Homeಮುಖಪುಟರಾಜ್ಯಸಭಾ ಚುನಾವಣೆ: ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರು ಸೂಚಿಸಿದ ಟಿಎಂಸಿ

ರಾಜ್ಯಸಭಾ ಚುನಾವಣೆ: ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರು ಸೂಚಿಸಿದ ಟಿಎಂಸಿ

- Advertisement -
- Advertisement -

ಮುಂಬರುವ ರಾಜ್ಯಸಭಾ ಚುನಾವಣೆಗೆ ಸೋಮವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರನ್ನು ಅಭ್ಯರ್ಥಿಗಳಾಗಿ ಸೂಚಿಸಿದೆ.

ಸಾಕೇತ್ ಗೋಖಲೆ ಜೊತೆಗೆ ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್, ಸಂಸದರಾದ ಡೋಲಾ ಸೇನ್, ಸುಖೇಂದು ಶೇಖರ್ ರೇ, ಟಿಎಂಸಿ ಸದಸ್ಯರಾದ ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಚಿಕ್ ಬರಾಕ್ ಅವರನ್ನು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹೆಸರಿಸಿದೆ.

ಓ’ಬ್ರೇನ್, ಸೇನ್ ಮತ್ತು ರೇಗೆ ಇದು ಪುನರಾವರ್ತಿತ ಆಯ್ಕೆಯಾಗಿದೆ. ಆದರೆ ಗೋಖಲೆಯವರು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವುದು ಇದೇ ಮೊದಲು. ಗೋಖಲೆ ಅವರ ಜೊತೆಗೆ, ಇತರ ಇಬ್ಬರು ಹೊಸ ಮುಖಗಳು ಇಸ್ಲಾಂ, ಬಾಂಗ್ಲಾ ಸಂಸ್ಕೃತಿ ಮಂಚ ಅಧ್ಯಕ್ಷ ಸಮೀರುಲ್ ಇಸ್ಲಾಂ ಮತ್ತು ಟಿಎಂಸಿಯ ಅಲಿಪುರ್ದೂರ್ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಚಿಕ್ ಬರಾಕ್ ನಾಮನಿರ್ದೇಶನಗೊಂಡಿದ್ದಾರೆ.

”ಮುಂಬರುವ ರಾಜ್ಯಸಭಾ ಚುನಾವಣೆಗೆ ಸಂಸದ ಡೆರೆಕ್ ಒ’ಬ್ರೇನ್, ಸಂಸದ ಡೋಲಾ ಸೇನ್, ಸುಖೇಂದು ಶೇಖರ್ ರೇ, ಸಮೀರುಲ್ ಇಸ್ಲಾಂ, ಪ್ರಕಾಶ್ ಚಿಕ್ ಬರಾಕ್ ಮತ್ತು ಸಾಕೇತ್ ಗೋಖಲೆ ಅವರ ಉಮೇದುವಾರಿಕೆಯನ್ನು ಘೋಷಿಸಲು ನಾವು ಬಹಳ ಸಂತೋಷಪಡುತ್ತೇವೆ. ಅವರು ಜನರಿಗೆ ಇನ್ನಷ್ಟು ಸೇವೆ ಸಲ್ಲಿಸುವುದನ್ನು ಮುಂದುವರೆಸಲಿ. ಎಲ್ಲರಿಗೂ ನಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇವೆ” ಎಂದು ಟಿಎಂಸಿ ಟ್ವೀಟ್ ಮಾಡಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ ಗೋಖಲೆ ಅವರು, ”ನನ್ನ ಮೇಲಿನ ನಂಬಿಕೆ ಮತ್ತು ರಾಜಕೀಯೇತರ ಹಿನ್ನೆಲೆಯಿಂದ ಬಂದ ಮಧ್ಯಮ ವರ್ಗದ ಯುವಕನಿಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಅವರು ನನ್ನ ಶಕ್ತಿಯ ಮೂಲವಾಗಿದ್ದಾರೆ, ಸಾರ್ವಜನಿಕ ಸೇವೆಗಾಗಿ ನನ್ನ ಸ್ಫೂರ್ತಿ ಮತ್ತು ಕಠಿಣ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬಕ್ಕೆ ಬೆಂಬಲವಾಗಿ ನಿಂತ ಗಟ್ಟಿಯಾದ ಕಂಬಗಳಾಗಿದ್ದಾರೆ” ಎಂದು ಹೇಳಿದ್ದಾರೆ.

ಓ’ಬ್ರೇನ್ ಅವರನ್ನು ”ಮಾರ್ಗದರ್ಶಿ ಮತ್ತು ರಕ್ಷಾಕವಚ” ಎಂದು ಗೋಖಲೆ ಕರೆದಿದ್ದಾರೆ. ”ಡೆರೆಕ್ ಒ’ಬ್ರೇನ್ ಅವರು ನನಗೆ ರಾಜಕೀಯದ ಪಾಠವನ್ನು ಕಲಿಸಿದ್ದಾರೆ ಮತ್ತು ಜೀವನದ ಪ್ರತಿ ಹಂತದಲ್ಲೂ ನನ್ನ ಸಲಹೆಗಾರರಾಗಿದ್ದಾರೆ” ಎಂದು ಗೋಖಲೆ ಹೇಳಿದ್ದಾರೆ.

”ಓ’ಬ್ರೇನ್, ರೇ ಮತ್ತು ಸೇನ್ ಅವರಲ್ಲದೆ, ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ, ಟಿಎಂಸಿಯ ಅಸ್ಸಾಂ ನಾಯಕಿ ಸುಶ್ಮಿತಾ ದೇವ್ ಮತ್ತು ಅದರ ಡಾರ್ಜಿಲಿಂಗ್ ನಾಯಕಿ ಶಾಂತಾ ಛೆಟ್ರಿ ಅವರ ಅಧಿಕಾರಾವಧಿ ಕೊನೆಗೊಂಡಿದ್ದು, ಈ ಸ್ಥಾನಗಳು ಇದೀಗ ಒಟ್ಟು ಆರು ಸ್ಥಾನಗಳು ಖಾಲಿಯಾದವು.

ಗೋವಾದ ಮಾಜಿ ಮುಖ್ಯಮಂತ್ರಿ ಲುಜಿನ್ಹೋ ಫಲೈರೊ ಏಪ್ರಿಲ್‌ನಲ್ಲಿ ಟಿಎಂಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಶ್ಚಿಮ ಬಂಗಾಳದಿಂದ ಏಳನೇ ರಾಜ್ಯಸಭಾ ಸ್ಥಾನವೂ ಖಾಲಿಯಾಗಿದೆ. ಜುಲೈ 24 ರಂದು ಈ ಆರು ಸ್ಥಾನಗಳಿಗೆ ಚುನಾವಣೆಯೊಂದಿಗೆ ಆ ಸ್ಥಾನಕ್ಕೂ ಉಪಚುನಾವಣೆ ನಡೆಯಲಿದೆ.

ಭಾರತದ ಚುನಾವಣಾ ಆಯೋಗವು ಗುಜರಾತ್, ಪಶ್ಚಿಮ ಬಂಗಾಳ ಮತ್ತು ಗೋವಾ ಸೇರಿ ಒಟ್ಟು ಹತ್ತು ರಾಜ್ಯಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಜುಲೈ 24 ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಚುನಾವಣಾ ಸಮಿತಿಯು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಆಯಾ ಸದಸ್ಯರ ನಿವೃತ್ತಿಯಿಂದಾಗಿ ಈ ಮೂರು ರಾಜ್ಯಗಳಲ್ಲಿ 10 ರಾಜ್ಯಸಭಾ ಸ್ಥಾನಗಳು ಖಾಲಿಯಾಗುತ್ತಿವೆ.

ಪಶ್ಚಿಮ ಬಂಗಾಳದಿಂದ, ಟಿಎಂಸಿ ಪಕ್ಷದ ಸದಸ್ಯರಲ್ಲಿ ಡೆರೆಕ್ ಒ’ಬ್ರೇನ್, ಡೋಲಾ ಸೇನ್, ಸುಶ್ಮಿತಾ ದೇವ್, ಶಾಂತಾ ಛೆಟ್ರಿ ಮತ್ತು ಸುಖೇಂದು ಶೇಖರ್ ರೇ ಸೇರಿದಂತೆ ಅವರ ಅವಧಿ ಮುಗಿಯುತ್ತಿದೆ. ಮಾಜಿ ಕಾಂಗ್ರೆಸ್ ಸದಸ್ಯರಾದ ದೇವ್ ಮತ್ತು ಛೆಟ್ರಿ ಅವರನ್ನು ಸದ್ಯಕ್ಕೆ ಹೊರಗಿಡಲಾಗಿದೆ.

ಇದನ್ನೂ ಓದಿ: ಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...