Homeಮುಖಪುಟಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ: ಪ್ರವಾಹದಿಂದ ಭೂಕುಸಿತ; ಜನರಲ್ಲಿ ಹೆಚ್ಚಿದ ಆತಂಕ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ: ಪ್ರವಾಹದಿಂದ ಭೂಕುಸಿತ; ಜನರಲ್ಲಿ ಹೆಚ್ಚಿದ ಆತಂಕ

- Advertisement -
- Advertisement -

ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣಜೀವನವನ್ನು ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕುಲು ಜಿಲ್ಲೆಯ ಕಸೋಲ್‌ನಲ್ಲಿ ಭೂಕುಸಿಗಳು ಉಂಟಾಗಿವೆ. ಪರಿಣಾಮವಾಗಿ ಹಲವಾರು ಮನೆಗಳು ಜಖಂಗೊಂಡಿವೆ. ಜೊತೆಗೆ ಮಂಡಿ ಜಿಲ್ಲೆಯಲ್ಲಿರುವ ಬಿಯಾಸ್ ನದಿಯು ತುಂಬಿ ಹರಿಯುತ್ತಿರುವುದರಿಂದ ಆಟ್-ಬಂಜಾರ್‌ ನ ಸಂಪರ್ಕ ಸೇತುವೆ ಸೇತುವೆ ಸಂಪೂರ್ಣ ಕೊಚ್ಚಿಹೋಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ.

ಬಿಯಾಸ್​ ನಂದಿಯಿಂದ ಮಂಡಿ ಜಿಲ್ಲೆಯ ಪಾಂಡೋಹ್​ ಎಂಬ ಹಳ್ಳಿಗೆ ನೀರು ನುಗ್ಗಿ ಹಳ್ಳಿಗರೆಲ್ಲ ಪರದಾಡುವಂಥ ಪರಿಸ್ಥಿತಿ ಉಂಟಾಗಿದೆ. ಬಿಯಾಸ್ ನದಿಯು ಮೈದುಂಬಿ ಹರಿಯುತ್ತಿವ ಕಾರಣ ಪಂಚವಕ್ತ್ರ ದೇವಾಲಯ ಮತ್ತು ಮಂಡಿ ಜಿಲ್ಲೆಯೂ ನೀರಿನಲ್ಲಿ ಮುಳುಗಿದೆ. ಸೋಲನ್‌ನ ಚೆವಾ ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ. ಅಲ್ಲದೆ ಮಂಡಿಯ ಥುನಾಗ್ ಪ್ರದೇಶದಲ್ಲಿ ಹಠಾತ್‌ ಪ್ರವಾಹಕ್ಕೆ ಕಾರಣವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.

ಮೇಘಸ್ಫೋಟದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸೋಲನ್‌ನಲ್ಲಿ 50 ವರ್ಷಗಳ ಬಳಿಕ ಭಾನುವಾರ ದಾಖಲೆಯ 13.5 ಸೆಂ.ಮೀ ಮಳೆಯಾಗಿದೆ. 1971ರಲ್ಲಿ 10.5 ಸೆಂ.ಮೀ ಮಳೆಯಾಗಿತ್ತು.

ಸೋಮವಾರವೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ತುರ್ತು ಸಂದರ್ಭಗಳ ಹೊರತು ಹೊರಗೆ ಪ್ರಯಾಣ ಮಾಡದಂತೆ ಜನರಿಗೆ ಸರ್ಕಾರ ಸೂಚನೆ ನೀಡಿದೆ.

ಈವರೆಗೆ ಮಳೆಯಿಂದ 8 ಮಂದಿ ಸಾವನ್ನಪ್ಪಿದ್ದು, ಸಂಕಷ್ಟದಲ್ಲಿರುವವರ ನೆರವಿಗೆ ಕೇಂದ್ರ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ಧಾವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಕುಲು ಜಿಲ್ಲೆಯ ಚರುಡು ಗ್ರಾಮದಲ್ಲಿ ಮುಳುಗಿಹೋಗಿದ್ದ ಮನೆಯೊಂದರಿಂದ ಐವರನ್ನು ರಕ್ಷಿಸಿದೆ. ಬಿಯಾಸ್​ ನದಿಯ ಪಕ್ಕದಲ್ಲಿ ಸಿಕ್ಕಿಹಾಕಿಕೊಂಡಿರುವ ನಾಲ್ಕು ಜನರನ್ನು ರಕ್ಷಿಸುವ ಕಾರ್ಯಾಚರಣೆ ಇನ್ನೂ ಸಾಗಿದೆ ಎಂದು ಎನ್​ಡಿಆರ್​ಎಫ್​ ಅಧಿಕಾರಿಗಳು ಹೇಳಿದ್ಧಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು, ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿದ್ದು, ನದಿಗಳ ಬಳಿ ಹೋಗದಂತೆ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ಧಾರೆ. ಅಲ್ಲದೆ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಮಂಡಿ ಮತ್ತು ಕುಲು ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿದ ಮಳೆಯ ಪರಿಣಾಮ ಬಿಯಾಸ್​ನ ನೀರಿನ ಮಟ್ಟ ಹೆಚ್ಚಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕುಸಿತದಿಂದಾಗಿ ಪ್ರವಾಹ ಉಂಟಾಗಿದೆ. ಕುಲು-ಮನಾಲಿ ರಸ್ತೆಯಲ್ಲಿ ಕಲ್ಲುಬಂಡೆಗಳು ಉರುಳಿ ಬಿದ್ದಿರುವುದರಿಂದ ಸಂಚಾರವನ್ನು ನಿಷೇಧಿಸಲಾಗಿದೆ.

ಶಿಮ್ಲಾ-ಕಲ್ಕಾ ಹೆರಿಟೇಜ್ ರೈಲು ಹಳಿಯು ಜಲಾವೃತಗೊಂಡ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಸಂಚಾರಿ, ಪ್ರವಾಸಿ ಮತ್ತು ರೈಲ್ವೇ ಪೊಲೀಸರು ರೈಲುಗಳನ್ನು ರದ್ದುಗೊಳಿಸಿದ್ದಾರೆ. ಕಲ್ಕಾ-ಶಿಮ್ಲಾ ರೈಲ್ವೆ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಕೋಟಿ ಮತ್ತು ಸನ್ವಾರ ರೈಲು ನಿಲ್ದಾಣಗಳ ನಡುವಿನ ರೈಲ್ವೆಮಾರ್ಗವನ್ನು ಬಂದ್ ಮಾಡಲಾಗಿದೆ.

ದೆಹಲಿಯಲ್ಲಿ ನಾಲ್ಕು ದಶಕಗಳಲ್ಲೇ ಅತಿ ಹೆಚ್ಚು ಮಳೆ

ಅತಿ ಹೆಚ್ಚು ಮಳೆಯಿಂದಾಗಿ ಹಲವಾರು ರಾಜ್ಯಗಳಲ್ಲಿ ಜಲಾವೃತವಾಗಿದೆ. ಕಾರುಗಳು ಕೊಚ್ಚಿಹೋಗಿವೆ. ಸೇತುವೆಗಳು ಕೊಚ್ಚಿ ಹೋಗಿವೆ. ಭಾರತದಲ್ಲಿ ಭಾನುವಾರ ವಾಡಿಕೆಗಿಂತ 81% ಮಳೆ ಸುರಿದರೆ ದೆಹಲಿಯಲ್ಲಿ ನಾಲ್ಕು ದಶಕಗಳಲ್ಲೇ ಅತಿ ಹೆಚ್ಚು ಮಳೆಯಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಹಲವು ಪ್ರದೇಶಗಳು ಮುಳುಗಡೆಯಾಗಿವೆ. 1982 ರ ನಂತರ ಒಂದೇ ದಿನದಲ್ಲಿ 15 ಸೆಮೀ ಗಿಂತ ಹೆಚ್ಚು ಮಳೆಯಾಗಿದೆ. ಹಲವು ಪ್ರದೇಶಗಳಲ್ಲಿ ವಿದ್ಯುತ್ ಹಾಗೂ ಇಂಟರ್‌ನೆಟ್ ಸಂಪರ್ಕ ಕಡಿತಗೊಂಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಭಾನುವಾರ 104 ಮಿಮೀ ಮಳೆಯಾಗಿದೆ. ಇದು ಸಾಮಾನ್ಯಕ್ಕಿಂತ 13 ಪಟ್ಟು ಹೆಚ್ಚಾಗಿದೆ. ದೆಹಲಿ, ಚಂಡೀಗಢ, ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೇ ದಿನದ ಮಳೆ ಸಾಮಾನ್ಯಕ್ಕಿಂತ ಒಂಬತ್ತು ಪಟ್ಟು ಹೆಚ್ಚಿದ್ದರೆ, ಪಂಜಾಬ್‌ನಲ್ಲಿ ಸಾಮಾನ್ಯಕ್ಕಿಂತ 12 ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: 21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...