Homeಮುಖಪುಟಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಘಟನೆ ಖಂಡಿಸಿ ಪಕ್ಷ ತೊರೆದ ಬಿಜೆಪಿ ನಾಯಕ

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಘಟನೆ ಖಂಡಿಸಿ ಪಕ್ಷ ತೊರೆದ ಬಿಜೆಪಿ ನಾಯಕ

- Advertisement -
- Advertisement -

ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಕಳೆದ ವಾರ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಈ ವಿಚಾರವಾಗಿ ಭಾನುವಾರ ಸ್ಥಳೀಯ ಶಾಸಕರ ವಿರುದ್ಧ ಬಿಜೆಪಿಯ ಸಿದ್ಧಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕ್ ಕೋಲ್ ವಾಗ್ದಾಳಿ ನಡೆಸಿದ್ದರು. ಈ ಘಟನೆಯನ್ನು ಖಂಡಿಸಿ ವಿವೇಕ್ ಕೋಲ್ ಅವರು ಪಕ್ಷವನ್ನು ತೊರೆದಿದ್ದಾರೆ.

ಬುಡಕಟ್ಟು ಯುವಕನೊಬ್ಬನ ಮೇಲೆ ಪ್ರವೇಶ ಶುಕ್ಲಾ ಎಂಬ ಬಿಜೆಪಿ ಮುಖಂಡ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಘಟನೆಯಿಂದ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂತ್ರಸ್ತರನ್ನು ಮನೆಗೆ ಕರೆದು ಅವರ ಪಾದಗಳನ್ನು ತೊಳೆಯುವ ನಾಟಕೀಯ ಬೆಳವಣಿಗೆ ನಡೆಸಿದರು.

CM Shivraj apologizes to tribal victim of urine scandal by calling him Sudama Pipa News - PiPa News

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ವಿವೇಕ್ ಕೋಲ್, ”ನನ್ನ ರಾಜೀನಾಮೆ ಅಂತಿಮವಾಗಿದೆ. ನಾನು ಎರಡು ದಿನಗಳ ಹಿಂದೆ ಸಂಸದ ಬಿಜೆಪಿ ಮುಖ್ಯಸ್ಥ ವಿಡಿ ಶರ್ಮಾ ಅವರಿಗೆ ಇ-ಮೇಲ್ ಮಾಡಿದ್ದೇನೆ. ನಾನು ಅದನ್ನು ಬಿಜೆಪಿಯ ಪದಾಧಿಕಾರಿಗಳ ವಾಟ್ಸಾಪ್ ಗ್ರೂಪ್‌ನಲ್ಲಿ ಪೋಸ್ಟ್ ಮಾಡಿದ್ದೇನೆ. ನನ್ನ ರಾಜೀನಾಮೆಯನ್ನು ಹಿಂಪಡೆಯುವಂತೆ ಪಕ್ಷವು ನನ್ನನ್ನು ಕೇಳಿಲ್ಲ” ಎಂದು ಸಿದ್ಧಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿವೇಕ್ ಕೋಲ್ ಹೇಳಿದ್ದಾರೆ.

ಕೋಲ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ”ಕಳೆದ ಎರಡು ವರ್ಷಗಳಿಂದ ಸ್ಥಳೀಯ ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಅವರ ಕೃತ್ಯಗಳಿಂದ ತನಗೆ ನೋವುಂಟಾಗಿದೆ. ಇದರಲ್ಲಿ ಆದಿವಾಸಿ ಬುಡಕಟ್ಟು ಸಮುದಾಯಗಳ ಭೂಮಿಯನ್ನು ಅತಿಕ್ರಮಣ ಮತ್ತು ಸಿಧಿಯಲ್ಲಿನ ಇತರ ದೌರ್ಜನ್ಯಗಳು ಸೇರಿವೆ” ಎಂದು ಬರೆದಿದ್ದಾರೆ.

”ಈಗ ಅವರ ”ಪ್ರತಿನಿಧಿ” ಒಬ್ಬ ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಇದು ಇನ್ನಷ್ಟು ನೋವು ತಂದಿದೆ” ಎಂದು ಕೋಲ್ ಹೇಳಿದ್ದಾರೆ.

ಆರೋಪಿಗೂ ಶಾಸಕ ಶುಕ್ಲಾಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ. ಆದರೆ  ಕೋಲ್ ಅವರು ಪತ್ರದಲ್ಲಿ ಶುಕ್ಲಾ ಮತ್ತು ಆರೋಪಿಯ ಸಂಬಂಧದ ಬಗ್ಗೆ ವಿವರಿಸಿ, ಹಲವು ಆರೋಪಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...