Homeಮುಖಪುಟದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

- Advertisement -
- Advertisement -

ದೇಶದಲ್ಲಿ ಟೊಮೆಟೋ ಬೆಲೆ ಗಗನಕ್ಕೇರಿದೆ. ಈ ಮಧ್ಯೆ ತರಕಾರಿ ಮಾರಾಟಗಾರರು ಗ್ರಾಹಕರನ್ನು ನಿರ್ವಹಿಸಲು ಬೌನ್ಸರ್‌ಗಳನ್ನು ನೇಮಿಸಿಕೊಳ್ಳುವಂತಹ ಅಸಾಮಾನ್ಯ ವಿಧಾನಗಳನ್ನು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಸ್ಮಾರ್ಟ್‌ಫೋನ್ ಖರೀದಿಸಿದವರಿಗೆ ಕಾಂಪ್ಲಿಮೆಂಟರಿಯಾಗಿ ಟೊಮೆಟೊಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

ಟೊಮೆಟೋ ಬೆಲೆ ಏರಿಕೆಯಾಗಿರುವುದರಿಂದ ಉತ್ತರ ಪ್ರದೇಶದ ವಾರಣಾಸಿಯಲ್ಲಿ, ಅಜಯ್ ಫೌಜಿ ಎಂಬ ತರಕಾರಿ ಮಾರಾಟಗಾರ ಟೊಮೇಟೊ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡು ಖರೀದಿಗೆ ಬರುವ ಗ್ರಾಹಕರನ್ನು ನಿರ್ವಹಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಅಜಯ್ ಫೌಜಿ, ”ಟೊಮೆಟೋ ಬೆಲೆ ತುಂಬಾ ಹೆಚ್ಚಿರುವುದರಿಂದ ನಾನು ಬೌನ್ಸರ್‌ಗಳನ್ನು ನೇಮಿಸಿಕೊಂಡಿದ್ದೇನೆ. ಜನರು ಗಲಾಟೆ ಮಾಡುತ್ತಾ, ಟೊಮೆಟೊಗಳನ್ನು ಕಳ್ಳತನ ಮಾಡುತ್ತಿದ್ದಾರೆ. ನಮ್ಮ ಅಂಗಡಿಯಲ್ಲಿ ಟೊಮೆಟೋಗಾಗಿ ಯಾವುದೇ ವಾದ ವಿವಾದಗಳು ಬೇಡ ಹಾಗಾಗಿ ಇಲ್ಲಿ ಬೌನ್ಸರ್‌ಗಳಿದ್ದಾರೆ. ಟೊಮೆಟೊ ಕೆಜಿಗೆ ₹160ಕ್ಕೆ ಮಾರಾಟವಾಗುತ್ತಿದೆ. ಜನರು 50 ಅಥವಾ 100 ಗ್ರಾಂ ಖರೀದಿಸುತ್ತಿದ್ದಾರೆ” ಎಂದು ಹೇಳಿದರು.

ಮಧ್ಯಪ್ರದೇಶದ ಅಶೋಕ್ ನಗರದಲ್ಲಿ, ಸ್ಮಾರ್ಟ್‌ಫೋನ್ ಅಂಗಡಿ ಮಾಲೀಕರು ಆಸಕ್ತಿದಾಯಕ ಕೊಡುಗೆ ನೀಡುತ್ತಿದ್ದಾರೆ. ಅವರ ಅಂಗಡಿಯಿಂದ ಮೊಬೈಲ್ ಫೋನ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಕಾಂಪ್ಲಿಮೆಂಟರಿಯಾಗಿ 2 ಕೆಜಿ ಟೊಮೆಟೋಗಳನ್ನು ನೀಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅಂಗಡಿ ಮಾಲೀಕ ಅಭಿಷೇಕ್ ಅಗರ್ವಾಲ್, ”ಟೊಮೆಟೋ ಬೆಲೆ ದುಬಾರಿಯಾಗಿರುವುದರಿಂದ ಮತ್ತು ಮಾರುಕಟ್ಟೆಯಲ್ಲಿ ಹೆಚ್ಚಿದ ಪೈಪೋಟಿಯಿಂದಾಗಿ ಗ್ರಾಹಕರಿಗೆ ನಾವು ಸ್ಮಾರ್ಟ್‌ಫೋನ್‌ಗಳೊಂದಿಗೆ ಕಾಂಪ್ಲಿಮೆಂಟರಿಯಾಗಿ ಬೇರೆ ವಸ್ತಗಳನ್ನು ನೀಡುವ ಬದಲಿಗೆ ಟೊಮೆಟೋಗಳನ್ನು ನೀಡಲು ನಿರ್ಧರಿಸಿದ್ದೇವೆ. ಈ ಆಫರ್ ಅನ್ನು ಪ್ರಾರಂಭಿಸಿದ ನಂತರ ನಮ್ಮ ಅಂಗಡಿಯಲ್ಲಿ ವ್ಯಾಪಾರ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಾರ, ಟೊಮೆಟೋ ಕೆಜಿಗೆ ಸರಾಸರಿ ಬೆಲೆ ₹ 100 ಆಗಿದೆ. ದೆಹಲಿಯಲ್ಲಿ ₹127, ಲಕ್ನೋದಲ್ಲಿ ₹147, ಚೆನ್ನೈನಲ್ಲಿ ₹105 ಮತ್ತು ದಿಬ್ರುಗಢದಲ್ಲಿ ₹115 ಆಗಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ಲೂಟಿಯಿಂದಾಗಿ ತರಕಾರಿ ಬೆಲೆ ಗಗನಕ್ಕೇರುತ್ತಿದೆ: ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...