ ದಾಖಲಿಸಿದ್ದು, ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಲು ಸಿಂಗ್ ಉದ್ದೇಶಪೂರ್ವಕವಾಗಿ ಗೋಲ್ವಾಲ್ಕರ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...