Homeಮುಖಪುಟರಾಜ್ಯಸಭಾ ಚುನಾವಣೆ: ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರು ಸೂಚಿಸಿದ ಟಿಎಂಸಿ

ರಾಜ್ಯಸಭಾ ಚುನಾವಣೆ: ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರು ಸೂಚಿಸಿದ ಟಿಎಂಸಿ

- Advertisement -
- Advertisement -

ಮುಂಬರುವ ರಾಜ್ಯಸಭಾ ಚುನಾವಣೆಗೆ ಸೋಮವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರನ್ನು ಅಭ್ಯರ್ಥಿಗಳಾಗಿ ಸೂಚಿಸಿದೆ.

ಸಾಕೇತ್ ಗೋಖಲೆ ಜೊತೆಗೆ ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್, ಸಂಸದರಾದ ಡೋಲಾ ಸೇನ್, ಸುಖೇಂದು ಶೇಖರ್ ರೇ, ಟಿಎಂಸಿ ಸದಸ್ಯರಾದ ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಚಿಕ್ ಬರಾಕ್ ಅವರನ್ನು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹೆಸರಿಸಿದೆ.

ಓ’ಬ್ರೇನ್, ಸೇನ್ ಮತ್ತು ರೇಗೆ ಇದು ಪುನರಾವರ್ತಿತ ಆಯ್ಕೆಯಾಗಿದೆ. ಆದರೆ ಗೋಖಲೆಯವರು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವುದು ಇದೇ ಮೊದಲು. ಗೋಖಲೆ ಅವರ ಜೊತೆಗೆ, ಇತರ ಇಬ್ಬರು ಹೊಸ ಮುಖಗಳು ಇಸ್ಲಾಂ, ಬಾಂಗ್ಲಾ ಸಂಸ್ಕೃತಿ ಮಂಚ ಅಧ್ಯಕ್ಷ ಸಮೀರುಲ್ ಇಸ್ಲಾಂ ಮತ್ತು ಟಿಎಂಸಿಯ ಅಲಿಪುರ್ದೂರ್ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಚಿಕ್ ಬರಾಕ್ ನಾಮನಿರ್ದೇಶನಗೊಂಡಿದ್ದಾರೆ.

”ಮುಂಬರುವ ರಾಜ್ಯಸಭಾ ಚುನಾವಣೆಗೆ ಸಂಸದ ಡೆರೆಕ್ ಒ’ಬ್ರೇನ್, ಸಂಸದ ಡೋಲಾ ಸೇನ್, ಸುಖೇಂದು ಶೇಖರ್ ರೇ, ಸಮೀರುಲ್ ಇಸ್ಲಾಂ, ಪ್ರಕಾಶ್ ಚಿಕ್ ಬರಾಕ್ ಮತ್ತು ಸಾಕೇತ್ ಗೋಖಲೆ ಅವರ ಉಮೇದುವಾರಿಕೆಯನ್ನು ಘೋಷಿಸಲು ನಾವು ಬಹಳ ಸಂತೋಷಪಡುತ್ತೇವೆ. ಅವರು ಜನರಿಗೆ ಇನ್ನಷ್ಟು ಸೇವೆ ಸಲ್ಲಿಸುವುದನ್ನು ಮುಂದುವರೆಸಲಿ. ಎಲ್ಲರಿಗೂ ನಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇವೆ” ಎಂದು ಟಿಎಂಸಿ ಟ್ವೀಟ್ ಮಾಡಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ ಗೋಖಲೆ ಅವರು, ”ನನ್ನ ಮೇಲಿನ ನಂಬಿಕೆ ಮತ್ತು ರಾಜಕೀಯೇತರ ಹಿನ್ನೆಲೆಯಿಂದ ಬಂದ ಮಧ್ಯಮ ವರ್ಗದ ಯುವಕನಿಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಅವರು ನನ್ನ ಶಕ್ತಿಯ ಮೂಲವಾಗಿದ್ದಾರೆ, ಸಾರ್ವಜನಿಕ ಸೇವೆಗಾಗಿ ನನ್ನ ಸ್ಫೂರ್ತಿ ಮತ್ತು ಕಠಿಣ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬಕ್ಕೆ ಬೆಂಬಲವಾಗಿ ನಿಂತ ಗಟ್ಟಿಯಾದ ಕಂಬಗಳಾಗಿದ್ದಾರೆ” ಎಂದು ಹೇಳಿದ್ದಾರೆ.

ಓ’ಬ್ರೇನ್ ಅವರನ್ನು ”ಮಾರ್ಗದರ್ಶಿ ಮತ್ತು ರಕ್ಷಾಕವಚ” ಎಂದು ಗೋಖಲೆ ಕರೆದಿದ್ದಾರೆ. ”ಡೆರೆಕ್ ಒ’ಬ್ರೇನ್ ಅವರು ನನಗೆ ರಾಜಕೀಯದ ಪಾಠವನ್ನು ಕಲಿಸಿದ್ದಾರೆ ಮತ್ತು ಜೀವನದ ಪ್ರತಿ ಹಂತದಲ್ಲೂ ನನ್ನ ಸಲಹೆಗಾರರಾಗಿದ್ದಾರೆ” ಎಂದು ಗೋಖಲೆ ಹೇಳಿದ್ದಾರೆ.

”ಓ’ಬ್ರೇನ್, ರೇ ಮತ್ತು ಸೇನ್ ಅವರಲ್ಲದೆ, ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ, ಟಿಎಂಸಿಯ ಅಸ್ಸಾಂ ನಾಯಕಿ ಸುಶ್ಮಿತಾ ದೇವ್ ಮತ್ತು ಅದರ ಡಾರ್ಜಿಲಿಂಗ್ ನಾಯಕಿ ಶಾಂತಾ ಛೆಟ್ರಿ ಅವರ ಅಧಿಕಾರಾವಧಿ ಕೊನೆಗೊಂಡಿದ್ದು, ಈ ಸ್ಥಾನಗಳು ಇದೀಗ ಒಟ್ಟು ಆರು ಸ್ಥಾನಗಳು ಖಾಲಿಯಾದವು.

ಗೋವಾದ ಮಾಜಿ ಮುಖ್ಯಮಂತ್ರಿ ಲುಜಿನ್ಹೋ ಫಲೈರೊ ಏಪ್ರಿಲ್‌ನಲ್ಲಿ ಟಿಎಂಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಶ್ಚಿಮ ಬಂಗಾಳದಿಂದ ಏಳನೇ ರಾಜ್ಯಸಭಾ ಸ್ಥಾನವೂ ಖಾಲಿಯಾಗಿದೆ. ಜುಲೈ 24 ರಂದು ಈ ಆರು ಸ್ಥಾನಗಳಿಗೆ ಚುನಾವಣೆಯೊಂದಿಗೆ ಆ ಸ್ಥಾನಕ್ಕೂ ಉಪಚುನಾವಣೆ ನಡೆಯಲಿದೆ.

ಭಾರತದ ಚುನಾವಣಾ ಆಯೋಗವು ಗುಜರಾತ್, ಪಶ್ಚಿಮ ಬಂಗಾಳ ಮತ್ತು ಗೋವಾ ಸೇರಿ ಒಟ್ಟು ಹತ್ತು ರಾಜ್ಯಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಜುಲೈ 24 ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಚುನಾವಣಾ ಸಮಿತಿಯು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಆಯಾ ಸದಸ್ಯರ ನಿವೃತ್ತಿಯಿಂದಾಗಿ ಈ ಮೂರು ರಾಜ್ಯಗಳಲ್ಲಿ 10 ರಾಜ್ಯಸಭಾ ಸ್ಥಾನಗಳು ಖಾಲಿಯಾಗುತ್ತಿವೆ.

ಪಶ್ಚಿಮ ಬಂಗಾಳದಿಂದ, ಟಿಎಂಸಿ ಪಕ್ಷದ ಸದಸ್ಯರಲ್ಲಿ ಡೆರೆಕ್ ಒ’ಬ್ರೇನ್, ಡೋಲಾ ಸೇನ್, ಸುಶ್ಮಿತಾ ದೇವ್, ಶಾಂತಾ ಛೆಟ್ರಿ ಮತ್ತು ಸುಖೇಂದು ಶೇಖರ್ ರೇ ಸೇರಿದಂತೆ ಅವರ ಅವಧಿ ಮುಗಿಯುತ್ತಿದೆ. ಮಾಜಿ ಕಾಂಗ್ರೆಸ್ ಸದಸ್ಯರಾದ ದೇವ್ ಮತ್ತು ಛೆಟ್ರಿ ಅವರನ್ನು ಸದ್ಯಕ್ಕೆ ಹೊರಗಿಡಲಾಗಿದೆ.

ಇದನ್ನೂ ಓದಿ: ಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...