Homeಕರ್ನಾಟಕಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯಿಸಿ ಧರಣಿ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯಿಸಿ ಧರಣಿ

- Advertisement -
- Advertisement -

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರ ಪ್ರಕ್ರಿಯೆಯನ್ನು ಆರಂಭಿಸುವಂತೆ ಒತ್ತಾಯಿಸಿ ಆಯ್ಕೆಯಾದ ಅಭ್ಯರ್ಥಿಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಪ್ರಾರಂಭಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಎರಡು ವರ್ಷ ಮೇಲಾಗಿದ್ದರೂ ಇನ್ನೂ ಆದೇಶ ಪ್ರತಿ ದೊರಕಿಲ್ಲ ಎಂದು ಆರೋಪಿಸಿರುವ ಸಾವಿರಾರು ಅಭ್ಯರ್ಥಿಗಳು ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಒತ್ತಾಯಿಸಿದರು.

2021 ಸೆಪ್ಟೆಂಬರ್ 09 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿದ್ದ 26 ವಿಷಯಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಸಂಬಂಧ ಅಧಿಸೂಚನೆಯಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆ.ಇ.ಎ) 12 ಮಾರ್ಚ್ 2022 ರಿಂದ 16 ಮಾರ್ಚ್ 2022ವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತು. ದಿನಾಂಕ 18 ಆಗಸ್ಟ್ 2022 ರಂದು 26 ವಿಷಯಗಳ ಫಲಿತಾಂಶ ಮತ್ತು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಗೊಂಡಿದೆ. ದಿನಾಂಕ 15 ಅಕ್ಟೋಬರ್ 2022 ರಂದು ಅಂತಿಮ ಮೆರಿಟ್ ಪಟ್ಟಿ ಪ್ರಕಟವಾಗಿದೆ. ಮೂಲ ದಾಖಲೆಗಳ ಪರಿಶೀಲನಾ ಕಾರ್ಯ ಪೂರ್ಣಗೊಂಡ ಬಳಿಕ ವಿಷಯವಾರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 30/01/2023ರಂದು ಹೊರಬಂದಿತು. ಹೀಗೆ ಒಟ್ಟು 1242 ಹುದ್ದೆಗಳಲ್ಲಿ 1208 ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಿ, ಈ ಪಟ್ಟಿಯು ದಿನಾಂಕ07/03/2023 ಹಾಗೂ 12-06-2023 ರಂದು ಎರಡು ಹಂತಗಳಲ್ಲಿ ಸರ್ಕಾರಕ್ಕೆ ತಲುಪಿದೆ. ಆದರೆ ಅಲ್ಲಿಂದ ಮುಂದಕ್ಕೆ ಹೋಗುತ್ತಿಲ್ಲ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರ ಬಾಕಿ ಉಳಿದಿರುವ ಆಯ್ಕೆ ಪಟ್ಟಿಯ ಗೆಜೆಟ್, ದಾಖಲಾತಿ ಪರಿಶೀಲನೆ, ಮೆಡಿಕಲ್-ಪೊಲೀಸ್ ವೆರಿಫಿಕೇಶನ್, ಅಂಕಪಟ್ಟಿಗಳ ನೈಜತಾ ಪ್ರಮಾಣ, ಸಿಂಧುತ್ವದಂತಹ ಪ್ರಕ್ರಿಯೆಗಳು ಈಗಾಗಲೇ ಮುಗಿದಿರಬೇಕಾಗಿತ್ತು. ಇವುಗಳು ಇನ್ನೂ ಆರಂಭವಾಗಿಲ್ಲ. ಈಗಲಾದರೂ ಆರಂಭವಾಗಲಿ ಎಂದು ಒತ್ತಾಯಿಸಿದ್ದಾರೆ.

371ಜೆ ಮೀಸಲಾತಿಗೆ ಸಂಬಂಧಿಸಿದಂತೆ ಕೆಲವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರಿಂದ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಆದರೆ ಈ ತರಹದ ಆದೇಶಗಳು ಇದ್ದಾಗ್ಯೂ ಪ್ರಸ್ತುತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ(ಜಿ.ಪಿ.ಎಸ್.ಟಿ.ಆರ್)ಯಲ್ಲಿ ಈಗಾಗಲೇ ಎಲ್ಲಾ ಪ್ರಕ್ರಿಯೆಗಳು ಮುಗಿಸಿ, ಸ್ಥಳನಿಯುಕ್ತಿ ಮತ್ತು ಆದೇಶ ಪತ್ರವನ್ನು ಮಾತ್ರ ತಡೆಹಿಡಿಯಲಾಗಿದೆ. 2017ರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಗೌರವಾನ್ವಿತ ನ್ಯಾಯಾಲಯದ ಅಂತಿಮ ತೀರ್ಪಿನ ನಿಬಂಧನೆಗೆ ಒಳಪಟ್ಟ ಷರತ್ತುಬದ್ಧ ಆದೇಶವನ್ನೂ ನೀಡಲಾಗಿದೆ. ಹೀಗೆ ನಮ್ಮ ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ಕ್ಕೆ ಸಂಬಂಧಿಸಿದ ಬಾಕಿ ಇರುವ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಮುಂದುವರೆಸುವಲ್ಲಿ ಸರ್ಕಾರವು ತನ್ನ ಇಚ್ಚಾಶಕ್ತಿಯನ್ನು ತೋರಬೇಕೆಂದು ಮನವಿ ಮಾಡಿದರು.

ಕೆಲವರಿಂದಾಗಿ ಎದುರಾಗಿರುವ ಕಾನೂನಾತ್ಮಕ ಸಮಸ್ಯೆಯು, ಯಾವುದೇ ಕಾನೂನಾತ್ಮಕ ಸಮಸ್ಯೆಗಳಿಲ್ಲದೆ ಆಯ್ಕೆಯಾಗಿರುವ ಉಳಿದ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ತೊಂದರೆಯಾದಂತೆ, ನ್ಯಾಯ ಒದಗಿಸುವಂತೆ ಕೇಳಿಕೊಳ್ಳುತ್ತಿದ್ದೇವೆ ಎಂದು ಅಭ್ಯರ್ಥಿಗಳು ತಿಳಿಸಿದರು.

ಪ್ರತಿಭಟನಾ ಸ್ಥಳಕ್ಕೆ ಪರಿಷತ್ ಶಾಸಕರಾದ ಬೋಜೆಗೌಡರವರು, ವೈ ಎ ನಾರಾಯಣ ಸ್ವಾಮಿಯವರು,  ಮರಿತಿಬ್ಬೇಗೌಡರವರು, ದೇವೇಗೌಡರವರು ಸೇರಿದಂತೆ ಹಲವು ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ; ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...