Homeಕರ್ನಾಟಕಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯಿಸಿ ಧರಣಿ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯಿಸಿ ಧರಣಿ

- Advertisement -
- Advertisement -

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರ ಪ್ರಕ್ರಿಯೆಯನ್ನು ಆರಂಭಿಸುವಂತೆ ಒತ್ತಾಯಿಸಿ ಆಯ್ಕೆಯಾದ ಅಭ್ಯರ್ಥಿಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಪ್ರಾರಂಭಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಎರಡು ವರ್ಷ ಮೇಲಾಗಿದ್ದರೂ ಇನ್ನೂ ಆದೇಶ ಪ್ರತಿ ದೊರಕಿಲ್ಲ ಎಂದು ಆರೋಪಿಸಿರುವ ಸಾವಿರಾರು ಅಭ್ಯರ್ಥಿಗಳು ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಒತ್ತಾಯಿಸಿದರು.

2021 ಸೆಪ್ಟೆಂಬರ್ 09 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿದ್ದ 26 ವಿಷಯಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಸಂಬಂಧ ಅಧಿಸೂಚನೆಯಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆ.ಇ.ಎ) 12 ಮಾರ್ಚ್ 2022 ರಿಂದ 16 ಮಾರ್ಚ್ 2022ವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತು. ದಿನಾಂಕ 18 ಆಗಸ್ಟ್ 2022 ರಂದು 26 ವಿಷಯಗಳ ಫಲಿತಾಂಶ ಮತ್ತು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಗೊಂಡಿದೆ. ದಿನಾಂಕ 15 ಅಕ್ಟೋಬರ್ 2022 ರಂದು ಅಂತಿಮ ಮೆರಿಟ್ ಪಟ್ಟಿ ಪ್ರಕಟವಾಗಿದೆ. ಮೂಲ ದಾಖಲೆಗಳ ಪರಿಶೀಲನಾ ಕಾರ್ಯ ಪೂರ್ಣಗೊಂಡ ಬಳಿಕ ವಿಷಯವಾರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 30/01/2023ರಂದು ಹೊರಬಂದಿತು. ಹೀಗೆ ಒಟ್ಟು 1242 ಹುದ್ದೆಗಳಲ್ಲಿ 1208 ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಿ, ಈ ಪಟ್ಟಿಯು ದಿನಾಂಕ07/03/2023 ಹಾಗೂ 12-06-2023 ರಂದು ಎರಡು ಹಂತಗಳಲ್ಲಿ ಸರ್ಕಾರಕ್ಕೆ ತಲುಪಿದೆ. ಆದರೆ ಅಲ್ಲಿಂದ ಮುಂದಕ್ಕೆ ಹೋಗುತ್ತಿಲ್ಲ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರ ಬಾಕಿ ಉಳಿದಿರುವ ಆಯ್ಕೆ ಪಟ್ಟಿಯ ಗೆಜೆಟ್, ದಾಖಲಾತಿ ಪರಿಶೀಲನೆ, ಮೆಡಿಕಲ್-ಪೊಲೀಸ್ ವೆರಿಫಿಕೇಶನ್, ಅಂಕಪಟ್ಟಿಗಳ ನೈಜತಾ ಪ್ರಮಾಣ, ಸಿಂಧುತ್ವದಂತಹ ಪ್ರಕ್ರಿಯೆಗಳು ಈಗಾಗಲೇ ಮುಗಿದಿರಬೇಕಾಗಿತ್ತು. ಇವುಗಳು ಇನ್ನೂ ಆರಂಭವಾಗಿಲ್ಲ. ಈಗಲಾದರೂ ಆರಂಭವಾಗಲಿ ಎಂದು ಒತ್ತಾಯಿಸಿದ್ದಾರೆ.

371ಜೆ ಮೀಸಲಾತಿಗೆ ಸಂಬಂಧಿಸಿದಂತೆ ಕೆಲವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರಿಂದ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ ಈ ತರಹದ ಆದೇಶಗಳು ಇದ್ದಾಗ್ಯೂ ಪ್ರಸ್ತುತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ(ಜಿ.ಪಿ.ಎಸ್.ಟಿ.ಆರ್)ಯಲ್ಲಿ ಈಗಾಗಲೇ ಎಲ್ಲಾ ಪ್ರಕ್ರಿಯೆಗಳು ಮುಗಿಸಿ, ಸ್ಥಳನಿಯುಕ್ತಿ ಮತ್ತು ಆದೇಶ ಪತ್ರವನ್ನು ಮಾತ್ರ ತಡೆಹಿಡಿಯಲಾಗಿದೆ. 2017ರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಗೌರವಾನ್ವಿತ ನ್ಯಾಯಾಲಯದ ಅಂತಿಮ ತೀರ್ಪಿನ ನಿಬಂಧನೆಗೆ ಒಳಪಟ್ಟ ಷರತ್ತುಬದ್ಧ ಆದೇಶವನ್ನೂ ನೀಡಲಾಗಿದೆ. ಹೀಗೆ ನಮ್ಮ ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ಕ್ಕೆ ಸಂಬಂಧಿಸಿದ ಬಾಕಿ ಇರುವ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಮುಂದುವರೆಸುವಲ್ಲಿ ಸರ್ಕಾರವು ತನ್ನ ಇಚ್ಚಾಶಕ್ತಿಯನ್ನು ತೋರಬೇಕೆಂದು ಮನವಿ ಮಾಡಿದರು.

ಕೆಲವರಿಂದಾಗಿ ಎದುರಾಗಿರುವ ಕಾನೂನಾತ್ಮಕ ಸಮಸ್ಯೆಯು, ಯಾವುದೇ ಕಾನೂನಾತ್ಮಕ ಸಮಸ್ಯೆಗಳಿಲ್ಲದೆ ಆಯ್ಕೆಯಾಗಿರುವ ಉಳಿದ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ತೊಂದರೆಯಾದಂತೆ, ನ್ಯಾಯ ಒದಗಿಸುವಂತೆ ಕೇಳಿಕೊಳ್ಳುತ್ತಿದ್ದೇವೆ ಎಂದು ಅಭ್ಯರ್ಥಿಗಳು ತಿಳಿಸಿದರು.

ಪ್ರತಿಭಟನಾ ಸ್ಥಳಕ್ಕೆ ಪರಿಷತ್ ಶಾಸಕರಾದ ಬೋಜೆಗೌಡರವರು, ವೈ ಎ ನಾರಾಯಣ ಸ್ವಾಮಿಯವರು,  ಮರಿತಿಬ್ಬೇಗೌಡರವರು, ದೇವೇಗೌಡರವರು ಸೇರಿದಂತೆ ಹಲವು ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ; ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...