Homeಮುಖಪುಟಮಹಿಳಾ ಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿ, ಮೈಕ್ ಕಿತ್ತೆಸೆದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್

ಮಹಿಳಾ ಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿ, ಮೈಕ್ ಕಿತ್ತೆಸೆದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೆಷನ್‌ನ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿ, ಮೈಕ್ ಕಿತ್ತೆಸೆದ ಘಟನೆ ಜರುಗಿದೆ.

ದೆಹಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ ಹಿನ್ನಲೆಯಲ್ಲಿ ಟೈಮ್ಸ್‌ ನೌ ಪತ್ರಕರ್ತೆಯೊಬ್ಬರು ಇಂದು ಬ್ರಿಜ್ ಭೂಷಣ್ ಪ್ರತಿಕ್ರಿಯೆ ಪಡೆಯಲು ಯತ್ನಿಸಿದ್ದರು. ನಿಮಗೆ ಹೇಳಲು ನನ್ನಲ್ಲಿ ಹೇಳಲು ಏನು ಇಲ್ಲ ಎಂದು ಪದೇ ಪದೇ ಬ್ರಿಜ್ ಭೂಷಣ್ ಹೇಳಿದ್ದರು. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಪತ್ರಕರ್ತೆ ಪ್ರಶ್ನಿಸಿದಾಗ ಕುಪಿತನಾದ ಆತ “ನಾನೇಕೆ ರಾಜೀನಾಮೆ ನೀಡುತ್ತೇನೆ? ನೀನೇಕೆ ರಾಜೀನಾಮೆ ಕೇಳುತ್ತಿದ್ದೀಯ? ಚುಪ್ (ಸುಮ್ಮನಿರು) ಎಂದು ಗದರಿದ್ದಾನೆ.

ಆದರೆ ಅಷ್ಟಕ್ಕೆ ಸುಮ್ಮನಾಗದ ಪತ್ರಕರ್ತೆ ಬ್ರಿಜ್ ಭೂಷಣ್ ಕಾರಿನಲ್ಲಿ ಕುಳಿತಾಗಲೂ ಈ ರೀತಿಯಾಗಿ ವರ್ತಿಸುವುದು ಸರಿಯೇ ಎಂದು ಮೈಕ್ ಹಿಡಿದು ಪ್ರಶ್ನಿಸಿದರು. ಆಗ ಮೈಕ್ ಕಿತ್ತೆಸೆದು ಬ್ರಿಜ್ ಭೂಷನ್ ಉದ್ದಟತನ ಮೆರೆದಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಪತ್ರಕರ್ತೆಯೊಂದಿಗೆ ಇಂದಿನ ಬ್ರಿಜ್ ಭೂಷಣ್ ಸಿಂಗ್‌ರವರ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. “ಬ್ರಿಜ್ ಭೂಷಣ್ ಕುಸ್ತಿಪಟು ಹೆಣ್ಣು ಮಕ್ಕಳಿಗೆ ಹೇಗೆ ತಾನೇ ಲೈಂಗಿಕ ಕಿರುಕುಳ ನೀಡಲು ಸಾಧ್ಯ ಎಂದು ಪ್ರಶ್ನಿಸುವವರು ಈ ವಿಡಿಯೋವನ್ನು ನೋಡಲೇಬೇಕು?” ಎಂಬ ಶೀರ್ಷಿಕೆಯೊಂದಿಗೆ ಹಲವಾರು ಜನ ವಿಡಿಯೋ ಟ್ವೀಟ್ ಮಾಡಿದ್ದಾರೆ.

“ಕೆಲವರು ಕೆಟ್ಟ ಸ್ವಭಾವದವರು. ಸರ್ಕಾರ ನಮ್ಮದು ಎಂದು ಇವರ ದುರಹಂಕಾರ ನೋಡಿ. ಇವರನ್ನು ತಲೆ ಮೇಲೆ ಹೊತ್ತು ಮೆರೆಸಿದ ಮಾಧ್ಯಮಗಳು ಇಂದು ಅವರಿಗೇ ಹಿಡಿಶಾಪ ಹಾಕುತ್ತಿವೆ. ಸಾರ್ವಜನಿಕರು ಎಲ್ಲವನ್ನೂ ಅರ್ಥಮಾಡಿಕೊಳ್ಳುತ್ತಾರೆ, ಸಾರ್ವಜನಿಕರು ಉತ್ತರಿಸುತ್ತಾರೆ. ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಲಿ!” ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

“ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹೊತ್ತಿರುವ ಬಿಜೆಪಿ ಸಂಸದರೊಬ್ಬರು ಮಹಿಳಾ ಪತ್ರಕರ್ತೆಗೆ ಕ್ಯಾಮರಾ ಎದುರೇ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಆಕೆಯ ಮೈಕ್ ಮುರಿದಿದ್ದಾರೆ. ಇದು ಯಾರ ಮಾತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರು ಹೇಳಬಹುದೇ? ಇದು ಯಾರ ಸಂಸ್ಕಾರ?” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಪ್ರಶ್ನಿಸಿದ್ದಾರೆ.

“ನಾನು ಇದನ್ನು ಪುನರಾವರ್ತಿಸುತ್ತೇನೆ. ಬ್ರಿಜ್ ಭೂಷಣ್ ಸಿಂಗ್ ಒಬ್ಬ ಗೂಂಡಾ. ಕ್ಯಾಮರಾ ಎದುರು ಮಹಿಳಾ ವರದಿಗಾರರೊಂದಿಗೆ ಈ ರೀತಿ ವರ್ತಿಸುವ ಧೈರ್ಯವಿರುವಾಗ, ಕ್ಯಾಮೆರಾದ ಹೊರಗೆ ಮಹಿಳೆಯರೊಂದಿಗೆ ಅವನು ಹೇಗೆ ವರ್ತಿಸಬೇಕು ಎಂದು ಊಹಿಸಿ! ಈ ಮನುಷ್ಯ ಇರಬೇಕಾದುದ್ದು ಸಂಸತ್ತಿನಲ್ಲಿ ಅಲ್ಲ ಜೈಲಿನಲ್ಲಿ!” ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಕಿಡಿಕಾರಿದ್ದಾರೆ.

ಇದನ್ನೂ ಓದಿ; ಲೈಂಗಿಕ ಕಿರುಕುಳವೆಸಗಿದ ಬ್ರಿಜ್ ಭೂಷಣ್ ವಿರುದ್ಧ ಕಾನೂನು ಕ್ರಮ ಜರುಗಿಸಿ: ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....