Homeಮುಖಪುಟರಾಜ್ಯಪಾಲರು ಕೇಂದ್ರದ ಏಜೆಂಟ್‌; ಹುದ್ದೆಯಲ್ಲಿರಲು ಅನರ್ಹರು: ರಾಷ್ಟ್ರಪತಿಗೆ ಸಿಎಂ ಸ್ಟಾಲಿನ್ ಪತ್ರ

ರಾಜ್ಯಪಾಲರು ಕೇಂದ್ರದ ಏಜೆಂಟ್‌; ಹುದ್ದೆಯಲ್ಲಿರಲು ಅನರ್ಹರು: ರಾಷ್ಟ್ರಪತಿಗೆ ಸಿಎಂ ಸ್ಟಾಲಿನ್ ಪತ್ರ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ವಿರುದ್ಧ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಮತ್ತೊಮ್ಮೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ.

ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಸ್ಟಾಲಿನ್ ಅವರು, ”ರಾಜ್ಯಪಾಲ ಆರ್‌ಎನ್ ರವಿ ಅವರು ರಾಜ್ಯದಲ್ಲಿ ರಾಜಕೀಯ ಎದುರಾಳಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಉರುಳಿಸಲು ಕಾಯುತ್ತಿದ್ದಾರೆ ಮತ್ತು ಅಕಾಶಗಳನ್ನು ಹುಡುಕುತ್ತಿದ್ದಾರೆ. ಹಾಗಾಗಿ ಅವರು ಸಾಂವಿಧಾನಿಕ ಹುದ್ದೆಯಲ್ಲಿ ಮುಂದುವರಿಯಲು ಯೋಗ್ಯರಲ್ಲ. ಅವರನ್ನು ಕೇವಲ ಕೇಂದ್ರ ಸರ್ಕಾರದ ಏಜೆಂಟ್ ಎಂದು ಪರಿಗಣಿಸಬಹುದು” ಎಂದು ಬರೆದಿರುವುದಾಗಿ ಪಿಟಿಐ ವರದಿ ಮಾಡಿದೆ.

“ರಾಜ್ಯಪಾಲರ ಈ ಕ್ರಮವು ಒಕ್ಕೂಟ ವ್ಯವಸ್ಥೆಯನ್ನು ಹಾನಿ ಮಾಡುತ್ತದೆ. ಈ ಮೂಲಕ ಭಾರತೀಯ ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ನಾಶಪಡಿಸುತ್ತದೆ. ರವಿ ಅಂತಹ ನಡವಳಿಕೆಗೆ ಒಳ್ಳೆಯ ಉದಾಹರಣೆ” ಎಂದು ಸ್ಟಾಲಿನ್ ಹೇಳಿದರು.

”ರಾಜ್ಯಪಾಲರು ಕೋಮು ದ್ವೇಷವನ್ನು ಪ್ರಚೋದಿಸುವ ಮೂಲಕ ತಮಿಳುನಾಡಿನ ಶಾಂತಿಗೆ ಧಕ್ಕೆ ತಂದಿದ್ದಾರೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

”ರಾಜ್ಯಪಾಲರು ತಮ್ಮ ರಾಜಕೀಯ ಮತ್ತು ಧಾರ್ಮಿಕ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸುವುದು ಸೂಕ್ತವಲ್ಲ. ಇಂತಹ ಭಾಷಣಗಳು ಸರ್ಕಾರಕ್ಕೆ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸುವುದಲ್ಲದೆ ಚುನಾಯಿತ ಸರ್ಕಾರದ ವಿರುದ್ಧ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

”ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಏಕಪಕ್ಷೀಯವಾಗಿ ಸಂಪುಟದಿಂದ ವಜಾಗೊಳಿಸಿ ಕೆಲವೇ ಗಂಟೆಗಳಲ್ಲಿ ಅಮಾನತುಗೊಳಿಸಿರುವ ರಾಜ್ಯಪಾಲರ ಕ್ರಮ ಅವರ ರಾಜಕೀಯ ಒಲವನ್ನು ತೋರಿಸುತ್ತದೆ. ಸಚಿವರನ್ನು ಸಂಪುಟಕ್ಕೆ ಸೇರಿಸುವುದು ಅಥವಾ ಅವರನ್ನು ತೆಗೆದುಹಾಕುವುದು ರವಿ ಅವರ ಕೆಲಸವಲ್ಲ, ಇದು ಸಾಂವಿಧಾನಿಕ ನಿಬಂಧನೆಗಳ ಗಂಭೀರ ಉಲ್ಲಂಘನೆಯಾಗಿದೆ”  ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಮಾಜಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಲು ಅನುಮತಿಯನ್ನು ರಾಜ್ಯಪಾಲರು ಅನಗತ್ಯವಾಗಿ ವಿಳಂಬ ಮಾಡುತ್ತಾರೆ ಎಂದು ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

”ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ ಮೂಲಕ ರವಿ ಅವರು ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತಾರೆ” ಎಂದು ಆರೋಪ ಮಾಡಿದ್ದಾರೆ.

”ರವಿ ಅವರು ನಾಗಾಲ್ಯಾಂಡ್ ಗವರ್ನರ್ ಆಗಿದ್ದ ವೇಳೆ, ಅವರ ಅಧಿಕಾರಾವಧಿಯೂ ತೃಪ್ತಿಕರವಾಗಿಲ್ಲ. ಅವರು ಅಲ್ಲಿಂದ ನಿರ್ಗಮಿಸಿದ ನಂತರವೇ ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಹೇಳಿರುವುದಾಗಿ” ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

”ತಮ್ಮ ನಡವಳಿಕೆ ಮತ್ತು ಕೆಲಸದಿಂದ ರಾಜ್ಯಪಾಲರು ಪಕ್ಷಪಾತಿ ಎನ್ನುವುದು ಸ್ಪಷ್ಟವಾಗಿದೆ ಹಾಗಾಗಿ ಅವರು ರಾಜ್ಯಪಾಲರ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರು ಎಂದು ಸಾಬೀತುಪಡಿಸಿದ್ದಾರೆ. ರವಿಯನ್ನು ಉನ್ನತ ಹುದ್ದೆಯಿಂದ ಕೆಳಗಿಳಿಸಲು ಯೋಗ್ಯರಾಗಿದ್ದಾರೆ” ಎಂದು ಸ್ಟಾಲಿನ್ ಮುರ್ಮು ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...